6 C
London
Wednesday, April 24, 2024
Homeಕ್ರಿಕೆಟ್ಜನನಿ ಹೊಸಕೋಟೆ ತಂಡಕ್ಕೆ ಸ್ನೇಹಲೋಕ M.T.B ದಸರಾ ಕಪ್

ಜನನಿ ಹೊಸಕೋಟೆ ತಂಡಕ್ಕೆ ಸ್ನೇಹಲೋಕ M.T.B ದಸರಾ ಕಪ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಸ್ನೇಹಲೋಕ ಹೊಸಕೋಟೆ ಇವರ ಆಶ್ರಯದಲ್ಲಿ 5 ನೇ ಬಾರಿಗೆ ಹೊಸಕೋಟೆಯಲ್ಲಿ ನಡೆದ “ಸ್ನೇಹ ಲೋಕ M.T.B ದಸರಾ ಕಪ್ ನ್ನು ಜನನಿ ಹೊಸಕೋಟೆ ತಂಡ ಗೆದ್ದುಕೊಂಡಿತು.

2 ದಿನಗಳ ಕಾಲ ಹಗಲಿನಲ್ಲಿ ನಡೆದ ಪಂದ್ಯಾಕೂಟದಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದ ಕುತೂಹಲಕಾರಿ ಪಂದ್ಯಗಳ ಬಳಿಕ,ಜನನಿ ತಂಡ ಸಿ‌.ಸಿ.ಸಿ ಹೊಸಕೋಟೆ ತಂಡವನ್ನು ಹಾಗೂ ಮೈಟಿ ಬೆಂಗಳೂರು ತಂಡ ಸಾಯಿ ಕ್ರಿಕೆಟರ್ಸ್ ಕೆ.ಆರ್.ಪುರಂ ತಂಡವನ್ನು ಸೋಲಿಸಿ ಫೈನಲ್ ಗೆ ತೇರ್ಗಡೆಗೊಂಡಿದ್ದರು.

ಅಂತಿಮವಾಗಿ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮೈಟಿ ತಂಡವನ್ನು, ಜನನಿಯ ಮಾರ್ಕ್ ಮಹೇಶ್ ಮೇಡನ್ ಓವರ್ ಸಾಹಸದಿಂದ ಅಲ್ಪ ಮೊತ್ತಕ್ಕೆ ಅದುಮಿ,ನೀಡಿದ್ದ ಗುರಿಯನ್ನು ಅನಾಯಾಸವಾಗಿ ಚೇಸ್ ಮಾಡಿ ವಿಜಯಿಯಾಯಿತು.

ಹೊಸಕೋಟೆ ನಗರಪಾಲಿಕೆ ಸದಸ್ಯರು ಹಾಗೂ ಜನನಿ ಚಾರಿಟೇಬಲ್ ಟ್ರಸ್ಟ್ ನ ಮಾಲೀಕರಾದ ಶ್ರೀ ಜಯರಾಜ್ ನೇತೃತ್ವದ ಜನನಿ ತಂಡವನ್ನು 90 ರ ದಶಕದ ಶ್ರೇಷ್ಠ ತಂಡದ ಲೆಗ್ ಸ್ಪಿನ್ ಮಾಂತ್ರಿಕ ಗುರುಬ್ರಹ್ಮದ ಕೃಷ್ಣಮೂರ್ತಿಯವರು ಮುನ್ನಡೆಸಿದ್ದರು ಹಾಗೂ
ಜನನಿ ತಂಡದಲ್ಲಿ ಜೈ ಕರ್ನಾಟಕದ ಆಟಗಾರರು ಪ್ರತಿನಿಧಿಸಿದ್ದರು.

ವಿಜಯಿ ತಂಡ 50,000ನಗದು ಹಾಗೂ ರನ್ನರ್ಸ್ ತಂಡ 25,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಪಂದ್ಯಾಕೂಟದ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಮೈಟಿಯ ಮಂಜು, ಫೈನಲ್ ನ ಪಂದ್ಯಶ್ರೇಷ್ಟ ಹಾಗೂ ಬೆಸ್ಟ್ ಬೌಲರ್ ಮಾರ್ಕ್ ಮಹೇಶ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜನನಿಯ ಮೊಹ್ಸಿನ್ ಪಡೆದುಕೊಂಡರು.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಯಾಸೀನ್ ನೇತೃತ್ವದ Y ಸ್ಪೋರ್ಟ್ಸ್ ಬಿತ್ತರಿಸಿದರೆ,ರಾಜ್ಯದ ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ವೀಕ್ಷಕ ವಿವರಣೆಯ ಸಾರಥ್ಯವನ್ನು ವಹಿಸಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

ten − 9 =