ಕ್ರಿಕೆಟ್ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟಕ್ಕೇರಿದ ಹುಬ್ಬಳ್ಳಿ ಟೈಗರ್ಸ್

ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟಕ್ಕೇರಿದ ಹುಬ್ಬಳ್ಳಿ ಟೈಗರ್ಸ್

-

- Advertisment -spot_img
ಮಹಾರಾಜ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ಹಾಗೂ ಮೈಸೂರ್ ವಾರಿಯರ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಾಟ ನಡೆಸಿದವು.
ಚಿನ್ನಸ್ವಾಮಿಯ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಮಹಾ ಫೈನಲ್ ನ ಸೆಣಸಾಟದಲ್ಲಿ ಮೈಸೂರ್ ವಾರಿಯರ್ಸ್  ವಿರುದ್ಧ ಹುಬ್ಬಳ್ಳಿ ಟೈಗರ್ಸ್  ತಂಡ ಗೆದ್ದು ಜಯಭೇರಿ ಬಾರಿಸಿದೆ. ದಿಟ್ಟ ಹೋರಾಟ ತೋರಿಸಿದ  ಮೈಸೂರ್ ವಾರಿಯರ್ಸ್  8 ರನ್‌ಗಳ ಅಂತರದಿಂದ ಸೋಲನ್ನೊಪ್ಪಿ ರನ್ನರ್ ಅಪ್ ಗೆ ತೃಪ್ತಿಪಡಬೇಕಾಯಿತು.
ಮೊದಲು ಬ್ಯಾಟಿಂಗ್ ಮಾಡಿದ  ಹುಬ್ಬಳ್ಳಿ  ಟೈಗರ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ  204 ರನ್‌ಗಳ ಗುರಿ  ಮೈಸೂರ್ ವಾರಿಯರ್ಸ್ ಗೆ ನೀಡಿತು. ಈ ಗುರಿ ಬೆನ್ನಟ್ಟಿದ ಮೈಸೂರ್ ವಾರಿಯರ್ಸ್ ಉತ್ತಮ ಆರಂಭವನ್ನು ಪಡಕೊಂಡು ಮೊದಲ ವಿಕೆಟ್‌ಗೆ 57 ರನ್‌ಗಳ ಜೊತೆಯಾಟ ಬಂದಿತ್ತು. ಆರಂಭಿಕ ಆಟಗಾರ ಆರ್ ಸಮರ್ಥ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 63 ರನ್‌ಗಳನ್ನುಗಳಿಸಿದರು.  ನಾಯಕ ಕರುಣ್ ನಾಯರ್ ಮತ್ತೊಮ್ಮೆ  ಆರ್ಭಟ ತೋರುವ ಸೂಚನೆ ನೀಡಿದ್ದರು. ಆದರೆ 20 ಎಸೆತಗಳ ಮುಂದೆ 37 ರನ್‌ಗಳಿಸಿದ್ದ ಸಂದರ್ಭ  ಕರಿಯಪ್ಪ  ಔಟ್ ಮಾಡುವಲ್ಲಿ ಯಶಸ್ವಿಯಾದರು. ಕೆಳ ಕ್ರಮಾಂಕದ ಬ್ಯಾಟರ್ಸ್ ಗಳಿಂದ ನಿರೀಕ್ಷಿತ ಪ್ರದರ್ಶನ ಬಾರದೇ ಇದ್ದ ಕಾರಣ ವಾರಿಯರ್ಸ್  ದಾಂಡಿಗರು ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಬೇಕಾಯಿತು. ಅಂತಿಮವಾಗಿ  ಕೊನೆಯ ಓವರ್‌ವರೆಗೂ ಸಾಗಿದ  ರಣರೋಚಕ ಕದನದಲ್ಲಿ  ಮೈಸೂರ್ ವಾರಿಯರ್ಸ್  8 ರನ್‌ಗಳ  ಹಿನ್ನಡೆಯಿಂದಾಗಿ  ಮನೀಶ್ ಪಾಂಡೆ ನೇತೃತ್ವದ  ಹುಬ್ಬಳ್ಳಿ ಟೈಗರ್ಸ್  ಮಹಾರಾಜ ಟ್ರೋಫಿ 2023ರ ಚಾಂಪಿಯನ್ ಆಗಿ  ಹೊರಹೊಮ್ಮುವಂತಾಯಿತು.
ಕರುಣ್ ನಾಯರ್ ನೇತೃತ್ವದ ಮೈಸೂರ್ ವಾರಿಯರ್ಸ್ ತಂಡ ಸೆಮಿಫೈನಲ್‌ನಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಕರುಣ್ ನಾಯರ್ ಅವರ ಸ್ಪೋಟಕ ಶತಕದಿಂದಾಗಿ ಸೆಮಿಫೈನಲ್‌ನಲ್ಲಿ ಭಾರೀ ಅಂತರದಿಂದ ಜಯಗಳಿಸಿತ್ತು. ಮತ್ತೊಂದೆಡೆ ಹುಬ್ಬಳ್ಳಿ ಟೈಗರ್ಸ್ ತಂಡ ಶಿವಮೊಗ್ಗ ತಂಡದ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು  ಫೈನಲ್‌ ಕಣಕ್ಕಿಳಿದಿದ್ದಎರಡೂ ತಂಡಗಳು ಕೂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ ತಂಡಗಳಾಗಿದ್ದರಿಂದ ಕೊನೆಯ ಓವರ್‌ವರೆಗೂ ಜಿದ್ದಾಜಿದ್ದಿನ ಕದನ ನಡೆದಿತ್ತು.  ಅಂತಿಮವಾಗಿ ಹುಬ್ಬಳ್ಳಿ ಟೈಗರ್ಸ್ ತಂಡ 8 ರನ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಅನಿಸಿಕೊಂಡಿತು.
ಸುರೇಶ್ ಭಟ್ ಮೂಲ್ಕಿ
ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 + 7 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you