ಕ್ರಿಕೆಟ್ಮೈಸೂರು ಮಹಾರಾಜಾಸ್ ಮಡಿಲಿಗೆ ಅಂಚೆಪಾಳ್ಯ ಪ್ರೀಮಿಯರ್ ಲೀಗ್ ಸೀಸನ್-4 ಟ್ರೋಫಿ

ಮೈಸೂರು ಮಹಾರಾಜಾಸ್ ಮಡಿಲಿಗೆ ಅಂಚೆಪಾಳ್ಯ ಪ್ರೀಮಿಯರ್ ಲೀಗ್ ಸೀಸನ್-4 ಟ್ರೋಫಿ

-

- Advertisment -spot_img

ಬೆಂಗಳೂರು  : ಕನ್ನಡ ಭಾಷೆ, ಸಂಸ್ಕೃತಿಯ ರಾಯಭಾರಿ ಸಂಸ್ಥೆ ಜೈ ಭುವನೇಶ್ವರಿ ಯುವಕರ ಸಂಘ ಅಂಚೆಪಾಳ್ಯ ಬೆಂಗಳೂರು ಇವರ ಆಶ್ರಯದಲ್ಲಿ, ಹಿರಿಯ ಶ್ರೀನಿವಾಸ್.ಟಿ ಹಾಗೂ ಚಿಕ್ಕಣ್ಣರವರ ದಕ್ಷ ಸಾರಥ್ಯದಲ್ಲಿ ಮೂರು ದಿನಗಳ ಕಾಲ ನಡೆದ ಹೊನಲು ಬೆಳಕಿನ ಪಂದ್ಯಾಕೂಟವನ್ನು ದೊಡ್ಮನೆ ಹುಡುಗ D.H.P.L ಖ್ಯಾತಿಯ ಆಕಾಶ್ ಗೌಡರ ಸಾರಥ್ಯದ ಮೈಸೂರು ಮಹಾರಾಜಾಸ್ ತಂಡ ಗೆದ್ದುಕೊಂಡಿತು.

6 ಫ್ರಾಂಚೈಸಿಗಳು ಸ್ಪರ್ಧಿಸಿದ್ದ ಈ ಪಂದ್ಯಾಟದಲ್ಲಿ ಲೀಗ್ ಹಂತದಲ್ಲಿ ಒಂದೊಂದು ತಂಡಗಳು ಪರಸ್ಪರ 5 ಬಾರಿ ಮುಖಾಮುಖಿ ಹೋರಾಟಕ್ಕಿಳಿದಿದ್ದರು. ಅಂತಿಮವಾಗಿ ಮೈಸೂರು ಮಹಾರಾಜಾಸ್,ಕೃಷ್ಣ ದೇವರಾಯ ತಂಡವನ್ನು ಸೋಲಿಸಿ, ಮಯೂರ ಬಾಯ್ಸ್ ತಂಡ ವಿಷ್ಣುವರ್ಧನ್ ತಂಡವನ್ನು ಸೋಲಿಸಿ‌ ಫೈನಲ್ ಗೆ ನೆಗೆದೇರಿದ್ದವು. ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮಯೂರ ತಂಡ 8 ಓವರ್ ನಲ್ಲಿ ನೀಡಿದ 42 ರನ್ ಗಳ ಗುರಿಯನ್ನು ಮೈಸೂರು ಮಜಾರಾಜಾಸ್ ತಂಡ ಕೇವಲ 5.2 ಓವರ್ ಗಳಲ್ಲಿ ಚೇಸ್ ಮಾಡಿ ಚಾಂಪಿಯನ್ ಪಟ್ಟ ಪಡೆಯಿತು.

ಪಂದ್ಯಾಟದ ಬೆಸ್ಟ್ ಬ್ಯಾಟ್ಸ್‌ಮನ್,ಬೆಸ್ಟ್ ಬೌಲರ್ ಮಯೂರ ಬಾಯ್ಸ್ ನ ವರುಣ್ ಹಾಗೂ ಕಿರಣ್ ಪಾಲಾದರೆ,ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಹಿರಿಯ ಆಟಗಾರ ಶೇಖರ್.ಟಿ(ಚಮಕ್) ಪಡೆದುಕೊಂಡರು.ಮೈಸೂರು ಮಹಾರಾಜಾಸ್ ನ ಹರೀಶ್ ಬೆಸ್ಟ್ ಕ್ಯಾಪ್ಟನ್ ಹಾಗೂ
14 ವರ್ಷ ಪ್ರಾಯದ ಡೇವಿಡ್ ಪಂದ್ಯಾವಳಿಯುದ್ದಕ್ಕೂ ಗಮನಾರ್ಹ ನಿರ್ವಹಣೆ ನೀಡಿ ಭವಿಷ್ಯದ ಭರವಸೆಯ ಆಟಗಾರನಾಗಿ ಮೂಡಿಬಂದರು.

ಪ್ರಮುಖವಾಗಿ ಹಿರಿಯ ಆಟಗಾರರಿಗೆ ಮೀಸಲಾಗಿದ್ದ ಈ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ಮಹಾರಾಜಾಸ್ ಪರವಾಗಿ ಆಡಿದ ಸ್ಥೂಲ ಕಾಯದ ಫ್ರೆಂಡ್ಸ್ ಬೆಂಗಳೂರಿನ ಮಾಜಿ ಆಟಗಾರ ಬಿ.ಟಿ.ಶ್ರೀನಿವಾಸ್ ರವರ ಅದ್ಭುತ ಕ್ಯಾಚ್ ಹಾಗೂ ಚಮಕ್ ನ ಮಾಜಿ ಆಲ್ ರೌಂಡರ್ ಶೇಖರ್.ಟಿ ಅತ್ಯುತ್ತಮ ನಿರ್ವಹಣೆ ತೋರಿ ಗತಕಾಲದ ಟೆನ್ನಿಸ್ ಕ್ರಿಕೆಟ್ ವೈಭವನ್ನು ಮತ್ತೆ ನೆನಪಿಸಿದರು.

ಅಂಚೆಪಾಳ್ಯದ ವೃತ್ತ ನಿರೀಕ್ಷಕ ಸತ್ಯನಾರಾಯಣ ರವರು ವಿಷ್ಣುವರ್ಧನ ಇಲೆವೆನ್ಸ್ ತಂಡದ ಪರವಾಗಿ ಆಡಿ ಪಂದ್ಯಾವಳಿಯ ಮೆರುಗನ್ನು ಹೆಚ್ಚಿಸಿದ್ದರು.

ಅಂಚೆಪಾಳ್ಯ ಪ್ರೀಮಿಯರ್ ಲೀಗ್ ನ ಕಳೆದ ಋತುವಿನ ಆವೃತ್ತಿಯ ಚಾಂಪಿಯನ್ ಒಡೆಯರ್ ತಂಡವನ್ನು ಮುನ್ನಡೆಸಿದ್ದ ಟೆನ್ನಿಸ್ ಕ್ರಿಕೆಟ್ ಇತಿಹಾಸದ ದಾಖಲೆಯ ಪಂದ್ಯಾವಳಿ D.H.P.L ಖ್ಯಾತಿಯ ದೊಡ್ಮನೆ ಹುಡುಗ ಆಕಾಶ್ ಗೌಡ ಈ ಬಾರಿ ಮೈಸೂರು ಮಹಾರಾಜಾಸ್ ತಂಡಕ್ಕೆ ಚಾಂಪಿಯನ್ ಪಟ್ಟ ತೊಡಿಸಿ 2 ನೇ ಬಾರಿ ದೊಡ್ಮನೆಗೆ ಟ್ರೋಫಿ ತಂದಿತ್ತಿದ್ದಾರೆ, ರನ್ನರ್ಸ್ ಮಯೂರ ಬಾಯ್ಸ್ ತಂಡವನ್ನು ಗಿರೀಶ್ ಕುಮಾರ್ ರವರು ಮುನ್ನಡೆಸಿದ್ದರು.

ಆರ್‌.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − 11 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you