Categories
ಕ್ರಿಕೆಟ್

ಮಲ್ಪೆ ರಿಯಲ್ ಫೈಟರ್ಸ್ ತಂಡಕ್ಕೆ ಶಾಮನೂರು ಡೈಮಂಡ್ ಕಪ್

ದಾವಣಗೆರೆ : ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಮುಕ್ತಾಯಗೊಂಡ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನಿಸ್‍ಬಾಲ್ (ಲೀಗ್ ಕಂ ನಾಟೌಟ್) ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲೆಯ ಮಲ್ಪೆಯ ರಿಯಲ್ ಫೈಟರ್ಸ್ ತಂಡ ಶಾಮನೂರು ಡೈಮಂಡ್ ಕ‍ಪ್‌ ಅನ್ನು ಪಡೆದುಕೊಂಡಿತು.

ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿಗಾಗಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್‌ವತಿಯಿಂದ ನಡೆದ ಈ ಟೂರ್ನಿಯಲ್ಲಿ ರಿಯಲ್ ಫೈಟರ್ಸ್ ತಂಡ ಬೆಂಗಳೂರಿನ ನ್ಯಾಶ್ ತಂಡವನ್ನು 15 ರನ್‌ಗಳಿಂದ ಮಣಿಸುವ ಮೂಲಕ ಕಪ್‌ ಅನ್ನು ತನ್ನದಾಗಿಸಿಕೊಂಡಿತು.

ಅಂತಿಮ ಪಂದ್ಯದಲ್ಲಿ ನ್ಯಾಶ್ ತಂಡ ರನ್ನರ್ ಆಪ್ ಶಿವಗಂಗಾ ಕಪ್ ಅನ್ನು ಪಡೆಯಿತು. ಸೆಮಿಫೈನಲ್ ಪ್ರವೇಶಿಸಿದ ದಾವಣಗೆರೆ ಹೀರೊ ತಂಡ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಭಾನುವಾರ ರಾತ್ರಿ ತುಂತುರು ಮಳೆಯ ಮಧ್ಯೆಯೂ ಸಾವಿರಾರು ಕ್ರೀಡಾಭಿಮಾನಿಗಳು ಫೈನಲ್ ಪಂದ್ಯವನ್ನು ವೀಕ್ಷಿಸಿದರು.

ಆಫಿಷಿಯಲ್ ಕಪ್‍ಗಾಗಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲಾ ಪೊಲೀಸ್ ತಂಡ ವರ್ತಕರ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನ ಪಡೆಯಿತು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

seventeen − 12 =