ಕ್ರಿಕೆಟ್ಇನ್ನೂ ಈ ಹುಡುಗನನ್ನು ಆಡಿಸದಿದ್ದರೆ ನಿಮ್ಮನ್ನು ದೇವರೂ ಕ್ಷಮಿಸಲಾರ..!

ಇನ್ನೂ ಈ ಹುಡುಗನನ್ನು ಆಡಿಸದಿದ್ದರೆ ನಿಮ್ಮನ್ನು ದೇವರೂ ಕ್ಷಮಿಸಲಾರ..!

-

- Advertisment -spot_img

ಕ್ರಿಕೆಟ್ “ಸಿಟಿ ಹುಡುಗರ ಆಟ” ಎಂಬ ಮಾತನ್ನು ಹಳ್ಳಿ ಹುಡುಗರು ಪದೇ ಪದೇ ಸುಳ್ಳಾಗಿಸುತ್ತಲೇ ಬಂದಿದ್ದಾರೆ. ಹಳ್ಳಿ ಹುಡುಗರ ತಾಕತ್ತು ಎಂಥದ್ದು ಎಂಬುದಕ್ಕೆ ರಾಂಚಿಯಿಂದ ಬಂದ ಧೋನಿ ಭಾರತಕ್ಕೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಸಾಧನೆಯೇ ಸಾಕು.

ಗದಗದಿಂದ ಬಂದ ಸುನೀಲ್ ಜೋಶಿ ಭಾರತ ಪರ 84 ಅಂತರಾಷ್ಟ್ರೀಯ ಪಂದ್ಯಗಳನ್ನಾಡುತ್ತಾರೆ. ದಾವಣಗೆರೆಯ ಆಟೋ ರಿಕ್ಷಾ ಚಾಲಕರೊಬ್ಬರ ಮಗ ವಿನಯ್ ಕುಮಾರ್ ಕರ್ನಾಟಕದ ಸರ್ವಶ್ರೇಷ್ಠ ರಣಜಿ ಹೀರೋ ಆಗಿ ಹೆಸರು ಮಾಡುತ್ತಾರೆ.. ಅಷ್ಟೇ ಅಲ್ಲ, ದೇಶವನ್ನೂ ಪ್ರತಿನಿಧಿಸುತ್ತಾರೆ. ಇದು ನಮ್ಮ ಹಳ್ಳಿ ಹುಡುಗರ ಶಕ್ತಿ ಮತ್ತು ತಾಕತ್ತು. ಅಂಥಾ ತಾಕತ್ತಿನ ಮತ್ತೊಬ್ಬ ಹಳ್ಳಿ ಪ್ರತಿಭೆ ಎದ್ದು ಬಂದಿದ್ದಾನೆ. ಸದ್ದು ಮಾಡುತ್ತಿದ್ದಾನೆ.. ಅವಕಾಶವನ್ನೇ ನೀಡದೆ ಖಾಲಿ ಕೂರಿಸಿ ಸದ್ದೇ ಇಲ್ಲದಂತೆ ಮಾಡಿದವರಿಗೆ ಆಟದಿಂದಲೇ ಉತ್ತರ ಕೊಡುತ್ತಿದ್ದಾನೆ.

ಹೆಸರು ಮನೋಜ್ ಭಾಂಡಗೆ.. ರಾಯಚೂರಿನ ಹುಡುಗ.. Pocket dynamo. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್’ನಂತೆ ಬಲಗೈ ಮಧ್ಯಮ ವೇಗಿ, ಎಡಗೈ ದಾಂಡಿಗ.. ದೊಡ್ಡ ದೊಡ್ಡ ಸಿಕ್ಸರ್’ಗಳನ್ನು ಬಾರಿಸುವ ಸಿಡಿಲ ಹೊಡೆತಗಳ ಆಟಗಾರ. He is one of the clean strikers of the cricket ball.

ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಆಡಿದ ಮೊದಲ ಎರಡೂ ಪಂದ್ಯಗಳಲ್ಲಿ ಭಾಂಡಗೆ ಆಟವನ್ನು ನೋಡಿದವರು, ಆರ್’ಸಿಬಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಶಿವಮೊಗ್ಗ ವಿರುದ್ಧ 16 ಎಸೆತಗಳಲ್ಲಿ 42 ನಾಟೌಟ್.. ಬೆಂಗಳೂರು ವಿರುದ್ಧ 33 ಎಸೆತಗಳಲ್ಲಿ ಅಜೇಯ 58.
ಈ ಆರ್’ಸಿಬಿಯವರು ಇಡೀ 2 ವರ್ಷ ತಂಡದಲ್ಲಿಟ್ಟುಕೊಂಡು ಒಂದೂ ಅವಕಾಶ ನೀಡಲಿಲ್ಲವಲ್ಲಾ ಈ ಹುಡುಗನಿಗೆ..?

ಮನೋಜ್ ಭಾಂಡಗೆಗೆ ಐಪಿಎಲ್’ನಲ್ಲಿ ಬೆಂಚ್ ಕಾಯಿಸುವುದನ್ನು ಬಿಟ್ಟು ಒಂದೆರಡು ಅವಕಾಶ ನೀಡಿದ್ದರೆ, #rcb ತಂಡ ಕಳೆದುಕೊಳ್ಳುವಂಥದ್ದೇನಿತ್ತು..? ಅದ್ಯಾರೋ ಪ್ರಭುದೇಸಾಯಿ, ಅನುಜ್ ರಾವತ್’ನಂಥಾ ಯಾರೋ ಕೆಲಸಕ್ಕೆ ಬಾರದ ಆಟಗಾರರನ್ನು ಬೆಳೆಸುವ ಬದಲು ನಮ್ಮ ಈ ಹುಡುಗನನ್ನು ಬೆಳೆಸಿದ್ದರೆ ಆರ್’ಸಿಬಿ ತಂಡಕ್ಕೆ ಆಸ್ತಿಯಾಗುತ್ತಿದ್ದ.

ಆರ್’ಸಿಬಿ ಟೀಮ್ ಮ್ಯಾನೇಜ್ಮೆಂಟ್’ಗೆ ಒಂದೇ ಒಂದು ಮನವಿ.. ದಯವಿಟ್ಟು ಈ ಮನೋಜ್ ಭಾಂಡಗೆಯನ್ನು ತಂಡದಲ್ಲಿ ಉಳಿಸಿಕೊಳ್ಳಬೇಡಿ.. ನೀವು ಅವನನ್ನು ತಂಡದಿಂದ ರಿಲೀಸ್ ಮಾಡಿದರೆ, ಇನ್ಯಾವುದೋ ತಂಡವನ್ನು ಸೇರಿಕೊಳ್ಳುತ್ತಾನೆ. ಅಲ್ಲಿ ಆತನ ಪ್ರತಿಭೆಗೆ ಬೆಲೆ ಸಿಕ್ಕೇ ಸಿಗುತ್ತದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೂ ಒಂದು ಮನವಿ.. ಈ ಹುಡುಗನನ್ನು ಈ ಬಾರಿ ರಣಜಿ ಟ್ರೋಫಿಯಲ್ಲಿ ಆಡಿಸಿ ಪುಣ್ಯ ಕಟ್ಟಿಕೊಳ್ಳಿ. ಇಲ್ಲವಾದರೆ, ಮತ್ತೊಬ್ಬ ಪ್ರತಿಭಾವಂತನನ್ನು ಕರ್ನಾಟಕ ಕಳೆದುಕೊಳ್ಳಬೇಕಾಗುತ್ತದೆ.

LEAVE A REPLY

Please enter your comment!
Please enter your name here

5 × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you