ಕ್ರಿಕೆಟ್ಮಂಗಳೂರು ನೆಹರೂ ಮೈದಾನದಲ್ಲಿ ಇಂದಿನಿಂದ ಮಾರುತಿ ಟ್ರೋಫಿ ಅಖಿಲ ಭಾರತ ಮಟ್ಟದ...

ಮಂಗಳೂರು ನೆಹರೂ ಮೈದಾನದಲ್ಲಿ ಇಂದಿನಿಂದ ಮಾರುತಿ ಟ್ರೋಫಿ ಅಖಿಲ ಭಾರತ ಮಟ್ಟದ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಮಂಗಳೂರು-ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಾ ನಿರತ ಸಂಸ್ಥೆ ಮಾರುತಿ ಕ್ರಿಕೆಟರ್ಸ್ ಮತ್ತು ಮಾರುತಿ ಯುವಕ ಮಂಡಲ(ರಿ) ಇವರ ಆಶ್ರಯದಲ್ಲಿ ಅಗಲಿದ ಮಿತ್ರರ ಸ್ಮರಣಾರ್ಥ ಹಾಗೂ 35  ನೇ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಭಾರತ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಮ್ಮಿಕೊಂಡಿದ್ದು,ಇಂದಿನಿಂದ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ ಪ್ರಾರಂಭವಾಗಲಿದೆ.
ಬುಧವಾರ ಬೆಳಿಗ್ಗೆಯಿಂದಲೇ ಮಂಗಳೂರು ನೆಹರೂ ಮೈದಾನದಲ್ಲಿ ನಡೆದ ಮೊಗವೀರ ಪ್ರೀಮಿಯರ್ ಲೀಗ್ ಪಂದ್ಯಾಟದಲ್ಲಿ ರಿಯಲ್ ಫೈಟರ್ಸ್ ಮಲ್ಪೆ ಮತ್ತು ಮೊಗವೀರ ಇಲೆವೆನ್ ಉಳ್ಳಾಲ ಫೈನಲ್ ಪ್ರವೇಶಿಸಿದೆ.
ಇಂದು ಫೆಬ್ರವರಿ 17 ಶುಕ್ರವಾರದಿಂದ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಚಾಲನೆ ದೊರಕಿದ್ದು,ಒಟ್ಟು 16 ತಂಡಗಳು ಭಾಗವಹಿಸಲಿದೆ.ಮೊದಲ ಪಂದ್ಯದಲ್ಲಿ ರಾಮಾಂಜನೇಯ ಗುಡ್ಡೆಕೊಪ್ಲ-ಆರ್.ಕೆ ಗುಡ್ಡೆಕೊಪ್ಲ ತಂಡವನ್ನು ಮಣಿಸಿತ್ತು.ದ್ವಿತೀಯ ಪಂದ್ಯದಲ್ಲಿ ಜೈಹಿಂದ್ ಶಿವಮೊಗ್ಗ-ಫ್ರೆಂಡ್ಸ್ ಕೋಡಿ ಹಾಗೂ ಮೂರನೇ ಪಂದ್ಯದಲ್ಲಿ ಜಾನ್ಸನ್ ಕುಂದಾಪುರ-ಆಜಾದ್ ಕಲ್ಲಾಪು  ತಂಡವನ್ನು ಎದುರಿಸಲಿದ್ದು ಒಟ್ಟು 8 ಪಂದ್ಯಗಳು ನಡೆಯಲಿದೆ.16 ತಂಡಗಳು ರೌಂಡ್ ರಾಬಿನ್ ಲೀಗ್ ಮಾದರಿಯಲ್ಲಿ ಸೆಣಸಾಡಲಿದೆ.ಪ್ರತಿ ಬಣದಲ್ಲಿ 4 ತಂಡಗಳಿದ್ದು,ಆ ತಂಡಕ್ಕೆ 2 ಲೀಗ್ ಆಡಲು ಅವಕಾಶವಿದ್ದು,  ಒಂದು ಗ್ರೂಪಿಂದ 2 ತಂಡಗಳು ಕ್ವಾರ್ಟರ್ ಫೈನಲ್ ಹಂತಕ್ಕೆ ತೇರ್ಗಡೆಯಾಗಲಿದೆ.ಕ್ವಾರ್ಟರ್ ಫೈನಲ್ ವಿಜೇತ ತಂಡಗಳ ನಡುವೆ ಅದೃಷ್ಟ ಚೀಟಿಯ ಮೂಲಕ ಸೆಮಿಫೈನಲ್ ಮುಖಾಮುಖಿ ನಿರ್ಧರಿಸಲಾಗುತ್ತದೆ.
*ಸಂಜೆ ವರ್ಣರಂಜಿತ ಉದ್ಘಾಟನಾ ಸಮಾರಂಭ ಮತ್ತು ಸಹಾಯಧನ ವಿತರಣಾ ಸಮಾರಂಭ*
ಇಂದು ಸಂಜೆ 6.30 ಸರಿಯಾಗಿ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ವಿಧ್ಯುಕ್ತ ಚಾಲನೆ ದೊರಕಲಿದೆ.ದ.ಕ ಜಿಲ್ಲೆ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಐ.ಪಿ.ಎಸ್ ಇವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ‌.ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಟ್ರೋಫಿ ಅನಾವರಣಗೊಳಿಸಲಿದ್ದು,
ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶಪಾಲ್.ಎ.ಸುವರ್ಣ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.ಉಳ್ಳಾಲ ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್,ಬೆಣ್ಣೆಕುದ್ರು ಕುಲಮಾಸ್ತಿ ಅಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಆನಂದ.ಸಿ.ಕುಂದರ್,ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಜಯಾನಂದ ಅಂಚನ್,ನಿವೃತ್ತ ಸುಪೀರಿಡೆಂಟ್ ಆಫ್ ಪೊಲೀಸ್ ಜಯಂತ್.ವಿ.ಶೆಟ್ಟಿ, ಸಾಯಿನಾಥ್ ಫಿಶರೀಸ್ ನ ಆಡಳಿತ ನಿರ್ದೇಶಕರಾದ ಆನಂದ ಸುವರ್ಣ ಮಲ್ಪೆ,ಮಲ್ಪೆ ಮೀನು ಮಾರಾಟ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಸಾಧು ಸಾಲ್ಯಾನ್,ಉಳ್ಳಾಲ ಸೈಯದ್ ಮದನಿ ದರ್ಗಾದ ಅಧ್ಯಕ್ಷರಾದ ಜನಾಬ್ ಅಬ್ದುಲ್ ರಶೀದ್,ಬ್ಲೂ ಲೈನ್ ಫುಡ್ಸ್ ಇಂಡಿಯಾ ಪ್ರೈವೇಟ್ ಲಿ ನ ಆಡಳಿತ ನಿರ್ದೇಶಕರಾದ ಶೌಕತ್ ಶೌರಿ,ದ.ಕ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಮಹಾಬಲ ಮಾರ್ಲ,ಮಾರುತಿ ಕ್ರಿಕೆಟರ್ಸ್ ಉಳ್ಳಾಲದ ಮಾಜಿ ಅಧ್ಯಕ್ಷ ಜನಾಬ್ ಹೆಚ್.ಎಸ್.ನಿಸಾರ್ ಬರಕಾ,ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವಾಧ್ಯಕ್ಷ ಶರತ್ ಶೆಟ್ಟಿ ಪಡುಬಿದ್ರಿ,ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವ್ಯವಸ್ಥಾಪಕರಾದ ಕೋಟ ರಾಮಕೃಷ್ಣ ಆಚಾರ್ ಮತ್ತು ಮಾರುತಿ ಯುವಕ ಮಂಡಲ(ರಿ)ಅಧ್ಯಕ್ಷ ವರದರಾಜ್ ಬಂಗೇರ ಮತ್ತು ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ  ಅಶಕ್ತರಿಗೆ ಸಹಾಯಧನ ವಿತರಣೆ ನಡೆಯಲಿದೆ‌.M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve + 15 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you