#covid19ಮಾರುತಿ ಯುವಕ ಮಂಡಲ ವತಿಯಿಂದ ಕೊರೋನಾ ಲಾಕ್ಡೌನ್ ಸಂತ್ರಸ್ತರಿಗೆ ನೆರವು

ಮಾರುತಿ ಯುವಕ ಮಂಡಲ ವತಿಯಿಂದ ಕೊರೋನಾ ಲಾಕ್ಡೌನ್ ಸಂತ್ರಸ್ತರಿಗೆ ನೆರವು

-

- Advertisment -spot_img
ಮೊಟ್ಟ ಮೊದಲ ಮಹಿಳಾಮಣಿ ವೀರರಾಣಿ ಅಬ್ಬಕ್ಕಳ ಕರ್ಮಭೂಮಿ ಸುಂದರ ನೆಲ ಉಳ್ಳಾಲ ಇಲ್ಲಿನ ಮಾರುತಿ ಯುವಕ ಮಂಡಲ(ರಿ) ಇದೀಗ ಕೊರೋನ ವೈರಸ್ ನ ಲಾಕ್ ಡೌನ್ ನ ಈ ಸಂದರ್ಭದಲ್ಲಿ ಕೆಲಸ ಇಲ್ಲದೆ ಪರದಾಡುವ ಕಾರ್ಮಿಕ ವರ್ಗ, ಕೂಲಿಯನ್ನೇ ಅವಲಂಬಿಸಿದ್ದ ಕೂಲಿ ಕಾರ್ಮಿಕರು, ಕುಶಲಕರ್ಮಿಗಳು, ಉದ್ಯೋಗರಹಿತರು, ಅಶಕ್ತರಿಗೆ ತಮ್ಮ ತಂಡದ ವತಿಯಿಂದ ಸೇವೆ ಸಲ್ಲಿಸುತ್ತಿರುವ ಇವರು ಈ ವರೆಗೆ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳನ್ನು ಉಳ್ಳಾಲ ವಲಯದ ಎಲ್ಲಾ ಧರ್ಮದ ಸುಮಾರು 800 ಕುಟುಂಬಗಳಿಗೆ ಮಾರುತಿ ಮಹಿಳಾ ಮಂಡಳಿಯ ಸಹಯೋಗದೊಂದಿಗೆ ನೀಡಿ ಸಹಕರಿಸಿದ್ದಾರೆ.
1985 ರಲ್ಲಿ ಶ್ರೀ ವೀರ ಮಾರುತಿ ಗೇಮ್ಸ್ ಟೀಮ್ ಎಂಬ ಹೆಸರಿನಿಂದ ಆರಂಭಗೊಂಡ ಈ ತಂಡ ಕಾಲಕ್ರಮೇಣ ತನ್ನ ಕಾರ್ಯ ಕ್ಷೇತ್ರವನ್ನು ವಿಸ್ತರಿಸುವ ಯೋಜನೆಯಡಿ ಮಾರುತಿ ಯುವಕ ಮಂಡಲ (ರಿ) ಮತ್ತು ಮಾರುತಿ ಕ್ರಿಕೆಟರ್ಸ್ (ರಿ) ಎಂಬ ಹೆಸರಿನಿಂದ ಮುಂದುವರಿದಿದೆ.
ಕ್ರೀಡೆ, ಸಮಾಜ ಸೇವೆ, ಕಲೆ ಸಾಹಿತ್ಯ ಶಿಕ್ಷಣ ಆರೋಗ್ಯ ಕ್ಷೇತ್ರ ಹೀಗೆ ಹತ್ತು ಹಲವು ಯೋಜನೆಗಳೊಂದಿಗೆ ಕಾರ್ಯ ನಿರ್ವಹಿಸುತ್ತಾ ಇದೆ.
ಸರಕಾರದ ಮನ್ನಣೆ ಸಹಕಾರ ಲಭಿಸಬೇಕಾದರೆ ಯುವಕ ಮಂಡಲ ಎಂಬ ಹೆಸರು ಅನಿವಾರ್ಯ ಎಂದು ಮನಗಂಡು “ಮಾರುತಿ ಯುವಕ ಮಂಡಲ” ಎಂದು ಹೆಸರು ಪಡೆದಿದೆ.
ಧಾರ್ಮಿಕ ಸೇವೆ, ಸಾಂಸ್ಕೃತಿಕ ಕ್ರೀಡೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣನೀಯರಿಗೆ ಸನ್ಮಾನ.
ಮಾನಸಿಕ ಅಸ್ವಸ್ಥರಿಗೆ, ಅನಾರೋಗ್ಯ ಪೀಡಿತರಿಗೆ, ವಿಕಲಚೇತನರಿಗೆ, ಆಸ್ಪತ್ರೆಯಲ್ಲಿ ದಾಖಲಾಗಿರುವ ಬಡರೋಗಿಗಳ ವೈದ್ಯಕೀಯ ವೆಚ್ಚವನ್ನು ಭರಿಸುವ ಮೂಲಕ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಸಮಾಜ ಸೇವೆಯನ್ನು ಮಾಡುತ್ತಿದ್ದಾರೆ.
ಕಡಲ್ಕೊರೆತದಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಮನೆ ನಿರ್ಮಾಣ
ಬಡ ಹೆಣ್ಣು ಮಕ್ಕಳ ಮದುವೆ
ಪ್ರಕೃತಿ ವಿಕೋಪದಿಂದ ಬಳಲಿದವರಿಗೆ ಸಹಾಯ
ಉಚಿತ ಟ್ಯೂಷನ್, ಕಂಪ್ಯೂಟರ್,   ಆರೋಗ್ಯ ಶಿಬಿರ
ಉಳ್ಳಾಲ ಆಸುಪಾಸಿನ ವಿವಿಧ ಶಾಲೆಗಳಿಗೆ ನೆರವು
ರಕ್ತದಾನ ಶಿಬಿರ ಇಂತಹ ಹಲವು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದೆ.
ಅಷ್ಟೇ ಅಲ್ಲದೆ ಇದು ಕ್ರಿಕೆಟ್ ನ ಬಲಿಷ್ಠ ತಂಡ ಹೊಂದಿದ್ದು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅನೇಕ ಕ್ರೀಡಾಪಟುಗಳನ್ನು ಕೊಟ್ಟ ಹಿರಿಮೆ.
ಸಂಸ್ಥೆಯ ಅನೇಕ ಸದಸ್ಯರು ಫುಟ್ಬಾಲ್ ಆಟಗಾರಾಗಿದ್ದು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಆಡಿದ ಕೀರ್ತಿ ಇವರಿಗೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವತಿಯಿಂದ ನಡೆಸಲಾದ ಹಾರ್ಡ್ ಬಾಲ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ ಹಿರಿಮೆ ಈ ತಂಡಕ್ಕೆ. ತಂಡವನ್ನು ಮುನ್ನಡೆಸುವ ಹೆಮ್ಮೆಯ ರೂವಾರಿಗಳಾಗಿ ಸುಧೀರ್ ಉಳ್ಳಾಲ, ಅಶ್ವಥ್, ದಿನೇಶ್ ಕರ್ಕೇರ, ವರದರಾಜ್, ಚರಣ್, ಕಿರಣ್, ವಾಸುದೇವ್, ಪ್ರಕಾಶ್, ಅಮರನಾಥ್, ಹರೀಶ್, ಸಂದೀಪ್,  ಇವರುಗಳು.
ಇಷ್ಟೆಲ್ಲಾ ಸಾಧನೆ ಮಾಡಿದ ಇದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಡ ಅನ್ನುವ ಹಿರಿಮೆ ಕೂಡ ಇದೆ.
ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆ ಮಾಡುವ ಉದ್ದೇಶ ಹೊಂದಿರುವ ಈ ತಂಡದ ಕೆಲವು ಯೋಜನೆಗಳು :
ಕ್ಯಾನ್ಸರ್, ಹೃದ್ರೋಗ ಸಂಬಂಧಿ ಕಾಯಿಲೆಯವರಿಗೆ ಸಹಕಾರ
ನೇತ್ರದಾನವನ್ನು ಹೆಚ್ಚು ಪ್ರಚಾರ ಮಾಡುವುದು
ಚಾರಿಟೇಬಲ್ ಟ್ರಸ್ಟ್ ಮಾಡಿ ಸೇವಾ ಕಾರ್ಯಗಳನ್ನು ಕ್ರಮಬದ್ಧವಾಗಿ ಮಾಡುವುದು
ಸಹಕಾರಿ ಸಂಘ ಸ್ಥಾಪಿಸಿ ಯುವ ಮನಸ್ಸುಗಳನ್ನು ಒಗ್ಗೂಡಿಸಿ ಬಲಿಷ್ಠ ತಂಡ ಮಾಡುವುದು.
ಇಷ್ಟೆಲ್ಲಾ ಸಾಧನೆ ಮಾಡಿದ ಈ ಯುವಕ ಮಂಡಲ ಎಲ್ಲಾ ರೀತಿಯ ಸಹಕಾರದಿಂದ ಇನ್ನಷ್ಟು ಸಮಾಜಮುಖಿ ಚಿಂತನೆಗಳೊಂದಿಗೆ ಕೆಲಸ ಮಾಡಿ ಇನ್ನೂ ಹೆಚ್ಚಿನ ಹೆಸರು ಪಡೆಯಲಿ ಇದು ನಮ್ಮ ಹಾರೈಕೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen − ten =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you