Categories
ಕ್ರಿಕೆಟ್

ಎಂಟರ ಘಟ್ಟದಲ್ಲಿ ಆರ್ಭಟಿಸಿದ ಮುರಳಿ-ಗೆಲುವಿನ ನಗೆ ಬೀರಿದ ಮೈಟಿ ಸ್ಮೈಲ್

ಬೆಂಗಳೂರು-ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟದ ಎಂಟರ ಘಟ್ಟದ ಪಂದ್ಯದಲ್ಲಿ ಮೈಟಿ ಮುರಳಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮೈಟಿ ಸ್ಮೈಲ್- ರಂಗ ಇಲೆವೆನ್ ವಿರುದ್ಧ ಗೆಲುವಿನ ನಗೆ ಬೀರಿದೆ ಹಾಗೂ ಮೂರನೆ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ರಂಗ ಇಲೆವೆನ್ ಅನಿಲ್ 20,ಗಿರೀಶ್ 17 ರನ್ ಗಳ ನೆರವಿನಿಂದ 8 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 63 ರನ್ ಪೇರಿಸಿತ್ತು.
ಸವಾಲಿನ ಗುರಿಯನ್ನು ಬೆಂಬತ್ತುವ ವೇಳೆ ಆರಂಭಿಕ ಆಟಗಾರ ಮುರಳಿ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ನೆರವಿನಿಂದ 31 ಗಳಿಸಿದರು.ಮುರಳಿಗೆ ಸಾಥ್ ನೀಡಿದ ಕಿರಣ್ 16 ರನ್ ಗಳಿಸಿ 6 ಓವರ್ ಗಳಲ್ಲಿ ಗುರಿ ತಲುಪಿದರು.
ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಮುರಳಿ ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಭಾಜನರಾದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

twenty + 5 =