Categories
ಬ್ಯಾಡ್ಮಿಂಟನ್

ಮೊಗವೀರ ಬ್ಯಾಡ್ಮಿಂಟನ್ ಕಪ್ ಸಂಪನ್ನ

ಮೊಗವೀರ ಸಂಘ, ಬೆಂಗಳೂರು(ನೋಂ) ತನ್ನ ಸದಸ್ಯರಿಗಾಗಿ ಆಯೋಜಿಸಿದ್ದ   *ಮೊಗವೀರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ* ಯು  ಜಕ್ಕೂರಿನ ಜೆ ಪಿ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಸಮಾಪ್ತಿಯಾಯಿತು.‌ ಸಂಘದ ಹಿರಿಯ ಸದಸ್ಯರಾದ ಶ್ರೀಮತಿ ಜಾಂಬವತಿ ಮತ್ತು  ಶ್ರೀ ಶ್ರೀನಿವಾಸ ಮೊಗೇರ ದಂಪತಿಗಳು ಪಂದ್ಯಾವಳಿಗೆ ಚಾಲನೆ ನೀಡಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸೆಡ್ ಡಬಲ್ಸ್‌ನಲ್ಲಿ ಒಟ್ಟು ಏಳು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.‌
ಮೊಗವೀರ ಸಮುದಾಯದ ಹಲವಾರು ಕಿರಿಯರು, ಹಿರಿಯರು ಉತ್ಸಾಹದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡರು. ಪಂದ್ಯಾವಳಿಯ ನಂತರ ವಿನ್ನರ್ ಮತ್ತು ರನ್ನರ್ ವಿಭಾಗದಲ್ಲಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು..

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

9 − 9 =