ಕ್ರಿಕೆಟ್ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ "ಮಾನ್ಸೂನ್ ರೈನಿ ಕಪ್-2019"

ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ “ಮಾನ್ಸೂನ್ ರೈನಿ ಕಪ್-2019”

-

- Advertisment -spot_img

ಟೆನ್ನಿಸ್ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗಗಳನ್ನು ಹಲವಾರು ಸಂಸ್ಥೆಗಳು ದಶಕಗಳಿಂದ ನಡೆಸಿಕೊಂಡು ಬಂದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳ ಅನ್ವೇಷಣೆಗೆ ಪ್ರಿಮಿಯರ್ ಲೀಗ್ ಪಂದ್ಯಾಕೂಟಗಳು ಕಳೆದ ಋತುವಿನಿಂದ ಯಥೇಚ್ಛವಾಗಿ ನಡೆದರೆ,ರಾಜ್ಯ, ರಾಷ್ಟ್ರ ಮಟ್ಟದ ಪಂದ್ಯಾಕೂಟಗಳು ಮಳೆಗಾಲದ ಪ್ರಾರಂಭದವರೆಗೆ ಹಲವೆಡೆ ನಡೆಸಿದ್ದರು.

ಟೆನ್ನಿಸ್ ಕ್ರಿಕೆಟ್ ಇನ್ನಷ್ಟು ಹೊಸತನ ನೀಡುವ ಸಲುವಾಗಿ,ಬೆಂಗಳೂರಿನ ಹಿರಿಯ ತಂಡ ಜೈ ಕರ್ನಾಟಕದ ಮಾಸ್ಟರ್ ಮೈಂಡ್ ಸಚಿನ್ ಮಹಾದೇವ್ ಮಾಲೀಕತ್ವದ M.SPORTS ಹಾಗೂ ಫ್ರೆಂಡ್ಸ್ ಬೆಂಗಳೂರು ತಂಡದ ಡ್ಯಾಶಿಂಗ್ ಆಲ್ ರೌಂಡರ್ ಸಾಗರ್ ಭಂಡಾರಿ ಮಾಲೀಕತ್ವದ SRB ಸ್ಪೋರ್ಟ್ಸ್ ಸಂಸ್ಥೆ ಪ್ರಾಯೋಜಕತ್ವ ಹಾಗೂ ರಾಜ್ಯದ ಟೆನ್ನಿಸ್ ಕ್ರಿಕೆಟ್ ನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವ ಆರ್.ಕೆ‌.ಆಚಾರ್ಯ ನೇತೃತ್ವದ ” ಸ್ಪೋರ್ಟ್ಸ್ ಕನ್ನಡ” ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 21,22 ರಂದು ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್ ಅಂಗಣದ ಸಿಮೆಂಟ್ ಪಿಚ್ ನಲ್ಲಿ ಮಾನ್ಸೂನ್ ರೈನಿ ಕಪ್ ನಡೆಯಲಿದೆ.

ವಿಜೇತ ತಂಡವು 30,000 ನಗದು,ರನ್ನರ್ಸ್ ತಂಡ 15,000 ನಗದು ಸಹಿತ ಆಕರ್ಷಕ ಟ್ರೋಫಿ,ಇನ್ನಿತರ ವೈಯಕ್ತಿಕ ಪ್ರಶಸ್ತಿಗಳು ಆಟಗಾರರನ್ನು ಹುರಿದುಂಬಿಸಲಿದೆ.

ಪ್ರತಿಪಂದ್ಯವು 5 ಓವರ್ ಗಳಲ್ಲಿ ವಿಲ್ಸನ್ ಚೆಂಡಿನಲ್ಲಿ ನಡೆಯಲಿದೆ. ಪಂದ್ಯಾಕೂಟದ ನೇರ ಪ್ರಸಾರ ಹಾಗೂ ಲೈವ್ ಸ್ಕೋರ್ ನ್ನು M.Sports ಯೂ ಟ್ಯೂಬ್ ಚಾನೆಲ್ ಬಿತ್ತರಿಸಲಿದೆ.

ವಿಶೇಷ ಸೂಚನೆ: ಪಂದ್ಯಾಕೂಟದ ಸಂಘಟಕರು ಸ್ಲೀವ್ಲೆಸ್ ಮಾತ್ರ ನೀಡಲಿದ್ದು, ಭಾಗವಹಿಸುವ ಆಟಗಾರು ಕಡ್ಡಾಯವಾಗಿ ಜೆರ್ಸಿ ರೂಪದಲ್ಲಿ ಸ್ಲೀವ್ಲೆಸ್ ಟಿ ಶರ್ಟ್ ಹಾಗು ಸ್ಪೋರ್ಟ್ಸ್ ಶಾರ್ಟ್ಸ್ ಧರಿಸಿ‌‌ ಆಡಬೇಕಾಗಿದೆ. ಈಗಾಗಲೇ 20 ತಂಡಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು,
ಪ್ರವೇಶಾತಿ ಪ್ರಕ್ರಿಯೆ ಮುಗಿದಿರುತ್ತದೆ.

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen + 9 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you