ಕ್ರಿಕೆಟ್ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ "ಮಾನ್ಸೂನ್ ರೈನಿ ಕಪ್-2019"

ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ “ಮಾನ್ಸೂನ್ ರೈನಿ ಕಪ್-2019”

-

- Advertisment -spot_img

ಟೆನ್ನಿಸ್ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗಗಳನ್ನು ಹಲವಾರು ಸಂಸ್ಥೆಗಳು ದಶಕಗಳಿಂದ ನಡೆಸಿಕೊಂಡು ಬಂದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳ ಅನ್ವೇಷಣೆಗೆ ಪ್ರಿಮಿಯರ್ ಲೀಗ್ ಪಂದ್ಯಾಕೂಟಗಳು ಕಳೆದ ಋತುವಿನಿಂದ ಯಥೇಚ್ಛವಾಗಿ ನಡೆದರೆ,ರಾಜ್ಯ, ರಾಷ್ಟ್ರ ಮಟ್ಟದ ಪಂದ್ಯಾಕೂಟಗಳು ಮಳೆಗಾಲದ ಪ್ರಾರಂಭದವರೆಗೆ ಹಲವೆಡೆ ನಡೆಸಿದ್ದರು.

ಟೆನ್ನಿಸ್ ಕ್ರಿಕೆಟ್ ಇನ್ನಷ್ಟು ಹೊಸತನ ನೀಡುವ ಸಲುವಾಗಿ,ಬೆಂಗಳೂರಿನ ಹಿರಿಯ ತಂಡ ಜೈ ಕರ್ನಾಟಕದ ಮಾಸ್ಟರ್ ಮೈಂಡ್ ಸಚಿನ್ ಮಹಾದೇವ್ ಮಾಲೀಕತ್ವದ M.SPORTS ಹಾಗೂ ಫ್ರೆಂಡ್ಸ್ ಬೆಂಗಳೂರು ತಂಡದ ಡ್ಯಾಶಿಂಗ್ ಆಲ್ ರೌಂಡರ್ ಸಾಗರ್ ಭಂಡಾರಿ ಮಾಲೀಕತ್ವದ SRB ಸ್ಪೋರ್ಟ್ಸ್ ಸಂಸ್ಥೆ ಪ್ರಾಯೋಜಕತ್ವ ಹಾಗೂ ರಾಜ್ಯದ ಟೆನ್ನಿಸ್ ಕ್ರಿಕೆಟ್ ನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವ ಆರ್.ಕೆ‌.ಆಚಾರ್ಯ ನೇತೃತ್ವದ ” ಸ್ಪೋರ್ಟ್ಸ್ ಕನ್ನಡ” ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 21,22 ರಂದು ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್ ಅಂಗಣದ ಸಿಮೆಂಟ್ ಪಿಚ್ ನಲ್ಲಿ ಮಾನ್ಸೂನ್ ರೈನಿ ಕಪ್ ನಡೆಯಲಿದೆ.

ವಿಜೇತ ತಂಡವು 30,000 ನಗದು,ರನ್ನರ್ಸ್ ತಂಡ 15,000 ನಗದು ಸಹಿತ ಆಕರ್ಷಕ ಟ್ರೋಫಿ,ಇನ್ನಿತರ ವೈಯಕ್ತಿಕ ಪ್ರಶಸ್ತಿಗಳು ಆಟಗಾರರನ್ನು ಹುರಿದುಂಬಿಸಲಿದೆ.

ಪ್ರತಿಪಂದ್ಯವು 5 ಓವರ್ ಗಳಲ್ಲಿ ವಿಲ್ಸನ್ ಚೆಂಡಿನಲ್ಲಿ ನಡೆಯಲಿದೆ. ಪಂದ್ಯಾಕೂಟದ ನೇರ ಪ್ರಸಾರ ಹಾಗೂ ಲೈವ್ ಸ್ಕೋರ್ ನ್ನು M.Sports ಯೂ ಟ್ಯೂಬ್ ಚಾನೆಲ್ ಬಿತ್ತರಿಸಲಿದೆ.

ವಿಶೇಷ ಸೂಚನೆ: ಪಂದ್ಯಾಕೂಟದ ಸಂಘಟಕರು ಸ್ಲೀವ್ಲೆಸ್ ಮಾತ್ರ ನೀಡಲಿದ್ದು, ಭಾಗವಹಿಸುವ ಆಟಗಾರು ಕಡ್ಡಾಯವಾಗಿ ಜೆರ್ಸಿ ರೂಪದಲ್ಲಿ ಸ್ಲೀವ್ಲೆಸ್ ಟಿ ಶರ್ಟ್ ಹಾಗು ಸ್ಪೋರ್ಟ್ಸ್ ಶಾರ್ಟ್ಸ್ ಧರಿಸಿ‌‌ ಆಡಬೇಕಾಗಿದೆ. ಈಗಾಗಲೇ 20 ತಂಡಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು,
ಪ್ರವೇಶಾತಿ ಪ್ರಕ್ರಿಯೆ ಮುಗಿದಿರುತ್ತದೆ.

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + 1 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you