11.7 C
London
Sunday, May 19, 2024
Homeಕ್ರಿಕೆಟ್ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ "ಮಾನ್ಸೂನ್ ರೈನಿ ಕಪ್-2019"

ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ “ಮಾನ್ಸೂನ್ ರೈನಿ ಕಪ್-2019”

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಟೆನ್ನಿಸ್ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗಗಳನ್ನು ಹಲವಾರು ಸಂಸ್ಥೆಗಳು ದಶಕಗಳಿಂದ ನಡೆಸಿಕೊಂಡು ಬಂದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳ ಅನ್ವೇಷಣೆಗೆ ಪ್ರಿಮಿಯರ್ ಲೀಗ್ ಪಂದ್ಯಾಕೂಟಗಳು ಕಳೆದ ಋತುವಿನಿಂದ ಯಥೇಚ್ಛವಾಗಿ ನಡೆದರೆ,ರಾಜ್ಯ, ರಾಷ್ಟ್ರ ಮಟ್ಟದ ಪಂದ್ಯಾಕೂಟಗಳು ಮಳೆಗಾಲದ ಪ್ರಾರಂಭದವರೆಗೆ ಹಲವೆಡೆ ನಡೆಸಿದ್ದರು.

ಟೆನ್ನಿಸ್ ಕ್ರಿಕೆಟ್ ಇನ್ನಷ್ಟು ಹೊಸತನ ನೀಡುವ ಸಲುವಾಗಿ,ಬೆಂಗಳೂರಿನ ಹಿರಿಯ ತಂಡ ಜೈ ಕರ್ನಾಟಕದ ಮಾಸ್ಟರ್ ಮೈಂಡ್ ಸಚಿನ್ ಮಹಾದೇವ್ ಮಾಲೀಕತ್ವದ M.SPORTS ಹಾಗೂ ಫ್ರೆಂಡ್ಸ್ ಬೆಂಗಳೂರು ತಂಡದ ಡ್ಯಾಶಿಂಗ್ ಆಲ್ ರೌಂಡರ್ ಸಾಗರ್ ಭಂಡಾರಿ ಮಾಲೀಕತ್ವದ SRB ಸ್ಪೋರ್ಟ್ಸ್ ಸಂಸ್ಥೆ ಪ್ರಾಯೋಜಕತ್ವ ಹಾಗೂ ರಾಜ್ಯದ ಟೆನ್ನಿಸ್ ಕ್ರಿಕೆಟ್ ನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವ ಆರ್.ಕೆ‌.ಆಚಾರ್ಯ ನೇತೃತ್ವದ ” ಸ್ಪೋರ್ಟ್ಸ್ ಕನ್ನಡ” ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 21,22 ರಂದು ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್ ಅಂಗಣದ ಸಿಮೆಂಟ್ ಪಿಚ್ ನಲ್ಲಿ ಮಾನ್ಸೂನ್ ರೈನಿ ಕಪ್ ನಡೆಯಲಿದೆ.

ವಿಜೇತ ತಂಡವು 30,000 ನಗದು,ರನ್ನರ್ಸ್ ತಂಡ 15,000 ನಗದು ಸಹಿತ ಆಕರ್ಷಕ ಟ್ರೋಫಿ,ಇನ್ನಿತರ ವೈಯಕ್ತಿಕ ಪ್ರಶಸ್ತಿಗಳು ಆಟಗಾರರನ್ನು ಹುರಿದುಂಬಿಸಲಿದೆ.

ಪ್ರತಿಪಂದ್ಯವು 5 ಓವರ್ ಗಳಲ್ಲಿ ವಿಲ್ಸನ್ ಚೆಂಡಿನಲ್ಲಿ ನಡೆಯಲಿದೆ. ಪಂದ್ಯಾಕೂಟದ ನೇರ ಪ್ರಸಾರ ಹಾಗೂ ಲೈವ್ ಸ್ಕೋರ್ ನ್ನು M.Sports ಯೂ ಟ್ಯೂಬ್ ಚಾನೆಲ್ ಬಿತ್ತರಿಸಲಿದೆ.

ವಿಶೇಷ ಸೂಚನೆ: ಪಂದ್ಯಾಕೂಟದ ಸಂಘಟಕರು ಸ್ಲೀವ್ಲೆಸ್ ಮಾತ್ರ ನೀಡಲಿದ್ದು, ಭಾಗವಹಿಸುವ ಆಟಗಾರು ಕಡ್ಡಾಯವಾಗಿ ಜೆರ್ಸಿ ರೂಪದಲ್ಲಿ ಸ್ಲೀವ್ಲೆಸ್ ಟಿ ಶರ್ಟ್ ಹಾಗು ಸ್ಪೋರ್ಟ್ಸ್ ಶಾರ್ಟ್ಸ್ ಧರಿಸಿ‌‌ ಆಡಬೇಕಾಗಿದೆ. ಈಗಾಗಲೇ 20 ತಂಡಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು,
ಪ್ರವೇಶಾತಿ ಪ್ರಕ್ರಿಯೆ ಮುಗಿದಿರುತ್ತದೆ.

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

sixteen − four =