ಕ್ರಿಕೆಟ್ನ್ಯಾಶ್ ಬೆಂಗಳೂರು ತೆಕ್ಕೆಗೆ ಮಾನ್ಸೂನ್ ರೈನಿ ಕಪ್-2019

ನ್ಯಾಶ್ ಬೆಂಗಳೂರು ತೆಕ್ಕೆಗೆ ಮಾನ್ಸೂನ್ ರೈನಿ ಕಪ್-2019

-

- Advertisment -spot_img

ಬೆಂಗಳೂರಿನ : ಜೆ.ಪಿ ಪಾರ್ಕ್ ಮತ್ತಿಕೆರೆಯ ಅಂಗಣದಲ್ಲಿ, ತುಂತುರು ಮಳೆ ಹನಿಯ ಸ್ಪರ್ಶ ಸವರಿ ಒದ್ದೆಯಾಗಿದ್ದ ಪಿಚ್ ನಲ್ಲಿ, ಬಣ್ಣ ಬಣ್ಣದ ಸ್ಲೀವ್ಲೆಸ್ ಧಿರಿಸುಗಳನ್ನು ಧರಿಸಿ, ಎರಡು ದಿನಗಳ ಕಾಲ ಹಗಲಿನಲ್ಲಿ ನಡೆದ “ಮಾನ್ಸೂನ್ ರೈನಿ ಕಪ್-2019” ನಲ್ಲಿ ಬೆಂಗಳೂರಿನ ನ್ಯಾಶ್ ತಂಡ ಜೆ.ಸಿ.ಸಿ ತಂಡವನ್ನು ಸೋಲಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಲೀಗ್ ಹಂತದ ಕುತೂಹಲಕಾರಿ ಕದನದ ಬಳಿಕ ಶನಿವಾರ,ಶ್ರೀನಿವಾಸಪುರ ಪ್ರಿಮಿಯರ್ ಲೀಗ್ ನ ಮಾಸ್ಟರ್ ಮೈಂಡ್ ಕಾರ್ತಿಕ್ ರೆಡ್ಡಿ ಜಾಕಿ ನೇತೃತ್ವದ ಜೆ.ಸಿ.ಸಿ ತಂಡ ಸ್ಟ್ರೈಕರ್ಸ್ ಬೆಂಗಳೂರು ತಂಡವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿತ್ತು. ದ್ವಿತೀಯ ಸೆಮಿಫೈನಲ್ ನಲ್ಲಿ ನ್ಯಾಶ್ ತಂಡ ಎಸ್.ಝಡ್‌‌.ಸಿ‌.ಸಿ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿದ್ದವು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯಾಶ್ ತಂಡ ಜಾನ್ 18 ರನ್ ಗಳ‌ ಅಮೂಲ್ಯ ಕಾಣಿಕೆಯ ನಡುವೆ ಜೆ.ಸಿ.ಸಿ ಯ ಸಚಿನ್ ಮಹಾದೇವ್ ಹ್ಯಾಟ್ರಿಕ್ ನ ನಡುವೆಯೂ ದಿಟ್ಟವಾಗಿ ಆಡಿ,6 ಓವರ್ ಗಳಲ್ಲಿ 45 ರನ್ ನ ಗುರಿಯನ್ನು ಜೆ‌.ಸಿ.ಸಿ ಗೆ ನೀಡಿತ್ತು. ಸವಾಲಿನ ಮೊತ್ತ ಬೆಂಬತ್ತಿದ ಜೆ.ಸಿ.ಸಿ ತಂಡ ಹಠಾತ್ ಬ್ಯಾಟಿಂಗ್ ಕುಸಿತ ಕಂಡು ಕೇವಲ 23 ರನ್ ಗಳಷ್ಟೇ ಗಳಿಸಲು ಶಕ್ತವಾಯಿತು.

ವಿಜೇತ ನ್ಯಾಶ್ ತಂಡ 30,000 ನಗದು,ರನ್ನರ್ಸ್ ತಂಡ 15,000 ನಗದಿನ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.ನ್ಯಾಶ್ ನ ಅಕ್ಷಯ್ ಸಿ.ಕೆ ಹಾಗೂ ಅಪೆಕ್ಸ್ ಕ್ರಮ ವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿ ಪಡೆದುಕೊಂಡರೆ,ಜೆ.ಸಿ.ಸಿ ತಂಡದ ನವೀನ್ ರಾಮ್ಸ್ ಅರ್ಹವಾಗಿ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈ ಕರ್ನಾಟಕದ ಹಿರಿಯ ಆಲ್ ರೌಂಡರ್ಆ ರ್.ಮನೋಹರ್ (H.A.L),ಫ್ರೆಂಡ್ಸ್ ತಂಡದ ಮಾಲೀಕ ರೇಣು ಗೌಡರ ಅನುಜ ಕಿರಣ್ ಗೌಡ, ಡಿ.ವಿ.ಆರ್ ಸೀನಣ್ಣ, ಸಿಂಗಾಪುರ ಪ್ರಭಾ ಗೌಡ ಬೆಂಗಳೂರು ಜೊತೆಯಾಗಿ ಕೋಟ ರಾಮಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭ ಪಂದ್ಯಾಕೂಟವನ್ನುದ್ದೇಶಿ ಮಾತನಾಡಿದ ಮನೋಹರ್ ರವರು “ಮಳೆಯ ನಡುವೆ ಅತ್ಯುತ್ತಮ ಪ್ರದರ್ಶನ ತೋರಿದ ತಂಡಗಳು ಮುಂದಿನ ದಿನಗಳಲ್ಲಿ ಒತ್ತಡದ ಪರಿಸ್ಥಿತಿಗಳನ್ನು ಎದುರಿಸುವ ಕೌಶಲ್ಯವನ್ನು ಮೈ ಗೂಡಿಸಿಕೊಳ್ಳುತ್ತಾರೆ”ಎನ್ನುತ್ತಾ ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡು ಇತಿಹಾಸ ಸೃಷ್ಟಿಸುತ್ತಿರುವ “ಸ್ಪೋರ್ಟ್ಸ್ ಕನ್ನಡ” ವೆಬ್ಸೈಟ್ ನ ಸಾಧನೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ಮೊದಲ ಆವೃತ್ತಿಯ ರೈನಿ ಕಪ್ ಪಂದ್ಯಾಕೂಟದ ಯಶಸ್ಸಿನಲ್ಲಿ M.Sports ನ ಸಚಿನ್ ಮಹಾದೇವ್,SRB ಸ್ಪೋರ್ಟ್ಸ್ ನ ಸಾಗರ್ ಭಂಡಾರಿ,M.K.S ಗ್ರೂಪ್ ನ ಮಾಲೀಕ ನದೀಮ್ ಅಖ್ತರ್, “ಸ್ಪೋರ್ಟ್ಸ್ ಕನ್ನಡ” ಪ್ರಾಯೋಜಕತ್ವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜರುಗಿತ್ತು.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು M.Sports ವಿಶ್ವದಾದ್ಯಂತ ಬಿತ್ತರಿಸಿತ್ತು. ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ವಿಶಿಷ್ಟ ಸಂಜ್ಞೆಗಳ ಮೂಲಕ ನಿಖರ ತೀರ್ಪನ್ನು ನೀಡುತ್ತಾ ಕ್ರೀಡಾಭಿಮಾನಿಗಳನ್ನು ರಂಜಿಸಿದರು.

– ಆರ್‌.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

13 + eleven =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you