ಕ್ರಿಕೆಟ್ದಾಖಲೆಯ 15ನೇ ಬಾರಿ ಇರಾನಿ ಕಪ್ ಗೆದ್ದ ರಣಜಿ ಚಾಂಪಿಯನ್ ಮುಂಬೈ!

ದಾಖಲೆಯ 15ನೇ ಬಾರಿ ಇರಾನಿ ಕಪ್ ಗೆದ್ದ ರಣಜಿ ಚಾಂಪಿಯನ್ ಮುಂಬೈ!

-

- Advertisment -spot_img

ಅಜಿಂಕ್ಯ ರಹಾನೆ ನಾಯಕತ್ವದ ಬಲಾಢ್ಯ ಮುಂಬೈ ತಂಡ, ದಾಖಲೆಯ 15ನೇ ಬಾರಿ ಇರಾನಿ ಕಪ್ ಟ್ರೋಫಿಯನ್ನು ಗೆದ್ದುಕೊಂಡಿದೆ. 1997-98ರ ನಂತರ ಮುಂಡ ತಂಡ ಇರಾನಿ ಕಪ್ ಗೆಲ್ಲುತ್ತಿರುವುದು ಇದೇ ಮೊದಲು. 27 ವರ್ಷಗಳಿಂದ ಮರೀಚಿಕೆಯಾಗುತ್ತಾ ಬಂದಿದ್ದ ಇರಾನಿ ಕಪ್ ಟ್ರೋಫಿಯನ್ನು ಮುಂಬೈ ತಂಡ ಕೊನೆಗೂ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಉತ್ತರ ಪ್ರದೇಶದ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ – ಏಕನಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಇನ್ನಿಂಗ್ಸ್ ಮುನ್ನಡೆ ಆಧಾರದಲ್ಲಿ ಮುಂಬೈ ಇರಾನಿ ಕಪ್’ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ.

ಮುಂಬೈ ತಂಡ ಪ್ರಥಮ ಇನ್ನಿಂಗ್ಸ್’ನಲ್ಲಿ 537 ರನ್’ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಮುಂಬೈ ಪರ ಸರ್ಫರಾಜ್ ಖಾನ್ ಅಮೋಘ ದ್ವಿಶತಕದೊಂದಿಗೆ ಅಬ್ಬರಿಸಿದ್ದರು (ಅಜೇಯ 222 ರನ್). ಇದಕ್ಕೆ ಪ್ರತಿಯಾಗಿ ರುತುರಾಜ್ ಗಾಯಕ್ವಾಡ್ ನೇತೃತ್ವದ ರೆಸ್ಟ್ ಆಫ್ ಇಂಡಿಯಾ ತಂಡ 416 ರನ್’ಗಳಿಗೆ ಆಲೌಟಾಗಿತ್ತು. ತಂಡದ ಪರ ಅಭಿಮನ್ಯು ಈಶ್ವರನ್ 191 ರನ್ ಗಳಿಸಿದ್ದರು.

121 ರನ್’ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಮುಂಬೈ ತಂಡ 8 ವಿಕೆಟ್ ನಷ್ಟಕ್ಕೆ 329 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇಡ್ ಘೋಷಿಸಿತ್ತು. ಪಂದ್ಯ ಡ್ರಾಗೊಂಡ ಕಾರಣ, ಇನ್ನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಮುಂಬೈ ತಂಡ ಇರಾನಿ ಕಪ್ ಗೆದ್ದುಕೊಂಡಿದೆ.

ಮುಂಬೈ ತಂಡ ಇರಾನಿ ಕಪ್ ಗೆಲ್ಲುತ್ತಿರುವುದು ಇದು 15ನೇ ಬಾರಿ. ಇದಕ್ಕೂ ಮೊದಲು ಮುಂಬೈ 1959-60, 1962–63, 1963–64, 1967–68, 1969–70, 1970–71, 1972–73, 1975–76, 1976–77, 1981–82, 1985–86, 1994–95, 1995–96, 1997–98,

ಮುಂಬೈ ತಂಡದ ಎರಡನೇ ಇನ್ನಿಂಗ್ಸ್’ನಲ್ಲಿ ಮಂಗಳೂರು ಮೂಲದ ಆಟಗಾರ ತನುಷ್ ಕೋಟ್ಯಾನ್ ಅಮೋಘ ಶತಕದೊಂದಿಗೆ ಮಿಂಚಿದ್ದಾರೆ. ಮುಂಬೈ ಪರ ಆಡುತ್ತಿರುವ ತನುಷ್ ಕೋಟ್ಯಾನ್ 2ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದು 150 ಎಸೆತಗಳಲ್ಲಿ 10 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ ಅಜೇಯ 114 ರನ್ ಗಳಿಸಿದರು.

LEAVE A REPLY

Please enter your comment!
Please enter your name here

18 + fourteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you