ಕ್ರಿಕೆಟ್ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

-

- Advertisment -spot_img

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ ಆ. 11ರಿಂದ 28ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

 

ಕಳೆದ ಬಾರಿ ಚಾಂಪಿಯನ್ ಆಗಿದ್ದ ಆತಿಥೇಯ ಮೈಸೂರು ವಾರಿಯರ್ಸ್ ತಂಡವು ಉದ್ಘಾಟನಾ ದಿನದ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇದೇ ದಿನದ ಇನ್ನೊಂದು ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಎದುರಾಳಿಗಳಾಗಲಿವೆ.

2022ರಲ್ಲಿ ಟೂರ್ನಿಯ ಮೊದಲ ಹಂತದ 14 ಪಂದ್ಯಗಳು ಇದೇ ಮೈದಾನದಲ್ಲಿ ನಡೆದಿದ್ದವು. ಮೂರು ವರ್ಷಗಳ ಬಳಿಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಈ ಬಾರಿ ಟೂರ್ನಿ ಸ್ಥಳಾಂತರಗೊಂಡು ಮೈಸೂರಿನಲ್ಲಿ ನಡೆಯುತ್ತಿದೆ. ಒಟ್ಟು 30 ಲೀಗ್ ಪಂದ್ಯಗಳು, ಕ್ವಾಲಿಫೈಯರ್–1, ಎಲಿಮಿನೇಟರ್, ಕ್ವಾಲಿಫೈಯರ್–2 ಹಾಗೂ ಫೈನಲ್ ಸೇರಿದಂತೆ 34 ಪಂದ್ಯಗಳು ನಡೆಯಲಿವೆ.

ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಮನೀಷ್ ಪಾಂಡೆ ಸೇರಿದಂತೆ ದೇಶದ ಹಲವು ತಾರೆ ಕ್ರಿಕೆಟಿಗರು ಈ ಬಾರಿ ಕಣಕ್ಕಿಳಿಯುತ್ತಿದ್ದಾರೆ.

ಕೆಎಸ್‌ಸಿಎ ವಲಯ ಸಂಚಾಲಕ ಹರಿಕೃಷ್ಣ ಕುಮಾರ್ ತಿಳಿಸಿದಂತೆ, ಆ. 7ರಂದು ಪೊಲೀಸ್ ಇಲಾಖೆಯಿಂದ ಟೂರ್ನಿ ಆಯೋಜನೆಗೆ ಅನುಮತಿ ದೊರೆತಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಗೆ ಪತ್ರ ನೀಡಲಾಗಿದೆ. ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆಟಗಾರರು, ಅಧಿಕಾರಿಗಳು, ತಂಡಗಳ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶವಿದೆ.

ಕ್ರಿಕೆಟ್ ಮೈದಾನದಲ್ಲಿ ನಾಲ್ಕು ಪಿಚ್‌ಗಳು ಹಾಗೂ ಹುಲ್ಲುಹಾಸನ್ನು ಹದಗೊಳಿಸುವ ಕಾರ್ಯ ಅಂತಿಮ ಹಂತ ತಲುಪಿದೆ. ಮೈದಾನದ ಸುತ್ತಲೂ ಭದ್ರತಾ ಕಾರಣಕ್ಕಾಗಿ ಬ್ಯಾರಿಕೇಡ್ ಹಾಗೂ ಕಬ್ಬಿಣದ ಶೀಟ್‌ಗಳಿಂದ ತಡೆಗೋಡೆಗಳನ್ನು ನಿರ್ಮಿಸಲಾಗುತ್ತಿದೆ.

ನಿತ್ಯ ಎರಡು ಪಂದ್ಯಗಳು — ಮಧ್ಯಾಹ್ನ 3.15 ಹಾಗೂ ಸಂಜೆ 7.15ಕ್ಕೆ — ನಡೆಯಲಿವೆ. ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸ್ಪರ್ಧಿಸಲಿವೆ.

 

 

LEAVE A REPLY

Please enter your comment!
Please enter your name here

one × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you