Categories
ಕ್ರಿಕೆಟ್

ಮೈಸೂರು-ಒಡೆಯರ್ ಕಪ್-2022-ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಮೈಸೂರು ಇವರ ಆಶ್ರಯದಲ್ಲಿ “ಒಡೆಯರ್ ಕಪ್-2022″ರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಮೇ ದಿನಾಂಕ 6,7 ಮತ್ತು 8 ರಂದು ಮೈಸೂರಿನ ಮಹಾರಾಜಾ ಗ್ರೌಂಡ್ ನಲ್ಲಿ ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು,ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ತಂಡಗಳು ಭಾಗವಹಿಸಲಿದೆ.
ಕೆ.ಎಸ್.ಸಿ.ಎ ಅಂಗೀಕೃತ ನಿರ್ಣಾಯಕರು ಪಂದ್ಯಾಟದ ಅಂಪಾಯರಿಂಗ್ ನಡೆಸಲಿದ್ದಾರೆ‌.ಪ್ರಥಮ‌ ಪ್ರಶಸ್ತಿ
2 ಲಕ್ಷ  ನಗದು,ದ್ವಿತೀಯ ಬಹುಮಾನ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಸರಣಿ ಶ್ರೇಷ್ಠ ಪ್ರಶಸ್ತಿ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಕೊಡ ಮಾಡಿದರೆ,ವೈಯಕ್ತಿಕ ಶ್ರೇಷ್ಠ
ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
M ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.ಹೆಚ್ಚಿನ ವಿವರಗಳಿಗಾಗಿ
ಈಶ್ವರ್ ನಾಯಕ್-8722831243,ಮಧುಸೂದನ್
-9986024717,ಶಾಂತಿ-9900331918 ಇವರನ್ನು ಸಂಪರ್ಕಿಸಬಹುದು…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

16 − one =