Categories
ಅಥ್ಲೆಟಿಕ್ಸ್ ಗ್ರಾಮೀಣ

ಮೈಸೂರು ಯೋಗಾಸನ ಸ್ಪರ್ಧೆ- 4 ವಿಭಾಗದಲ್ಲೂ ಪ್ರಶಸ್ತಿ ಬಾಚಿದ ವಿಶ್ವದಾಖಲೆಯ ತನುಶ್ರೀ ಪಿತ್ರೋಡಿ

ಮೈಸೂರು ಯೋಗಾಸನ ಸ್ಪರ್ಧೆ-
4 ವಿಭಾಗದಲ್ಲೂ ಪ್ರಶಸ್ತಿ ಬಾಚಿದ ವಿಶ್ವದಾಖಲೆಯ ತನುಶ್ರೀ ಪಿತ್ರೋಡಿ.

ತನ್ನ 10 ನೇ ವಯಸ್ಸಿನಲ್ಲೇ 4 ವಿಶ್ವದಾಖಲೆ ಸ್ಥಾಪಿಸಿ ಜಗತ್ತನ್ನೇ ನಿಬ್ಬೆರಗಾಗಿಸಿದ್ದ ತನುಶ್ರೀ ಪಿತ್ರೋಡಿ ಮೈಸೂರಿನಲ್ಲಿ ನಡೆದಿದ್ದ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2020 ರಲ್ಲಿ own ಚಾಯ್ಸ್ ವಿಭಾಗದಲ್ಲಿ ಪ್ರಥಮ, ಅತ್ಲೆಟಿಕ್ಸ್ ದ್ವಿತೀಯ, ಆರ್ಟಿಸ್ಟಿಕ್ ಸೋಲೋ ತೃತೀಯ, ಆರ್ಟಿಸ್ಟಿಕ್ ಪೇರ್ ಚತುರ್ಥ, ನಾಲ್ಕು ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದು ವಿದೇಶದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ ಬಹುಮುಖ ಪ್ರತಿಭೆಯ,
ವಿಶ್ವದಾಖಲೆಗಳ ಸರದಾರಿಣಿ,ನಾಟ್ಯ ಮಯೂರಿ ಬಿರುದಾಂಕಿತೆ ತನುಶ್ರೀ ಪಿತ್ರೋಡಿ ರಾಜ್ಯದ ಅತ್ಯಂತ ಶಿಸ್ತುಬದ್ಧ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್” ನ‌ ಸದಸ್ಯರಾದ ಉದಯ್ ಕುಮಾರ್ ಹಾಗೂ ಸಂಧ್ಯಾ ದಂಪತಿಯ ಪುತ್ರಿ .ಪ್ರಸ್ತುತ ಸೈಂಟ್ ಸಿಸಿಲಿಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಕಲಿಯುತ್ತಿರುವ ತನುಶ್ರೀ 3 ವರ್ಷ ಪ್ರಾಯದಲ್ಲಿ ಮಾಸ್ಟರ್ ಡ್ಯಾನ್ಸ್ ಗ್ರೂಪ್ ಉಡುಪಿ ಇವರಲ್ಲಿ ನೃತ್ಯ ತರಬೇತಿಯನ್ನು ಆರಂಭಿಸಿ,ಸತತವಾಗಿ ಮುದ್ದು ಕೃಷ್ಣ ಸ್ಪರ್ಧೆ,ರಾಜ್ಯಮಟ್ಟದ ನೃತ್ಯ ಸ್ಪರ್ಧೆಗೆ ಕಾರ್ಯಕ್ರಮ ನೀಡುವುದರ ಮೂಲಕ ಇದುವರೆಗೆ 350 ಕ್ಕೂ ಹೆಚ್ಚಿನ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿರುತ್ತಾರೆ.

ಫೆಬ್ರವರಿ ತಿಂಗಳಲ್ಲಿ 5 ನೇ ವಿಶ್ವ ದಾಖಲೆಗೆ ತನುಶ್ರೀ ಭರ್ಜರಿ ತಯಾರಿ ನಡೆಸುತ್ತಿದ್ದು,ಸದ್ಯ ಕಠಿಣ ಅಭ್ಯಾಸದಲ್ಲಿ ನಿರತಳಾಗಿದ್ದಾಳೆ.

ಆರ್‌‌.ಕೆ.ಆಚಾರ್ಯ ಕೋಟ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

sixteen − six =