16.6 C
London
Saturday, May 18, 2024
Homeಸ್ಪೋರ್ಟ್ಸ್ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅವಶ್ಯ-ಎನ್.ಶಶಿಕುಮಾರ್ ಐ.ಪಿ.ಎಸ್

ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅವಶ್ಯ-ಎನ್.ಶಶಿಕುಮಾರ್ ಐ.ಪಿ.ಎಸ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮಂಗಳೂರು: ಪಠ್ಯ ಚಟುವಟಿಕೆಗಳು ಜೀವನಕ್ಕೆ ಎಷ್ಟು ಮೌಲ್ಯಗಳನ್ನು ತಿಳಿಸಿ ಕೊಡುತ್ತದೆಯೋ ಅಷ್ಟೇ ಮಹತ್ವವನ್ನು ಕ್ರೀಡೆಗಳೂ ತಿಳಿಸುತ್ತದೆ.ವ್ಯಕ್ತಿತ್ವ ಬೆಳವಣಿಗೆಗೆ   ಮುಖ್ಯ ಪಾತ್ರ ವಹಿಸುವ ಕಬಡ್ಡಿಯಿಂದ ಸರ್ವತೋಮುಖ ಅಭಿವೃದ್ದಿ ಸಾಧ್ಯ.
ಅಷ್ಟೇ ಅಲ್ಲದೇ ಕಬಡ್ಡಿ ಪಂದ್ಯಾಟಕ್ಕೆ ನಡೆಸಿದ ಪೂರ್ವ ತಯಾರಿ ಇತರರಿಗೂ ಮಾದರಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಎನ್ ಶಶಿಕುಮಾರ್ ಐ.ಪಿ.ಎಸ್ ಶ್ಲಾಘನೆ ವ್ಯಕ್ತಪಡಿಸಿದರು. ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೊಂದೇಲ್ ಇಲ್ಲಿ ನಡೆಯುತ್ತಿರುವ ಮಣೇಲ್ ಶ್ರೀನಿವಾಸ್ ನಾಯಕ ಸ್ಮಾರಕ ಅಂತರ್ ಕಾಲೇಜು ಪದವಿ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
      ಗೌರವ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಡಾ. ಜೆರಾಲ್ಡ್ ಸಂತೋಷ್ ಡಿ’ ಸೋಜಾ ಮಾತನಾಡಿ  ಆಟದಲ್ಲಿ  ಸೋಲು ಗೆಲುವು ಸರ್ವೇ ಸಾಮಾನ್ಯ.ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ  ಬಹು ಮುಖ್ಯ.ದೈಹಿಕ ಕ್ಷಮತೆಯ ಈ ಆಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
       ವೇದಿಕೆಯಲ್ಲಿ  ವುಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿರುವ ಮಣೇಲ್ ಅಣ್ಣಪ್ಪ ನಾಯಕ್,ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸಂಚಾಲಕರಾಗಿರುವ ಜೀವನ್ ದಾಸ್ ನಾರಾಯಣ್, ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಡಾ.ಮೋಲಿ.ಎಸ್.ಚೌಧರಿ, ಉಪನ್ಯಾಸಕ ಸಂಯೋಜಕರಾಗಿರುವ ಡಾ.ರೀಮಾ ಆಗ್ನೆಸ್ ಫ್ರ್ಯಾಂಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
        ವಿದ್ಯಾರ್ಥಿನಿ  ಕು. ಅವಂತಿಕಾ ಪ್ರಾರ್ಥಿಸಿ,ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಡಾ.ಮೋಲಿ.ಎಸ್ ಚೌಧರಿ ಸ್ವಾಗತಿಸಿದರು.ಕಾಲೇಜಿನ ಉಪನ್ಯಾಸಕರಾಗಿರುವ ಶ್ರೀಮತಿ ನಂದಿತಾ ಸುನಿಲ್  ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − one =