Categories
ಕ್ರಿಕೆಟ್ ಗ್ರಾಮೀಣ

ನಾಗಬನ ಚಾಲೆಂಜರ್ಸ್-ಕೋಟೇಶ್ವರ ಪ್ರೀಮಿಯರ್ ಲೀಗ್ ಚಾಂಪಿಯನ್ಸ್

75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕೋಟೇಶ್ವರದಲ್ಲಿ 9 ನೇ ಬಾರಿಗೆ ನಡೆದ ಕೋಟೇಶ್ವರ ಪ್ರೀಮಿಯರ್ ಲೀಗ್-2021 ಪ್ರಶಸ್ತಿಯನ್ನು ನಾಗಬನ ಚಾಲೆಂಜರ್ಸ್ ತಂಡ ಜಯಿಸಿದೆ.ಫೈನಲ್ ನಲ್ಲಿ ಕೊಂಕಣ್ ಎಕ್ಸ್‌ಪ್ರೆಸ್‌ ತಂಡವನ್ನು ಸೋಲಿಸಿದ ನಾಗಬನ ಚಾಲೆಂಜರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಮಧುಕರ್,ಬೆಸ್ಟ್ ಬ್ಯಾಟ್ಸ್‌ಮನ್‌ ಶರತ್ ಉತ್ತಪ್ಪ,ಬೆಸ್ಟ್ ಬೌಲರ್
ಮಧುಕರ್,ಬೆಸ್ಟ್ ಫೀಲ್ಡರ್ ಪ್ರಸಾದ್ ಆಚಾರ್ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿಯನ್ನು ವಿಘ್ನೇಶ್ ಭಟ್ ಪಡೆದುಕೊಂಡರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಯೂಸುಫ್,ಶ್ರೀಧರ್ ನಾಯಕ್,ಇಸ್ಮೈಲ್,ರಂಜನ್ ಉಡುಪ ಹಾಗೂ ಶ್ರೀಧರ ಮೊಗವೀರ ಭಾಗವಹಿಸಿದ್ದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

1 × five =