Categories
ಭರವಸೆಯ ಬೆಳಕು

ಕಾಮಧೇನು ಗೋ ಆಶ್ರಯ ತಾಣ ನಿರ್ಮಾಣ ಅಭಿಯಾನ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ನಾಗಾರ್ಜುನ‌.ಡಿ.ಪೂಜಾರಿ ನೇಮಕ

ಕೋವಿಡ್ ಮಹಾಮಾರಿ ಜಗತ್ತಿಗೆ ಆವರಿಸಿದ ಆತಂಕದ ಸಮಯದಲ್ಲಿ,ಉಡುಪಿ ಜಿಲ್ಲೆಯಲ್ಲಿ 400 ಕ್ಕೂ ಹೆಚ್ಚಿನ ಕೊರೋನಾ ಸೋಂಕಿತ ಶವದ ಅಂತ್ಯಸಂಸ್ಕಾರ ನಡೆಸಿ ಇತ್ತೀಚೆಗಷ್ಟೇ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಉಡುಪಿಯ ಕ್ರೀಡಾಪಟು ನಾಗಾರ್ಜುನ.ಡಿ.ಪೂಜಾರಿ
ಇವರು ಬ್ರಹ್ಮಾವರ ನಂಚಾರಿನಲ್ಲಿ ನಿರ್ಮಾಣವಾಗಲಿರುವ ಕಾಮಧೇನು ಗೋ ಆಶ್ರಯ ತಾಣ ನಿರ್ಮಾಣ ಅಭಿಯಾನ‌ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ) ಹಾಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನಿಂದ ನಿಮಗೆ ಹಾರ್ದಿಕ ಅಭಿನಂದನೆಗಳು…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

two × five =