ಕ್ರಿಕೆಟ್ವಿಶ್ವಮಾನ್ಯತೆಯ ಸಾಧನೆಯ ಪುಟವನ್ನು ಸೇರಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ

ವಿಶ್ವಮಾನ್ಯತೆಯ ಸಾಧನೆಯ ಪುಟವನ್ನು ಸೇರಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ

-

- Advertisment -spot_img
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ಇಲ್ಲಿನ ಸುಬ್ರಾಯ ಆಚಾರ್ ಹಾಗೂ ಸುಶೀಲ ದಂಪತಿಯ ಹಿರಿಯ ಪುತ್ರರಾದ ನಾಗೇಶ್ ಆಚಾರ್ಯ ಕೋಟ ಎಂಬ ಇವರು ಇತ್ತಿಚಿಗೆ ತೆಂಗಿನ ಗರಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್‌ ತಾರೆಯಾದ ವಿರಾಟ್ ಕೊಹ್ಲಿಯ ಕಲಾಕೃತಿಯು Exclusive World Records ಹಿರಿಮೆಗೆ ಪಾತ್ರವಾಗಿದೆ.
ಶ್ರೀಯುತ ನಾಗೇಶ್ ಆಚಾರ್ಯ ಇವರು  ಸ್ವಂತ ಮರದ ಕೆತ್ತನೆಯ ಶಿಲ್ಪಕಲಾ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ತನ್ನ ವೃತ್ತಿ ಬದುಕಿನ ಬಿಡುವಿನ ವೇಳೆಯಲ್ಲಿ ಎಳೆಯ ವಯಸ್ಸಿನಲ್ಲಿ ಆಸಕ್ತಿ ಹೊಂದಿದ್ದ ಚಿತ್ರಕಲೆಯನ್ನೇ ನೆಚ್ಚಿನ ಹವ್ಯಾಸವಾಗಿ ಮುಂದುವರಿಸಿಕೊಂಡು ತನ್ನೊಳಗಿನ ಕಲಾ ಕುಸುಮವು  ಹೊಸತನದಿ ಅರಳುವಂತೆ ಪ್ರಯತ್ನಿಸಲು ಆರಂಭಿಸಿದರು. ಮೊದಮೊದಲು ಪೆನ್ಸಲ್ ಆರ್ಟ್ ರಚಿಸುತ್ತಿದ್ದ ಇವರ ಪ್ರತಿಭೆಯು ಮತ್ತಷ್ಟು ಪರಿಪಕ್ವಗೊಳ್ಳುತ್ತ ಪೇಪರ್ ಕಟ್ಟಿಂಗ್ ಆರ್ಟ್ , ಲೀಫ್ ಆರ್ಟ್ ಗಳಾಗಿ ಮುಂದುವರಿದು ಸಾಕಷ್ಟು  ಯಶಸ್ವಿ ಕಲಾಕೃತಿಗಳು ಇವರ ಕರದಿಂದ  ರಚಿತಗೊಂಡಿದೆ. ಅಶ್ವಥ ಎಲೆಯಲ್ಲಿ ಹಲವಾರು ಸಾಧಕರ ಚಿತ್ರವನ್ನು , ದೈವ ದೇವರುಗಳ ಚಿತ್ರಕೆಯನ್ನು ರಚಿಸಿದ್ದಾರೆ. ಬಾಳೆ ಎಲೆಯಲ್ಲಿ ವಿಶೇಷವಾಗಿ ರಚಿತಗೊಂಡ ಗಣಪತಿ ಚಿತ್ರಿಕೆ ಹಾಗೂ ಮೊಳೆ ಹಾಗೂ ದಾರದ ಸಹಾಯದಿಂದ ವಿಶೇಷವಾಗಿ ರಚಿಸಲ್ಪಟ್ಟ ಪುನಿತ್ ರಾಜ್ ಕುಮಾರ್ ಅವರ ಚಿತ್ರಿಕೆ ಜನಮನ್ನಣೆಯನ್ನು ಗಳಿಸಿದೆ. ಇತ್ತೀಚಿಗಷ್ಟೆ ತೆಂಗಿನ ಗರಿಯಲ್ಲಿ ಕೇವಲ 9 ನಿಮಿಷಗಳ ಅವಧಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್‌ ತಾರೆ ವಿರಾಟ್ ಕೊಹ್ಲಿಯ ಕಲಾಕೃತಿಯನ್ನು  I.S.O ದಿಂದ ಪ್ರಮಾಣೀಕೃತ ಗೊಂಡಿರುವ LB exclusive talent & creation co. ಎಂಬ ಉತ್ತರ ಪ್ರದೇಶದ ಬರೇಲಿಯಾದ ಸಂಸ್ಥೆಯಿಂದ ಆಯ್ಕೆಗೊಳ್ಳುವ   ಪ್ರತಿಷ್ಠಿತ Exclusive World Records ಗೆ ಕಳುಹಿಸಲಾಗಿದ್ದು ,
ಇವರ ಕಲಾಪ್ರತಿಭೆಯ ನೈಪುಣ್ಯತೆಯನ್ನು ಪರಾಮರ್ಶಿಸಿ ಅರ್ಹವಾಗಿ ಇವರಿಂದ ರಚಿತಗೊಂಡ ಕಲಾಕೃತಿಯು exclusive world records ಪಟ್ಟಿಗೆ  ನಾಮಾಂಕಿತಗೊಂಡಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 + 17 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you