Categories
ಕ್ರಿಕೆಟ್

ನ್ಯಾಶ್ ಬೆಂಗಳೂರು ಮಡಿಲಿಗೆ ವಾಯುಪುತ್ರ ಕಪ್-2019

ಕಳೆದ ವಾರ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಿತೀಶ್ ಗೌಡ ಸಾರಥ್ಯದಲ್ಲಿ ಹಾಗೂ ವಾಯುಪುತ್ರ ಕ್ರಿಕೆಟರ್ಸ್ ಸಹಯೋಗದೊಂದಿಗೆ ನಡೆದ 2 ದಿನಗಳ ಹಗಲಿನ ಪಂದ್ಯಾಕೂಟದ ಪ್ರಶಸ್ತಿಯನ್ನು ನ್ಯಾಶ್ ಬೆಂಗಳೂರು ತಂಡ ಜಯಿಸಿಕೊಂಡಿದೆ.


ಶನಿವಾರದಂದು ಮಾದನಾಯಕನಹಳ್ಳಿ ಪರಿಸರದ ತಂಡಗಳಿಗೆ ಮೀಸಲಾಗಿದ್ದು,ಸೃಷ್ಟಿ ಕ್ರಿಕೆಟರ್ಸ್ ತಂಡ ಸಿಂಪಲ್ ಸ್ಟ್ರೈಕರ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟರೆ,ರವಿವಾರದ ರೋಚಕ ಸೆಮಿಫೈನಲ್ ಕದನದಲ್ಲಿ ನ್ಯಾಶ್ ತಂಡ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ ಗೆ ತೇರ್ಗಡೆಗೊಂಡಿತ್ತು.

ಫೈನಲ್ ಪಂದ್ಯದಲ್ಲಿ ನ್ಯಾಶ್ ತಂಡ ಸೃಷ್ಟಿ ಕ್ರಿಕೆಟರ್ಸ್ ತಂಡವನ್ನು ಸೋಲಿಸಿ‌ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಥಮ ಪ್ರಶಸ್ತಿಯ ರೂಪದಲ್ಲಿ 1,23,456 ರೂ ನಗದು ಹಾಗೂ ರನ್ನರ್ಸ್ ತಂಡ 54,321ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ವೈಯಕ್ತಿಕ ಪ್ರಶಸ್ತಿಗಳನ್ನು ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ನ್ಯಾಶ್ ನ ಅಕ್ಷಯ್,ಬೆಸ್ಟ್ ಬೌಲರ್ ಮಾರ್ಕ್ ಮಹೇಶ್, ಬೆಸ್ಟ್ ಕೀಪರ್ ಸೃಷ್ಟಿಯ ಆದರ್ಶ್ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿಯನ್ನು ಸೃಷ್ಟಿಯ ಕಾಶಿ ಪಡೆದುಕೊಂಡರು.

ಪಂದ್ಯಾಕೂಟದ ತೀರ್ಪುಗಾರರಾಗಿ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಸಂಗಡಿಗರು,ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ ಐತಾಳ್ ಕೋಟ ಹಾಗೂ ಪ್ರಶಾಂತ್ ಅಂಬಲಪಾಡಿ ಸಹಕರಿಸಿದರೆ,ಯಶಸ್ವಿ ಪಂದ್ಯಾಕೂಟದ ನೇರ ಪ್ರಸಾರವನ್ನು M.Sports ಬಿತ್ತರಿಸಿತ್ತು.

ಆರ್.ಕೆ.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

thirteen − 5 =