ಕ್ರಿಕೆಟ್ನವೀನ್ "ಛೂ" ಬಿಟ್ಟ ನ್ಯಾಶ್-ತುಮಕೂರಿನಲ್ಲಿ" ನ್ಯಾಶ್" ಚಕ್ರವರ್ತಿ

ನವೀನ್ “ಛೂ” ಬಿಟ್ಟ ನ್ಯಾಶ್-ತುಮಕೂರಿನಲ್ಲಿ” ನ್ಯಾಶ್” ಚಕ್ರವರ್ತಿ

-

- Advertisment -spot_img

 

ಚಕ್ರವರ್ತಿ ಗೆಳೆಯರ ಬಳಗದ ನಾಯಕ ಪ್ರಕಾಶ್.ಟಿ.ಸಿ ಸಾರಥ್ಯದಲ್ಲಿ,ಕೆ.ಪಿ.ಸಿ.ಸಿ ಸದಸ್ಯರು ಕೃಷ್ಣಮೂರ್ತಿ ಪಿ.ಎನ್,
ಕೆ. ಶ್ರೀಧರ್,ದನಿಯ ಕುಮಾರ್,ಚೇತನ್,ಪ್ರಸನ್ನ ಕುಮಾರ್,ಸೋಮಶೇಖರ್ ರವರ ಮಾರ್ಗದರ್ಶನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 1 ರ ತನಕ ಮೂರು ದಿನಗಳ ಕಾಲ ಸರಕಾರಿ ಜ್ಯೂನಿಯರ್ ಕಾಲೇಜು ಅಂಗಣದಲ್ಲಿ ನಡೆದ ಹೊನಲು ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ “ಚಕ್ರವರ್ತಿ ಟ್ರೋಫಿ-2020” ಯನ್ನು
ನ್ಯಾಶ್ ಬೆಂಗಳೂರು ತಂಡ ಗೆದ್ದುಕೊಂಡಿತು.

 

ರಾಜ್ಯದ 20 ತಂಡಗಳು ಭಾಗವಹಿಸಿದ ಪ್ರತಿಷ್ಟಿತ ಪಂದ್ಯಾವಳಿಯಲ್ಲಿ,
ಲೀಗ್ ಹಂತದ ಹೋರಾಟದ ಬಳಿಕ
ಉಪಾಂತ್ಯ ಪಂದ್ಯಗಳಲ್ಲಿ ನ್ಯಾಶ್ ತಂಡ ಫ್ರೆಂಡ್ಸ್ ಬೆಂಗಳೂರನ್ನು ಹಾಗೂ ಮೈಟಿ, ಜೈ ಕರ್ನಾಟಕ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿತ್ತು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮೈಟಿ ಬೆಂಗಳೂರು 6 ಓವರ್ ಗಳಲ್ಲಿ 54 ರನ್ ಗಳಿಸಿ ಸವಾಲಿನ ಗುರಿಯನ್ನು ನೀಡಿತ್ತು.
ಚೇಸಿಂಗ್ ವೇಳೆ ನ್ಯಾಶ್ ಮಂದಗತಿಯ ಆರಂಭ ಪಡೆದಿತ್ತು.
4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 27 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ನವೀನ್ ಚೂ ಪ್ರಹಾರ
ಅಂತಿಮ 2 ಓವರ್ ಗಳಲ್ಲಿ 28 ರನ್ ಗಳ ಅವಶ್ಯಕತೆಯ ಸಂದರ್ಭದಲ್ಲಿ,
ಇನ್ನಿಂಗ್ಸ್ ಆಧರಿಸಿದ ನವೀನ್ ಚೂ
ಮೈಟಿಯ ಮಂಜು ಒಂದೇ ಓವರ್ ನಲ್ಲಿ 2 ಭರ್ಜರಿ ರಿವರ್ಸ್ ಸಿಕ್ಸ್ ಹಾಗೂ 1 ಬೌಂಡರಿ ನೆರವಿನಿಂದ 23 ರನ್ ಸಿಡಿಸಿ ನ್ಯಾಶ್ ತಂಡಕ್ಕೆ ವಿಜಯದ ಸನಿಹ ತಂದಿತ್ತರು.
ಅಂತಿಮ ಓವರ್ ನ ಪ್ರಥಮ‌ ಎಸೆತದಲ್ಲಿ ನಿರಂಜನ್ ಬೌಂಡರಿ ದಾಖಲಿಸುವುದರ ಮೂಲಕ ನ್ಯಾಶ್ ಚಕ್ರವರ್ತಿ ಟ್ರೋಫಿ-2020 ಮಿರುಗುವ ಟ್ರೋಫಿ ಸಹಿತ
2.5 ಲಕ್ಷ ನಗದು ತನ್ನದಾಗಿಸಿಕೊಂಡಿತು.
ಹಾಗೂ ರನ್ನರ್ಸ್ ಮೈಟಿ ತಂಡ 1.5 ಲಕ್ಷ ನಗದು ಸಹಿತ ಮಿರುಗುವ ಟ್ರೋಫಿಗಳನ್ನು ಪಡೆಯಿತು.

ದೊಡ್ಡ ಗಣೇಶ್-ಪಿ.ಎನ್.ಕೆ ಅಂಪಾಯರಿಂಗ್

ಫೈನಲ್ ನಲ್ಲಿ ವಿಶೇಷ ಆಕರ್ಷಣೆಯಾಗಿ
ಕೆ.ಪಿ.ಸಿ.ಸಿ ಸದಸ್ಯರು,ಮಾರ್ಗದರ್ಶಕರಾದ ಪಿ.ಎನ್.ಕೃಷ್ಣಮೂರ್ತಿ ಹಾಗೂ ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ,ಪ್ರಸ್ತುತ ಗೋವಾ ರಣಜಿ ಕೋಚ್ ದೊಡ್ಡ ಗಣೇಶ್ ಫೈನಲ್ ಪಂದ್ಯದಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

ಪಂದ್ಯಾವಳಿಯ ನೇರ ಪ್ರಸಾರ M.Sports ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ, ಪ್ರಸಿದ್ಧ ವೀಕ್ಷಕ ವಿವರಣೆಕಾರರಾದ ಕೋಟ ಶಿವನಾರಾಯಣ ಐತಾಳ್ ಭಾಗವಹಿಸಿದ್ದರು.

 

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen − seven =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you