6.1 C
London
Wednesday, April 17, 2024
Homeಇತರೆರಾಷ್ಟ್ರೀಯ ಕ್ರೀಡಾಪಟು ಹಾಗೂ ಮೀನುಗಾರರ ಮುಖಂಡ ಲೋಕನಾಥ್ ಬೋಳಾರ ನಿಧನ

ರಾಷ್ಟ್ರೀಯ ಕ್ರೀಡಾಪಟು ಹಾಗೂ ಮೀನುಗಾರರ ಮುಖಂಡ ಲೋಕನಾಥ್ ಬೋಳಾರ ನಿಧನ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಮಂಗಳೂರಿನ ಮೀನುಗಾರ ಮುಖಂಡ ,ಅಂತರಾಷ್ಟ್ರೀಯ ವೇಯ್ಟ್ ಲಿಫ್ಟರ್ ಲೋಕನಾಥ ಬೋಳಾರ(73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ನಿವೃತ್ತ ರೈಲ್ವೇ ಅಧಿಕಾರಿಯಾಗಿದ್ದ ಇವರು,ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಕರ್ನಾಟಕ ರಾಜ್ಯ ಮೀನುಗಾರರ ಕ್ರಿಯಾ ಸಮಿತಿಯ ಪದಾಧಿಕಾರಿಯಾಗಿದ್ದರು.ಭಾರ ಎತ್ತುವ ಸ್ಪರ್ಧೆಯಲ್ಲಿ ದೇಶ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲೂ ಸ್ಪರ್ಧಿಸಿದ್ದಾರೆ.ಜಾವೆಲಿನ್ ತ್ರೋ,ಗುಂಡು ಎಸೆತ ಕ್ರೀಡೆಯಲ್ಲೂ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಕೊಡುಗೈ ದಾನಿಯಾಗಿದ್ದ ಇವರು,ಮೀನುಗಾರಿಕಾ ಬಂದರಿನಲ್ಲಿ ಆಳಸಮುದ್ರ ಮೀನುಗಾರಿಕೆಯ ಮೀನು ಮಾರಾಟ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರಕ್ಕೆ ಪರಿಚಯಿಸಿದವರು.ರಾಜ್ಯ ಮೀನುಗಾರಿಕಾ ಇಲಾಖೆಗೆ ಮೀನುಗಾರರ ಪರವಾಗಿ ಸಲಹೆಗಾರರಾಗಿದ್ದರು.ಕರಾವಳಿ ಕರ್ನಾಟಕದ ಆಪತ್ಪಾಂಧವರಾಗಿದ್ದರು.ಮೃತರು ಪತ್ನಿ,ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಸಂತಾಪ*
ಪರ್ಸಿನ್ ಮೀನುಗಾರರ ಸಂಘ,ಟ್ರಾಲ್ ಬೋಟ್ ಮೀನುಗಾರರ ಸಂಘ,ಗಿಲ್ ನೆಟ್ ಮೀನುಗಾರರ ಸಂಘ,ಸೀ ಫುಡ್ ಬೈಯರ್ಸ್ ಅಸೋಸಿಯೇಶನ್, ಮೀನು ವ್ಯಾಪಾರಸ್ಥರ ಸಂಘಗಳು,
ಉಳ್ಳಾಲ ಆಳ ಸಮುದ್ರ ಬೋಟು ಮಾಲಕರ ಸಂಘದ ಅಧ್ಯಕ್ಷ ದಯಾನಂದ ಪುತ್ರನ್,
ಮಾರುತಿ ಕ್ರಿಕೆಟರ್ಸ್,ಮಾರುತಿ ಯುವಕ ಮಂಡಲ(ರಿ)ಉಳ್ಳಾಲ ಇದರ ಮಾಜಿ ಅಧ್ಯಕ್ಷ ಹಾಗೂ ಮೊಗವೀರ ಸಂಘ(ರಿ)ಉಳ್ಳಾಲದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ ಸಂತಾಪ ಸೂಚಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three + 13 =