SportsKannada | ಸ್ಪೋರ್ಟ್ಸ್ ಕನ್ನಡ

ನವಕಿರಣ್ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಇವರಿಂದ 28 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಸುಸಂಪನ್ನ

ಬ್ರಹ್ಮಾವರ- ನವಕಿರಣ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಹಾಗೂ ನವತಾರೆ ಸೇವಾ ವೇದಿಕೆ ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ 28 ನೇ ವರ್ಷದ ರಾಜ್ಯ ಮಟ್ಟದ ಮುದ್ದು ಕೃಷ್ಣ ಸ್ಪರ್ಧೆ ಯು ಬ್ರಹ್ಮಾವರ ಬಂಟರ ಭವನದಲ್ಲಿ ಜರುಗಿತು.
ಇದರ ಉದ್ಘಾಟನೆಯನ್ನು ಶ್ರೀ ಸಾಯಿ ಮಂದಿರ ದ ಪರಮಪೂಜ್ಯ ಗುರುಗಳಾದ ಶ್ರೀ ಸಾಯಿ ಈಶ್ವರ ಸ್ವಾಮಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಬಿರ್ತಿ,ಬ್ರಹ್ಮಾವರ ವಲಯದ ರಾಷ್ಟ್ರೀಯ ಪಕ್ಷದ ಉಸ್ತುವಾರಿ ಪ್ರಖ್ಯಾತ ಶೆಟ್ಟಿ ಮತ್ತು ಶ್ರೀಮತಿ ಸವಿತಾ ಶೆಣೈ ಉಪಸ್ಥಿತರಿದ್ದರು.ನವಕಿರಣ್ ವೇದಿಕೆ ಅಧ್ಯಕ್ಷ ರಾದ ಗಿರೀಶ್,ನವತಾರೆ ವೇದಿಕೆಯ ಅಧ್ಯಕ್ಷೆ ಅನುರಾಧ ವಿಘ್ನೇಶ್, ಕಾರ್ಯದರ್ಶಿ ಗಳಾದ ಉಮೇಶ ಪೂಜಾರಿ,ನವತಾರೆ ಯ ಕಾರ್ಯದರ್ಶಿ ಹೇಮಲತಾ ನಾಯಕ್ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮ ದಲ್ಲಿ ಸರ್ವ ಧರ್ಮೀಯರು ಭಾಗವಹಿಸಿ ಕಾರ್ಯಕ್ರಮ ಕ್ಕೆ ಮೆರಗು ತಂದರು.
ಸುಮಾರು 331 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಎಲ್ಲಾ ಮಕ್ಕಳಿಗೂ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು.
Exit mobile version