22.5 C
London
Sunday, May 19, 2024
Homeಕ್ರಿಕೆಟ್ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ "ಶ್ರೀ ಅಜ್ಜಯ್ಯ ಟ್ರೋಫಿ-2020

ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ “ಶ್ರೀ ಅಜ್ಜಯ್ಯ ಟ್ರೋಫಿ-2020

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಸಮಾಜ ಸೇವೆ ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳ‌ ಅನಾವರಣದ ಸದುದ್ದೇಶಕ್ಕಾಗಿ  ಕೋಟ ಮಣೂರಿನ  ನವೋದಯ ಫ್ರೆಂಡ್ಸ್ (ರಿ)ಹರ್ತಟ್ಟು ಸಂಸ್ಥೆ ಆಯೋಜಿಸಿದ ಎರಡು ದಿ‌ನಗಳ ಮೂವತ್ತು ಗಜಗಳ ಕ್ರಿಕೆಟ್ ಪಂದ್ಯಾವಳಿ “ಶ್ರೀ ಅಜ್ಜಯ್ಯ ಟ್ರೋಫಿ-2020” ಪ್ರಶಸ್ತಿಯನ್ನು ನವೋದಯ ಫ್ರೆಂಡ್ಸ್ ಗಿಳಿಯಾರು ಜಯಿಸಿದೆ.
36 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಸೆಮಿಫೈನಲ್ಸ್ ನಲ್ಲಿ
ಚಾಲೆಂಜ್ ಕುಂದಾಪುರ ಬನ್ನಾಡಿ‌ ಫ್ರೆಂಡ್ಸ್ ತಂಡವನ್ನು ಹಾಗೂ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಸೋಲಿಸಿ‌ ಫೈನಲ್ ಗೆ ಬಡ್ತಿ ಪಡೆದಿದ್ದರು.ಫೈನಲ್ ನಲ್ಲಿ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಮಣಿಸಿ ಶ್ರೀ ಅಜ್ಜಯ್ಯ ಟ್ರೋಫಿ-2020 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.
ವೈಯಕ್ತಿಕ ಪ್ರಶಸ್ತಿ ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಅಶ್ವಿನ್ ಕುಂಭಾಶಿ,ಬೆಸ್ಟ್ ಬೌಲರ್ ಯೋಗೀಶ್ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್, ಬೆಸ್ಟ್ ಫೀಲ್ಡರ್ ನವೋದಯ ಫ್ರೆಂಡ್ಸ್ ನ ಕೀರ್ತೀಶ್
ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್ ನ ಪ್ರವೀಣ್ ಪಡೆದುಕೊಂಡರು.
ಶನಿವಾರ ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕ ಹೈಸ್ಕೂಲ್ ನ‌ ಶಿಕ್ಷಕರು ಶ್ರೀ. ಸದಾಶಿವ ಹೊಳ್ಳ,ಮಣೂರು ರಾಮ ಪ್ರಸಾದ್ ಶಾಲೆಯ ಹಿರಿಯ ಶಿಕ್ಷಕರು ಶ್ರೀ.ಉದಯ್ ಕುಮಾರ್ ಮಯ್ಯ ಮಣೂರು,ಕೋಟ ರಾಮಕೃಷ್ಣ ಆಚಾರ್ ಉಪಸ್ಥಿತರಿದ್ದು,
ಕೊರೋನಾ ಸಂದರ್ಭದಲ್ಲಿ ಹಗಲಿರುಳು ಸಂತ್ರಸ್ತರಿಗಾಗಿ ಶ್ರಮಿಸಿದ ಆಶಾ ಕಾರ್ಯಕರ್ತೆ ಶ್ರೀಮತಿ ಯಶೋದಾ ಇವರನ್ನು ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್ ಹಾಗೂ ನವೋದಯ ಫ್ರೆಂಡ್ಸ್ ನ‌ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 2 =