6.1 C
London
Wednesday, April 17, 2024
Home#covid19ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ ಪಿತ್ರೋಡಿ ವತಿಯಿಂದ ತಂಡದ ಸದಸ್ಯರಿಗೆ ಅಗತ್ಯ ವಸ್ತುಗಳ ಪೂರೈಕೆ

ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ ಪಿತ್ರೋಡಿ ವತಿಯಿಂದ ತಂಡದ ಸದಸ್ಯರಿಗೆ ಅಗತ್ಯ ವಸ್ತುಗಳ ಪೂರೈಕೆ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ದೇಶದಾದ್ಯಂತ ಕೊರೋನ ಹಾವಳಿ. ಅದೆಷ್ಟೋ ಮಂದಿ ಈ ದಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಕೆಲಸ ಮಾಡುವ ಕೈಗಳು ಕೆಲಸ ಇಲ್ಲದೆ ಪರದಾಡುವ ಸ್ಥಿತಿ. ಇಂತಹ ಸಂದರ್ಭದಲ್ಲಿ ಅದೆಷ್ಟೋ ದಾನಿಗಳು ನೆರವಿನ ಹಸ್ತ ಚಾಚುತ್ತಾ ಇದ್ದಾರೆ. ಇಡೀ ದೇಶದಲ್ಲಿ ಲಾಕ್ ಡೌನ್, ಈ ಹಿನ್ನೆಲೆಯಲ್ಲಿ ಇಲ್ಲೊಂದು ಸಂಸ್ಥೆ ತಮ್ಮ ತಂಡದ ಜೊತೆಗೆ ಮತ್ತೊಮ್ಮೆ ಸಮಾಜ ಸೇವಾ ಕಾರ್ಯಕ್ಕೆ ಚಾಲನೆ ನೀಡಿದೆ.
ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸಂಸ್ಥೆ ಪಿತ್ರೋಡಿ ಇವರು ತಮ್ಮದೇ ತಂಡದಲ್ಲಿ ನಿರಂತರವಾಗಿ ದುಡಿಯುತ್ತಿರುವ ಸಂತ್ರಸ್ತ ಸದಸ್ಯರ ಕುಟುಂಬಗಳಿಗೆ ತಂಡದ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ಆಹಾರ ಮತ್ತು ದಿನ ನಿತ್ಯದ ಜೀವನದಲ್ಲಿ ಬಳಸುವ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಮತ್ತೊಮ್ಮೆ ಹಿರಿಮೆಯನ್ನು ಸಾಧಿಸಿದ್ದಾರೆ.
33 ವರ್ಷಗಳ ಇತಿಹಾಸದಲ್ಲಿ ಕ್ರಿಕೆಟ್ ಕ್ಷೇತ್ರದಲ್ಲಿ ಅತ್ಯಂತ ಶಿಸ್ತಿನ ತಂಡ ಎನ್ನುವ ಹೆಸರು ಮಾಡಿರುವ ಒಂದು ಸಂಸ್ಥೆ ಅಂದರೆ ಅದು ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ ರಿ. ಪಿತ್ರೋಡಿ.
ಗ್ರಾಮೀಣ  ಮತ್ತು ಜಿಲ್ಲಾ ಮಟ್ಟದಲ್ಲಿ ಮಾತ್ರ ತನ್ನ ವ್ಯಾಪ್ತಿಯನ್ನು ಪಸರಿಸಿ ಪ್ರಶಸ್ತಿಯನ್ನು ಪಡೆಯುತ್ತಿದ್ದ ಈ  ಸಂಸ್ಥೆ ನಂತರದ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಯಿತು.
16 ಬಾರಿ ಶಿಸ್ತಿನ ತಂಡ ಎಂಬುದಾಗಿ ಪ್ರಶಸ್ತಿ ಪುರಸ್ಕೃತರಾದ ಈ ಸಂಸ್ಥೆ ಕ್ರಿಕೆಟ್ ಆಟ ವ್ಯಾಪಾರೀಕರಣದ ರೂಪ ಪಡೆಯುತ್ತಲೇ ಕ್ರಿಕೆಟ್ ಕ್ಷೇತ್ರದಿಂದ ಒಂದು ಹೆಜ್ಜೆ ಹಿಂದೆ ಸರಿದು ತಂಡವನ್ನು ಸಾಮಾಜಿಕವಾಗಿ ತೊಡಗಿಸಿಕೊಂಡು ಮುಂದುವರೆಯಿತು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಆರೋಗ್ಯ ನಿಧಿಯ ಮೂಲಕ ಬಡರೋಗಿಗಳಿಗೆ ಸಹಾಯ, ವಿದ್ಯಾರ್ಥಿಗಳಿಗೆ ಉಚಿತ ಮಾಹಿತಿ ಕಾರ್ಯಾಗಾರ, 160 ಯುವಕರನ್ನು ಸೇರಿಸಿ ರಕ್ತದಾನ.. ಇದುವರೆಗೆ 4000 ಕ್ಕೂ ಹೆಚ್ಚು ಯೂನಿಟ್ ರಕ್ತ ದಾನ ಮಾಡಿದ ಹಿರಿಮೆ ಈ ಸಂಸ್ಥೆಗೆ. ಮದ್ಯ ಮುಕ್ತ ಕ್ರಿಕೆಟ್ ತಂಡ ಆಗಬೇಕು ಅನ್ನುವ ಉದ್ದೇಶದಿಂದ ಪಂದ್ಯದಲ್ಲಿ ಮದ್ಯಪಾನ ಟೆಸ್ಟಿಂಗ್ ಯಂತ್ರಗಳನ್ನು ಬಳಸಿಕೊಂಡು ಕ್ರಿಕೆಟ್ ಆಯೋಜಿಸುವುದು ಇವರ ಶಿಸ್ತಿಗೆ ಇನ್ನೊಂದು ರೂಪ.
ಕಳೆದ ವರ್ಷದ ಪಂದ್ಯದಲ್ಲಿ ಮೊದಲ ಬಾರಿಗೆ ಸಣ್ಣ ಗಾತ್ರದ ಚಿನ್ನದ ಟ್ರೋಫಿಯನ್ನು ವಿಜೇತ ತಂಡಕ್ಕೆ ನೀಡಿದ್ದು ಸಂಸ್ಥೆಗೆ ಕ್ರಿಕೆಟ್ ಬಗ್ಗೆ ಇರುವ ಆಸಕ್ತಿಯನ್ನು ಎತ್ತಿ ತೋರಿಸುತ್ತದೆ.
ಈ ತಂಡದಿಂದ ಮುಂದೆಯೂ ಇನ್ನಷ್ಟು ಉತ್ತಮ ಸಮಾಜ ಸೇವಾ ಕಾರ್ಯ ನಡೆಯಲಿ ಅನ್ನುವ ಶುಭ ಹಾರೈಕೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

2 + sixteen =