#covid19ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ ಪಿತ್ರೋಡಿ ವತಿಯಿಂದ ತಂಡದ ಸದಸ್ಯರಿಗೆ ಅಗತ್ಯ ವಸ್ತುಗಳ...

ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ ಪಿತ್ರೋಡಿ ವತಿಯಿಂದ ತಂಡದ ಸದಸ್ಯರಿಗೆ ಅಗತ್ಯ ವಸ್ತುಗಳ ಪೂರೈಕೆ

-

- Advertisment -spot_img
ದೇಶದಾದ್ಯಂತ ಕೊರೋನ ಹಾವಳಿ. ಅದೆಷ್ಟೋ ಮಂದಿ ಈ ದಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಕೆಲಸ ಮಾಡುವ ಕೈಗಳು ಕೆಲಸ ಇಲ್ಲದೆ ಪರದಾಡುವ ಸ್ಥಿತಿ. ಇಂತಹ ಸಂದರ್ಭದಲ್ಲಿ ಅದೆಷ್ಟೋ ದಾನಿಗಳು ನೆರವಿನ ಹಸ್ತ ಚಾಚುತ್ತಾ ಇದ್ದಾರೆ. ಇಡೀ ದೇಶದಲ್ಲಿ ಲಾಕ್ ಡೌನ್, ಈ ಹಿನ್ನೆಲೆಯಲ್ಲಿ ಇಲ್ಲೊಂದು ಸಂಸ್ಥೆ ತಮ್ಮ ತಂಡದ ಜೊತೆಗೆ ಮತ್ತೊಮ್ಮೆ ಸಮಾಜ ಸೇವಾ ಕಾರ್ಯಕ್ಕೆ ಚಾಲನೆ ನೀಡಿದೆ.
ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸಂಸ್ಥೆ ಪಿತ್ರೋಡಿ ಇವರು ತಮ್ಮದೇ ತಂಡದಲ್ಲಿ ನಿರಂತರವಾಗಿ ದುಡಿಯುತ್ತಿರುವ ಸಂತ್ರಸ್ತ ಸದಸ್ಯರ ಕುಟುಂಬಗಳಿಗೆ ತಂಡದ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ಆಹಾರ ಮತ್ತು ದಿನ ನಿತ್ಯದ ಜೀವನದಲ್ಲಿ ಬಳಸುವ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಮತ್ತೊಮ್ಮೆ ಹಿರಿಮೆಯನ್ನು ಸಾಧಿಸಿದ್ದಾರೆ.
33 ವರ್ಷಗಳ ಇತಿಹಾಸದಲ್ಲಿ ಕ್ರಿಕೆಟ್ ಕ್ಷೇತ್ರದಲ್ಲಿ ಅತ್ಯಂತ ಶಿಸ್ತಿನ ತಂಡ ಎನ್ನುವ ಹೆಸರು ಮಾಡಿರುವ ಒಂದು ಸಂಸ್ಥೆ ಅಂದರೆ ಅದು ವೆಂಕಟರಮಣ ಸ್ಪೋರ್ಟ್ಸ್ ಮತ್ತು ಕಲ್ಚರಲ್ ರಿ. ಪಿತ್ರೋಡಿ.
ಗ್ರಾಮೀಣ  ಮತ್ತು ಜಿಲ್ಲಾ ಮಟ್ಟದಲ್ಲಿ ಮಾತ್ರ ತನ್ನ ವ್ಯಾಪ್ತಿಯನ್ನು ಪಸರಿಸಿ ಪ್ರಶಸ್ತಿಯನ್ನು ಪಡೆಯುತ್ತಿದ್ದ ಈ  ಸಂಸ್ಥೆ ನಂತರದ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಯಿತು.
16 ಬಾರಿ ಶಿಸ್ತಿನ ತಂಡ ಎಂಬುದಾಗಿ ಪ್ರಶಸ್ತಿ ಪುರಸ್ಕೃತರಾದ ಈ ಸಂಸ್ಥೆ ಕ್ರಿಕೆಟ್ ಆಟ ವ್ಯಾಪಾರೀಕರಣದ ರೂಪ ಪಡೆಯುತ್ತಲೇ ಕ್ರಿಕೆಟ್ ಕ್ಷೇತ್ರದಿಂದ ಒಂದು ಹೆಜ್ಜೆ ಹಿಂದೆ ಸರಿದು ತಂಡವನ್ನು ಸಾಮಾಜಿಕವಾಗಿ ತೊಡಗಿಸಿಕೊಂಡು ಮುಂದುವರೆಯಿತು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಆರೋಗ್ಯ ನಿಧಿಯ ಮೂಲಕ ಬಡರೋಗಿಗಳಿಗೆ ಸಹಾಯ, ವಿದ್ಯಾರ್ಥಿಗಳಿಗೆ ಉಚಿತ ಮಾಹಿತಿ ಕಾರ್ಯಾಗಾರ, 160 ಯುವಕರನ್ನು ಸೇರಿಸಿ ರಕ್ತದಾನ.. ಇದುವರೆಗೆ 4000 ಕ್ಕೂ ಹೆಚ್ಚು ಯೂನಿಟ್ ರಕ್ತ ದಾನ ಮಾಡಿದ ಹಿರಿಮೆ ಈ ಸಂಸ್ಥೆಗೆ. ಮದ್ಯ ಮುಕ್ತ ಕ್ರಿಕೆಟ್ ತಂಡ ಆಗಬೇಕು ಅನ್ನುವ ಉದ್ದೇಶದಿಂದ ಪಂದ್ಯದಲ್ಲಿ ಮದ್ಯಪಾನ ಟೆಸ್ಟಿಂಗ್ ಯಂತ್ರಗಳನ್ನು ಬಳಸಿಕೊಂಡು ಕ್ರಿಕೆಟ್ ಆಯೋಜಿಸುವುದು ಇವರ ಶಿಸ್ತಿಗೆ ಇನ್ನೊಂದು ರೂಪ.
ಕಳೆದ ವರ್ಷದ ಪಂದ್ಯದಲ್ಲಿ ಮೊದಲ ಬಾರಿಗೆ ಸಣ್ಣ ಗಾತ್ರದ ಚಿನ್ನದ ಟ್ರೋಫಿಯನ್ನು ವಿಜೇತ ತಂಡಕ್ಕೆ ನೀಡಿದ್ದು ಸಂಸ್ಥೆಗೆ ಕ್ರಿಕೆಟ್ ಬಗ್ಗೆ ಇರುವ ಆಸಕ್ತಿಯನ್ನು ಎತ್ತಿ ತೋರಿಸುತ್ತದೆ.
ಈ ತಂಡದಿಂದ ಮುಂದೆಯೂ ಇನ್ನಷ್ಟು ಉತ್ತಮ ಸಮಾಜ ಸೇವಾ ಕಾರ್ಯ ನಡೆಯಲಿ ಅನ್ನುವ ಶುಭ ಹಾರೈಕೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 − 15 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you