ಕ್ರಿಕೆಟ್ಟೀಮ್ ಇಂಡಿಯಾದ ರಿಷಭ್ ಪಂತ್ ಗೆ ಹೆದರಿದ ನ್ಯೂಜಿಲೆಂಡ್ ಬೌಲಿಂಗ್ ಕೋಚ್

ಟೀಮ್ ಇಂಡಿಯಾದ ರಿಷಭ್ ಪಂತ್ ಗೆ ಹೆದರಿದ ನ್ಯೂಜಿಲೆಂಡ್ ಬೌಲಿಂಗ್ ಕೋಚ್

-

- Advertisment -spot_img
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್  ಫೈನಲ್ ಪಂದ್ಯವಳಿಗೆ ಕ್ಷಣಗಣನೆ ಆರಂಭವಾಗಿದೆ ಇಪ್ಪತ್ತು ಸದಸ್ಯರ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ನ ಸೌತಾಂಪ್ಟನ್ ತಲುಪಿದ್ದಾರೆ.
ಭಾರತ ಆಟಗಾರರು ಪ್ರವಾಸಕ್ಕೆ ಮುನ್ನ ಮುಂಬೈನಲ್ಲಿ ಹದಿನೈದು ದಿನದ ಕ್ವಾರಂಟೈನ್ ನಲ್ಲಿದ್ದಾರೆ,
ಜೂನ್ 18ರಿಂದ ಟೆಸ್ಟ್‌ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ನ್ಯೂಜಿಲೆಂಡ್ ತಂಡದ ಬೌಲಿಂಗ್ ತರಬೇತುದಾರ ಶೇನ್ ಜರ್ಗೆನ್ಸನ್ ಟೀಂ ಇಂಡಿಯಾ ತಂಡದ ಆಟಗಾರರ ಕುರಿತು ಮಾತನಾಡಿದ್ದಾರೆ. ಟೀಮ್ ಇಂಡಿಯಾ ಬಲಿಷ್ಠ ತಂಡವಾಗಿದ್ದು ಈ ತಂಡದ ಆಟಗಾರರು ಒಂದಲ್ಲ ಒಂದು ರೀತಿಯಲ್ಲಿ ತಂಡದ ಗೆಲುವಿಗೆ ಶಕ್ತಿಮಿರಿ ಪ್ರಯತ್ನಿಸುತ್ತಾರೆಂದು ಭಾರತ ತಂಡದ ಕುರಿತು ಮಾತನಾಡಿರುವ ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಶೇನ್ ಜರ್ಗೆನ್ಸನ್ ರಿಷಭ್ ಪಂತ್ ಬಗ್ಗೆ ಒಂದು ಹೆಜ್ಜೆ ಮುಂದೆ ಹೊಗಿ ಆತನ ಬ್ಯಾಟಿಂಗ್ ಶೈಲಿಯ ಮತ್ತು ಕಷ್ಟದ ಪರಿಸ್ಥಿತಿಯಲ್ಲಿ ಆತ ತಂಡವನ್ನು ಗೆಲುವಿನ ಸಮೀಪಕ್ಕೆ ತೆಗೆದುಕೊಂಡು ಹೊಗುವ  ಸಾಮರ್ಥ್ಯವುಳ್ಳ  ಡೇಂಜರಸ್ ಆಟಗಾರ ಎಂದಿದ್ದಾರೆ.
‘ರಿಷಭ್ ಪಂತ್ ಒಬ್ಬ ಅತ್ಯದ್ಭುತ ಆಕ್ರಮಣಕಾರಿ ಆಟಗಾರ. ಯಾವ ಕ್ಚಣದಲ್ಲಾದರು ಪರಿಸ್ಥಿತಿ ಎಂತಹ ಕಷ್ಟಕರವಾಗಿದ್ದರು ಪಂದ್ಯದ ದಿಕ್ಕನ್ನು ಬದಲಿಸಬಲ್ಲಂತ ಸಾಮರ್ಥ್ಯವುಳ್ಳ ರಿಷಭ್ ಪಂತ್ ನಮ್ಮ ತಂಡಕ್ಕೆ ತಲೆನೋವಾಗಿ ಪರಿಣಮಿಸುವುದು ಗ್ಯಾರಂಟಿ. ಇದಕ್ಕೆ ಸಾಕ್ಷಿ ಎಂಬಂತೆ  ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳಲ್ಲಿ ರಿಷಭ್ ಪಂತ್ ಸ್ಫೋಟಕ ಆಟವನ್ನು ಅಡಿ ತಂಡವನ್ನು ಗೆಲ್ಲಿಸಿದ್ದನ್ನು ನಾವುಗಳು ನೋಡಿದ್ದೇವೆ, ಅವಕಾಶ ಸಿಕ್ಕಾಗ ಆತನ ವಿಕೆಟ್ ಪಡೆಯುವುದು ಉತ್ತಮ’ ಎಂದು ನ್ಯೂಜಿಲೆಂಡ್ ತಂಡದ ಬೌಲರ್ ಗಳಿಗೆ ಸಂದೇಶ ರವಾನಿಸಿದ್ದಾರೆ ಕೋಚ್ ಶೇನ್ ಜರ್ಗೆನ್ಸನ್.
ರಿಷಭ್ ಪಂತ್ ಸ್ಫೋಟಕ ಆಟದ ಕುರಿತು ತಮ್ಮ ಅಭಿಪ್ರಾಯವನ್ನು ಶೇನ್ ಜರ್ಗೆನ್ಸನ್ ವ್ಯಕ್ತಪಡಿಸಿದ್ದು ರಿಷಭ್ ಪಂತ್ ಗೆ ಮತ್ತಷ್ಟು ಜವಬ್ದಾರಿ ಹೆಚ್ಚಿದಂತಾಗಿದೆ.ಸದ್ಯದ ಸ್ಥಿತಿಯಲ್ಲಿ ಮತ್ತು ಅಂಕಿ ಅಂಶಗಳ ಪುಟ ತೆರೆದು ನೋಡಿದಾಗ ಭಾರತ ತಂಡ ವಿಶ್ವ ಕ್ರಿಕೆಟ್ ನ ಬಲಿಷ್ಠ ತಂಡವಾಗಿದೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.ಇನ್ನೇನಿದ್ದರು ಜೂನ್ ಹದಿನೆಂಟರಿಂದ ಆರಂಭವಾಗುವ ಪಂದ್ಯವನ್ನು ಕಾದು ನೋಡಬೇಕಿದೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟವನ್ನು ಮುಡಿಗೇರಿಸಿಕೊಳ್ಳುವುದೆ ಎಂದು…?
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

five × five =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you