ಕ್ರಿಕೆಟ್ಟೀಮ್ ಇಂಡಿಯಾದ ರಿಷಭ್ ಪಂತ್ ಗೆ ಹೆದರಿದ ನ್ಯೂಜಿಲೆಂಡ್ ಬೌಲಿಂಗ್ ಕೋಚ್

ಟೀಮ್ ಇಂಡಿಯಾದ ರಿಷಭ್ ಪಂತ್ ಗೆ ಹೆದರಿದ ನ್ಯೂಜಿಲೆಂಡ್ ಬೌಲಿಂಗ್ ಕೋಚ್

-

- Advertisment -spot_img
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್  ಫೈನಲ್ ಪಂದ್ಯವಳಿಗೆ ಕ್ಷಣಗಣನೆ ಆರಂಭವಾಗಿದೆ ಇಪ್ಪತ್ತು ಸದಸ್ಯರ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ನ ಸೌತಾಂಪ್ಟನ್ ತಲುಪಿದ್ದಾರೆ.
ಭಾರತ ಆಟಗಾರರು ಪ್ರವಾಸಕ್ಕೆ ಮುನ್ನ ಮುಂಬೈನಲ್ಲಿ ಹದಿನೈದು ದಿನದ ಕ್ವಾರಂಟೈನ್ ನಲ್ಲಿದ್ದಾರೆ,
ಜೂನ್ 18ರಿಂದ ಟೆಸ್ಟ್‌ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ನ್ಯೂಜಿಲೆಂಡ್ ತಂಡದ ಬೌಲಿಂಗ್ ತರಬೇತುದಾರ ಶೇನ್ ಜರ್ಗೆನ್ಸನ್ ಟೀಂ ಇಂಡಿಯಾ ತಂಡದ ಆಟಗಾರರ ಕುರಿತು ಮಾತನಾಡಿದ್ದಾರೆ. ಟೀಮ್ ಇಂಡಿಯಾ ಬಲಿಷ್ಠ ತಂಡವಾಗಿದ್ದು ಈ ತಂಡದ ಆಟಗಾರರು ಒಂದಲ್ಲ ಒಂದು ರೀತಿಯಲ್ಲಿ ತಂಡದ ಗೆಲುವಿಗೆ ಶಕ್ತಿಮಿರಿ ಪ್ರಯತ್ನಿಸುತ್ತಾರೆಂದು ಭಾರತ ತಂಡದ ಕುರಿತು ಮಾತನಾಡಿರುವ ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಶೇನ್ ಜರ್ಗೆನ್ಸನ್ ರಿಷಭ್ ಪಂತ್ ಬಗ್ಗೆ ಒಂದು ಹೆಜ್ಜೆ ಮುಂದೆ ಹೊಗಿ ಆತನ ಬ್ಯಾಟಿಂಗ್ ಶೈಲಿಯ ಮತ್ತು ಕಷ್ಟದ ಪರಿಸ್ಥಿತಿಯಲ್ಲಿ ಆತ ತಂಡವನ್ನು ಗೆಲುವಿನ ಸಮೀಪಕ್ಕೆ ತೆಗೆದುಕೊಂಡು ಹೊಗುವ  ಸಾಮರ್ಥ್ಯವುಳ್ಳ  ಡೇಂಜರಸ್ ಆಟಗಾರ ಎಂದಿದ್ದಾರೆ.
‘ರಿಷಭ್ ಪಂತ್ ಒಬ್ಬ ಅತ್ಯದ್ಭುತ ಆಕ್ರಮಣಕಾರಿ ಆಟಗಾರ. ಯಾವ ಕ್ಚಣದಲ್ಲಾದರು ಪರಿಸ್ಥಿತಿ ಎಂತಹ ಕಷ್ಟಕರವಾಗಿದ್ದರು ಪಂದ್ಯದ ದಿಕ್ಕನ್ನು ಬದಲಿಸಬಲ್ಲಂತ ಸಾಮರ್ಥ್ಯವುಳ್ಳ ರಿಷಭ್ ಪಂತ್ ನಮ್ಮ ತಂಡಕ್ಕೆ ತಲೆನೋವಾಗಿ ಪರಿಣಮಿಸುವುದು ಗ್ಯಾರಂಟಿ. ಇದಕ್ಕೆ ಸಾಕ್ಷಿ ಎಂಬಂತೆ  ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳಲ್ಲಿ ರಿಷಭ್ ಪಂತ್ ಸ್ಫೋಟಕ ಆಟವನ್ನು ಅಡಿ ತಂಡವನ್ನು ಗೆಲ್ಲಿಸಿದ್ದನ್ನು ನಾವುಗಳು ನೋಡಿದ್ದೇವೆ, ಅವಕಾಶ ಸಿಕ್ಕಾಗ ಆತನ ವಿಕೆಟ್ ಪಡೆಯುವುದು ಉತ್ತಮ’ ಎಂದು ನ್ಯೂಜಿಲೆಂಡ್ ತಂಡದ ಬೌಲರ್ ಗಳಿಗೆ ಸಂದೇಶ ರವಾನಿಸಿದ್ದಾರೆ ಕೋಚ್ ಶೇನ್ ಜರ್ಗೆನ್ಸನ್.
ರಿಷಭ್ ಪಂತ್ ಸ್ಫೋಟಕ ಆಟದ ಕುರಿತು ತಮ್ಮ ಅಭಿಪ್ರಾಯವನ್ನು ಶೇನ್ ಜರ್ಗೆನ್ಸನ್ ವ್ಯಕ್ತಪಡಿಸಿದ್ದು ರಿಷಭ್ ಪಂತ್ ಗೆ ಮತ್ತಷ್ಟು ಜವಬ್ದಾರಿ ಹೆಚ್ಚಿದಂತಾಗಿದೆ.ಸದ್ಯದ ಸ್ಥಿತಿಯಲ್ಲಿ ಮತ್ತು ಅಂಕಿ ಅಂಶಗಳ ಪುಟ ತೆರೆದು ನೋಡಿದಾಗ ಭಾರತ ತಂಡ ವಿಶ್ವ ಕ್ರಿಕೆಟ್ ನ ಬಲಿಷ್ಠ ತಂಡವಾಗಿದೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.ಇನ್ನೇನಿದ್ದರು ಜೂನ್ ಹದಿನೆಂಟರಿಂದ ಆರಂಭವಾಗುವ ಪಂದ್ಯವನ್ನು ಕಾದು ನೋಡಬೇಕಿದೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟವನ್ನು ಮುಡಿಗೇರಿಸಿಕೊಳ್ಳುವುದೆ ಎಂದು…?
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

14 − twelve =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you