ಕ್ರಿಕೆಟ್ಕರ್ನಾಟಕ U-19 ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಉಡುಪಿಯ ಹುಡುಗ...

ಕರ್ನಾಟಕ U-19 ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಉಡುಪಿಯ ಹುಡುಗ ನಿಶ್ಚಿತ್ ಪೈ

-

- Advertisment -spot_img
ಉಡುಪಿ-ನಿಶ್ಚಿತ್ ಪೈ  ಕೇವಲ 19 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ಅವರು ಕರ್ನಾಟಕ  ಕಿರಿಯರ ಕ್ರಿಕೆಟ್ ತಂಡದಲ್ಲಿ ಆಡುವ ಕನಸು ಹೊಂದಿದ್ದಾರೆ. ಇವತ್ತು ಅವರು ತಮ್ಮ ಕನಸುಗಳಿಂದ ದೂರವಿಲ್ಲ, ಏಕೆಂದರೆ ಅವರು  U-19 ಕ್ರಿಕೆಟ್ ತಂಡಕ್ಕೆ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ನಿಶ್ಚಿತ್ ಪೈ  ಅವರು 2023-24 ಸಾಲಿನ ವಿನೂ ಮಂಕಡ್ ಟ್ರೋಫಿ ಪಂದ್ಯಗಳನ್ನು ಆಡುವ ಕರ್ನಾಟಕ U-19 ತಂಡಕ್ಕೆ ಆಯ್ಕೆಯಾಗಿದ್ದಾರೆ. 19 ವರ್ಷದೊಳಗಿನವರ ಪಂದ್ಯಾವಳಿಯು ಹೈದರಾಬಾದ್‌ನಲ್ಲಿ ಅಕ್ಟೋಬರ್ 12 ರಿಂದ 20 ರವರೆಗೆ ನಡೆಯಲಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಬಿಸಿಸಿಐ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜರಗಿದ 19 ವರ್ಷದೊಳಗಿನವರ ಅಂತರ ವಲಯ ಕ್ರಿಕೆಟ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ  ತೋರಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಉಡುಪಿಯ ಪ್ರತಿಭಾನ್ವಿತ ಕ್ರಿಕೆಟಿಗರಾದ  ನಿಶ್ಚಿತ್ ಪೈ ಇವರನ್ನು ಕರ್ನಾಟಕದ ಸಂಭಾವ್ಯ ತಂಡಕ್ಕೆ ಆಯ್ಕೆ ಮಾಡಲಾಗಿದೆ.. ನಿಶ್ಚಿತ್ ಪೈ ಇವರು ಸ್ನೇಹ ಕಾಲೇಜು ಉಡುಪಿಯ ಹಳೆ ವಿದ್ಯಾರ್ಥಿಯಾಗಿದ್ದು  ಉಡುಪಿಯ ನಾಗರಾಜ ಪೈ – ಉಜ್ವಲ್ ಕಿರಣ್ ದಂಪತಿಯ ಪುತ್ರ. ಪ್ರಸ್ತುತ ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಪ್ರಥಮ ಬಿಕಾಂ  ವ್ಯಾಸಂಗ ಮಾಡುತ್ತಿದ್ದಾರೆ.
ಉದಯೋನ್ಮುಖ ಆಲ್ರೌಂಡ್ ಆಟಗಾರ ನಿಶ್ಚಿತ್ ಪೈ ಮುಂಬರುವ ವಿನೂ ಮಂಕಡ್ ಟ್ರೋಫಿಗಾಗಿ ಕರ್ನಾಟಕದ 15 ಸದಸ್ಯರ ತಂಡದಲ್ಲಿ ಶನಿವಾರ ಸ್ಥಾನ  ಪಡೆದು ರಾಜ್ಯ ಮಟ್ಟದಲ್ಲಿ ಕ್ರಿಕೆಟ್ ಗೆ ಛಾಪು ಮೂಡಿಸಲು ಕಾಲಿಟ್ಟಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × one =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you