Categories
ಕ್ರಿಕೆಟ್ ರಾಜ್ಯ

ಕೆ.ಎಸ್.ಸಿ.ಎ 3 ನೇ ಡಿವಿಜನ್ : ಆಕರ್ಷಕ ಶತಕ ಸಿಡಿಸಿದ ನಿತಿನ್.ಜಿ.ಮೂಲ್ಕಿ

ಬೆಂಗಳೂರಿನ ರೇವೋ ಯೂನಿವರ್ಸಿಟಿ ಅಂಗಣದಲ್ಲಿ ” ನಸ್ಸೂರ್ ಸ್ಮಾರಕ‌ ಟ್ರೋಫಿ”ಗಾಗಿ ನಡೆಯುತ್ತಿರುವ  ಕೆ.ಎಸ್.ಸಿ.ಎ 3 ನೇ ಡಿವಿಜನ್ ಪಂದ್ಯಾಕೂಟದಲ್ಲಿ B.E.L ಕಾಲನಿ ರಿಕ್ರಿಯೇಶನ್ ಕ್ಲಬ್ ವಿರುದ್ದ 83 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಬಿರುಸಿನ ಶತಕ 106 ರನ್ ಗಳಿಸುವ ಮೂಲಕ ತಾನಾಡಿದ ತಂಡ ವಿಶ್ವೇಶ್ವರಪುರಂ ಕ್ರಿಕೆಟ್ ಕ್ಲಬ್ ತಂಡಕ್ಕೆ 215 ರನ್ ಅಂತರದ ದಾಖಲೆಯ ಗೆಲುವನ್ನು ತಂದಿತ್ತಿದ್ದಾರೆ.

ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಆದರ್ಶ ಕಪ್ತಾನ ಶರತ್ ಶೆಟ್ಟಿ ಪಡುಬಿದ್ರಿ ನೇತೃತ್ವದ ಪ್ರತಿಷ್ಠಿತ ತಂಡ “ಪಡುಬಿದ್ರಿ ಫ್ರೆಂಡ್ಸ್” ತಂಡದ ಮೂಲಕ ತನ್ನ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದ ಇವರು,ಕ್ರಿಕೆಟ್ ಜೀವನದುದ್ದಕ್ಕೂ ರಾಜ್ಯದ ಅತ್ಯಂತ ಶಿಸ್ತುಬದ್ಧ ಆಟಗಾರನಾಗಿ ಗುರುತಿಸಿಕೊಂಡಿದ್ದು ನಿತಿನ್.ಜಿ‌.ಮೂಲ್ಕಿ ಯವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ.

ಟೆನ್ನಿಸ್ ಕ್ರಿಕೆಟ್ ನಿಂದ ಪ್ರಾರಂಭವಾದ ಇವರ ಕೀರ್ತಿ ಅಂತರಾಷ್ಟ್ರೀಯ ಮಟ್ಟದವರೆಗೂ ವ್ಯಾಪಿಸಿದೆ. ಯು.ಎ.ಇ ಯ ಅಂತರಾಷ್ಟ್ರೀಯ ತಂಡದಲ್ಲಿ ವಿಶ್ವಕಪ್‌ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಿ ಗಮನಾರ್ಹ ನಿರ್ವಹಣೆ ತೋರಿದ್ದರು.

ರಾಜ್ಯದ ಪ್ರತಿಷ್ಠಿತ ಕೆ.ಪಿ.ಎಲ್ ಪಂದ್ಯಾವಳಿಗಳಲ್ಲಿ ಮಂಗಳೂರು ಯುನೈಟೆಡ್,ಬೆಳಗಾವಿ ಪ್ಯಾಂಥರ್ಸ್ ಹಾಗೂ ಬಿಜಾಪುರ ಬುಲ್ಸ್ ನ ಪರವಾಗಿ‌ ಆಡಿದ ಅನುಭವ ಹೊಂದಿದ್ದಾರೆ.

M.P.L ನ ಈ ಬಾರಿಯ ಆವೃತ್ತಿಯಲ್ಲಿ ಕಾರ್ಕಳ ಗ್ಲಾಡಿಯೇಟರ್ಸ್ ಪರವಾಗಿ ಆಡಿ ಸರ್ವಾಂಗೀಣ ಪ್ರದರ್ಶನ ತೋರಿ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ “ರೆನಿಗೇಡ್ ಕಮಾಂಡೋ 300 ಸಿ.ಸಿ” ದುಬಾರಿ ದ್ವಿಚಕ್ರ ವಾಹನವನ್ನು ಪಡೆದಿದ್ದು,ತಂಡಕ್ಕೆ ಚಾಂಪಿಯನ್ ಪಟ್ಟ ತೊಡಿಸುವಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದರು.

(ಮುಂದಿನ ದಿನಗಳಲ್ಲಿ “ಸ್ಪೋರ್ಟ್ಸ್ ಕನ್ನಡ” ವೆಬ್ ಸೈಟ್ ನಲ್ಲಿ  ನಿತಿನ್.ಜಿ‌.ಮೂಲ್ಕಿ ಯವರ ಕ್ರೀಡಾ ಜೀವನದ ಸಾಧನೆಗಳನ್ನು ಬರೆಯಲಿದ್ದೇನೆ).

ಆರ್.ಕೆ.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

ten + nine =