ಕ್ರಿಕೆಟ್ಕೆ.ಎಸ್.ಸಿ.ಎ 3 ನೇ ಡಿವಿಜನ್ : ಆಕರ್ಷಕ ಶತಕ ಸಿಡಿಸಿದ ನಿತಿನ್.ಜಿ.ಮೂಲ್ಕಿ

ಕೆ.ಎಸ್.ಸಿ.ಎ 3 ನೇ ಡಿವಿಜನ್ : ಆಕರ್ಷಕ ಶತಕ ಸಿಡಿಸಿದ ನಿತಿನ್.ಜಿ.ಮೂಲ್ಕಿ

-

- Advertisment -spot_img

ಬೆಂಗಳೂರಿನ ರೇವೋ ಯೂನಿವರ್ಸಿಟಿ ಅಂಗಣದಲ್ಲಿ ” ನಸ್ಸೂರ್ ಸ್ಮಾರಕ‌ ಟ್ರೋಫಿ”ಗಾಗಿ ನಡೆಯುತ್ತಿರುವ  ಕೆ.ಎಸ್.ಸಿ.ಎ 3 ನೇ ಡಿವಿಜನ್ ಪಂದ್ಯಾಕೂಟದಲ್ಲಿ B.E.L ಕಾಲನಿ ರಿಕ್ರಿಯೇಶನ್ ಕ್ಲಬ್ ವಿರುದ್ದ 83 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಬಿರುಸಿನ ಶತಕ 106 ರನ್ ಗಳಿಸುವ ಮೂಲಕ ತಾನಾಡಿದ ತಂಡ ವಿಶ್ವೇಶ್ವರಪುರಂ ಕ್ರಿಕೆಟ್ ಕ್ಲಬ್ ತಂಡಕ್ಕೆ 215 ರನ್ ಅಂತರದ ದಾಖಲೆಯ ಗೆಲುವನ್ನು ತಂದಿತ್ತಿದ್ದಾರೆ.

ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಆದರ್ಶ ಕಪ್ತಾನ ಶರತ್ ಶೆಟ್ಟಿ ಪಡುಬಿದ್ರಿ ನೇತೃತ್ವದ ಪ್ರತಿಷ್ಠಿತ ತಂಡ “ಪಡುಬಿದ್ರಿ ಫ್ರೆಂಡ್ಸ್” ತಂಡದ ಮೂಲಕ ತನ್ನ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದ ಇವರು,ಕ್ರಿಕೆಟ್ ಜೀವನದುದ್ದಕ್ಕೂ ರಾಜ್ಯದ ಅತ್ಯಂತ ಶಿಸ್ತುಬದ್ಧ ಆಟಗಾರನಾಗಿ ಗುರುತಿಸಿಕೊಂಡಿದ್ದು ನಿತಿನ್.ಜಿ‌.ಮೂಲ್ಕಿ ಯವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ.

ಟೆನ್ನಿಸ್ ಕ್ರಿಕೆಟ್ ನಿಂದ ಪ್ರಾರಂಭವಾದ ಇವರ ಕೀರ್ತಿ ಅಂತರಾಷ್ಟ್ರೀಯ ಮಟ್ಟದವರೆಗೂ ವ್ಯಾಪಿಸಿದೆ. ಯು.ಎ.ಇ ಯ ಅಂತರಾಷ್ಟ್ರೀಯ ತಂಡದಲ್ಲಿ ವಿಶ್ವಕಪ್‌ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಿ ಗಮನಾರ್ಹ ನಿರ್ವಹಣೆ ತೋರಿದ್ದರು.

ರಾಜ್ಯದ ಪ್ರತಿಷ್ಠಿತ ಕೆ.ಪಿ.ಎಲ್ ಪಂದ್ಯಾವಳಿಗಳಲ್ಲಿ ಮಂಗಳೂರು ಯುನೈಟೆಡ್,ಬೆಳಗಾವಿ ಪ್ಯಾಂಥರ್ಸ್ ಹಾಗೂ ಬಿಜಾಪುರ ಬುಲ್ಸ್ ನ ಪರವಾಗಿ‌ ಆಡಿದ ಅನುಭವ ಹೊಂದಿದ್ದಾರೆ.

M.P.L ನ ಈ ಬಾರಿಯ ಆವೃತ್ತಿಯಲ್ಲಿ ಕಾರ್ಕಳ ಗ್ಲಾಡಿಯೇಟರ್ಸ್ ಪರವಾಗಿ ಆಡಿ ಸರ್ವಾಂಗೀಣ ಪ್ರದರ್ಶನ ತೋರಿ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿ “ರೆನಿಗೇಡ್ ಕಮಾಂಡೋ 300 ಸಿ.ಸಿ” ದುಬಾರಿ ದ್ವಿಚಕ್ರ ವಾಹನವನ್ನು ಪಡೆದಿದ್ದು,ತಂಡಕ್ಕೆ ಚಾಂಪಿಯನ್ ಪಟ್ಟ ತೊಡಿಸುವಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದರು.

(ಮುಂದಿನ ದಿನಗಳಲ್ಲಿ “ಸ್ಪೋರ್ಟ್ಸ್ ಕನ್ನಡ” ವೆಬ್ ಸೈಟ್ ನಲ್ಲಿ  ನಿತಿನ್.ಜಿ‌.ಮೂಲ್ಕಿ ಯವರ ಕ್ರೀಡಾ ಜೀವನದ ಸಾಧನೆಗಳನ್ನು ಬರೆಯಲಿದ್ದೇನೆ).

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten − 4 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you