ಸ್ಪೋರ್ಟ್ಸ್ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ವೃತ್ತಿಪರ ಶಿಕ್ಷಕರ...

ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ವೃತ್ತಿಪರ ಶಿಕ್ಷಕರ ಯಶಸ್ವಿ‌ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಫಲಿತಾಂಶ

-

- Advertisment -spot_img

ಹಳೆಯಂಗಡಿ : ಕ್ರೀಡೆ ಹಾಗೂ ಕ್ರೀಡಾಭಿಮಾನಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಅತಿ ಹೆಚ್ಚು ಮುತುವರ್ಜಿ ವಹಿಸುತ್ತಿರುವ ಸಂಸ್ಥೆ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ.

ಟೆನ್ನಿಸ್ ಕ್ರಿಕೆಟ್ ನಲ್ಲಿ ಎರಡೂವರೆ ದಶಕಗಳ ಅದ್ವಿತೀಯ ಇತಿಹಾಸ ಬರೆದ ಈ ಸಂಸ್ಥೆ,ಬಳಿಕ ಲೆದರ್ ಬಾಲ್ ಕ್ರಿಕೆಟ್,ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್,ಷಟಲ್ ಬ್ಯಾಡ್ಮಿಂಟನ್ ಹೀಗೆ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತ ಬಂದಿರುತ್ತದೆ.

ಶಾಲಾ ಕಾಲೇಜುಗಳಿಂದ ಪ್ರಾರಂಭವಾಗಿ ವೃತ್ತಿಪರ ಕ್ರೀಡಾಪಟುಗಳನ್ನು ಗುರುತಿಸುತ್ತಿರುವ ಸಂಸ್ಥೆ ಆಗಸ್ಟ್ 18 ರಂದು ವೃತ್ತಿಪರ ಶಿಕ್ಷಕರಿಗಾಗಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರಿಗಾಗಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಆಯೋಜಿಸಿತ್ತು.ವಿವಿಧ ಶಾಲಾ,ಕಾಲೇಜುಗಳಿಂದ 48 ಸ್ಪರ್ಧಿಗಳು ಭಾಗವಹಿಸಿದ್ದರು.

ಫಲಿತಾಂಶದ ವಿವರ. :
ಪುರುಷರ ಡಬಲ್ಸ್ ವಿಜೇತರು ಪ್ರಥಮ-ದೀಕ್ಷಿತ್ ಹಾಗೂ ಪ್ರಜ್ನೇಶ್, ದ್ವಿತೀಯ-ಕುಮಾರ್ ಹಾಗೂ ಅರುಣ್ ಬ್ಯಾಪ್ಟಿಸ್ಟ್.

ಮಹಿಳೆಯರ ಸಿಂಗಲ್ಸ್ ವಿಜೇತರು : ಪ್ರಥಮ-ರಶ್ಮಿ, ದ್ವಿತೀಯ-ಬಬಿತಾ.

ಪುರುಷರ ಸಿಂಗಲ್ಸ್ ವಿಜೇತರು ಪ್ರಥಮ-ಪ್ರಜ್ನೇಶ್, ದ್ವಿತೀಯ-ದೀಕ್ಷಿತ್.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಕರಾದ ಡಾ.ಕಿಶೋರ್ ಕುಮಾರ್,ವಿದ್ಯಾರಶ್ಮಿ ಪಬ್ಲಿಕ್ ಸ್ಕೂಲ್ ಸವಣೂರಿನ ಮೆನೇಜಿಂಗ್ ಡೈರೆಕ್ಟರ್ ಅಶ್ವಿನ್ ಶೆಟ್ಟಿ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ,ಸ್ಪೋರ್ಟ್ಸ್ ಡೆನ್ ಈವೆಂಟ್ ನ ಪ್ರಧಾನ ರೂವಾರಿ ಗಣೇಶ್ ಕಾಮತ್,ಟೊರ್ಪೆಡೋಸ್ ಕ್ಲಬ್ ನ ಉಪಾಧ್ಯಕ್ಷ ನಾಗಭೂಷಣ್ ರೆಡ್ಡಿ,ಮೆನೇಜರ್ ಕೆ.ಪಿ.ಸತೀಶ್,ರಾಘವೇಂದ್ರ,ಬ್ಯಾಡ್ಮಿಂಟನ್ ಕೋಚ್ ಸಂತೋಷ್ ಖಾರ್ವಿ,ಕಾರ್ತಿಕ್ ಹಾಗೂ ಸಂಪತ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿ, ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ಪ್ರಮಾಣಪತ್ರ ವಿತರಿಸಿ ಅಭಿನಂದಿಸಿದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + 4 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you