ಕ್ರಿಕೆಟ್ಸೌದಿ ಅರೇಬಿಯಾ-ಜಿದ್ದಾಜಿದ್ದಿನ ಜೆದ್ದಾ ಎ.ಟಿ.ಎಸ್ ಕಪ್-2020 ಪ್ಯಾರಾಮೌಂಟ್ ರಿಯಾದ್ ಮಡಿಲಿಗೆ

ಸೌದಿ ಅರೇಬಿಯಾ-ಜಿದ್ದಾಜಿದ್ದಿನ ಜೆದ್ದಾ ಎ.ಟಿ.ಎಸ್ ಕಪ್-2020 ಪ್ಯಾರಾಮೌಂಟ್ ರಿಯಾದ್ ಮಡಿಲಿಗೆ

-

- Advertisment -spot_img
ಸೌದಿ ಅರೇಬಿಯಾದ ಪ್ರತಿಷ್ಟಿತ ಎ.ಟಿ.ಎಸ್.ಜೆದ್ದಾ ತಂಡವು ಇತ್ತೀಚೆಗಷ್ಟೇ ಮರ್ಸಲ್ ನ ಬಿ.ಎಮ್‌.ಟಿ ಅಂಗಣದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ
ಎ.ಟಿ.ಎಸ್.ಕಪ್-2020 ಪಂದ್ಯಾವಳಿಯ ಪ್ರಶಸ್ತಿಯನ್ನು ಪ್ಯಾರಾಮೌಂಟ್ ರಿಯಾದ್ ತಂಡ ಜಯಿಸಿದೆ.
ಜಿದ್ದಾ ಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಜೆದ್ದಾ ಪ್ರತಿಷ್ಠಿತ ಎ‌.ಟಿ‌.ಎಸ್ ಕಪ್ ಗಾಗಿ 12 ತಂಡಗಳು ಭಾಗವಹಿಸಿತ್ತು.ಲೀಗ್ ಕಮ್ ನಾಕೌಟ್ ಹಂತದ ಹೋರಾಟದ ಬಳಿಕ ಉಪಾಂತ್ಯ ಪಂದ್ಯಗಳಲ್ಲಿ ಕಯಾನಿ ಇಲೆವೆನ್ ತಂಡ ಅಝೀಝಿಯಾ ಡೆಕ್ಕನ್ ತಂಡವನ್ನು ಹಾಗೂ ಪ್ಯಾರಾಮೌಂಟ್ ರಿಯಾದ್ ಯಂಗ್ ಸ್ಟಾರ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿದ್ದವು.
ರೋಚಕವಾಗಿ ಸಾಗಿದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕಯಾನಿ ಇಲೆವೆನ್ ನಿಗದಿತ 8 ಓವರ್ ಗಳಲ್ಲಿ 84 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತ್ತು.ಚೇಸಿಂಗ್ ವೇಳೆ
ಪ್ಯಾರಾಮೌಂಟ್ ರಿಯಾದ್ ತಂಡದ ಇಲ್ಯಾಸ್ ಹಾಗೂ ಸಲ್ಮಾನ್ ಬ್ಯಾಟಿಂಗ್ ಸಾಹಸದಿಂದ ಕೇವಲ 6.5 ಓವರ್ ಗಳಲ್ಲಿ ಗುರಿಯನ್ನು ಬೆಂಬತ್ತಿ ಎ‌.ಟಿ.ಎಸ್ ಕಪ್-2020 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
 ಪ್ರಥಮ ಪ್ರಶಸ್ತಿ ವಿಜೇತ ಪ್ಯಾರಾಮೌಂಟ್ ರಿಯಾದ್ 5,555 ರಿಯಲ್ ನಗದು ಹಾಗೂ ರನ್ನರ್ ಅಪ್ ಕಯಾನಿ ಇಲೆವೆನ್ ನಗದು 3,333 ರಿಯಲ್ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ
ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಕಯಾನಿ ಇಲೆವೆನ್ ನ ಕಾಶಿಫ್,ಬೆಸ್ಟ್ ಬೌಲರ್ ಪ್ಯಾರಾಮೌಂಟ್ ನ ನೌಮಾನ್ ಹಾಗೂ ಫೈನಲ್ ನ ಪಂದ್ಯಶ್ರೇಷ್ಟ ಹಾಗು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪ್ಯಾರಾಮೌಂಟ್ ರಿಯಾದ್ ತಂಡದ ಸಲ್ಮಾನ್ ಪಡೆದುಕೊಂಡರು.ಸಮಾರೋಪ ಸಮಾರಂಭದಲ್ಲಿ ನಡೆದ ಲಕ್ಕಿ ಡ್ರಾ ನಲ್ಲಿ ಮೂಲ್ಕಿಯ ಶಬ್ಬೀರ್ ಅಹಮದ್ ಇವರಿಗೆ ಐ ಫೋನ್ 12 ಪ್ರೋ ಮ್ಯಾಕ್ಸ್ ಬಹುಮಾನ‌ ದೊರೆತಿರುತ್ತದೆ.
ಪಂದ್ಯಾವಳಿಯ
ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕನ್ನಡಿಗರ ಹೆಮ್ಮೆಯ ಕ್ರೀಡಾ ವೆಬ್ಸೈಟ್ ಸ್ಪೋರ್ಟ್ಸ್ ಕನ್ನಡ ಕಾರ್ಯ ನಿರ್ವಹಿಸಿದ್ದು,ಮೊತ್ತ ಮೊದಲ ಬಾರಿಗೆ ಕರ್ನಾಟಕದ M.Sports ಯೂ ಟ್ಯೂಬ್ ಚಾನೆಲ್ ಈ ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದ್ದು, ದೇಶ,ವಿದೇಶದಾದ್ಯಂತ ಸಹಸ್ರಾರು ಕ್ರಿಕೆಟ್ ಅಭಿಮಾನಿಗಳು ಪಂದ್ಯಾಟವನ್ನು ವೀಕ್ಷಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

8 + ten =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you