ಕ್ರಿಕೆಟ್ಕಾಡಿನೊಳಗಿನ ಗುರುಕುಲದಲ್ಲಿ ದಿನಕ್ಕೆ 12 ಗಂಟೆ ಕ್ರಿಕೆಟ್ ಅಭ್ಯಾಸ.. ಐಪಿಎಲ್'ನಲ್ಲಿ ಸಿಡಿಲಬ್ಬರದ...

ಕಾಡಿನೊಳಗಿನ ಗುರುಕುಲದಲ್ಲಿ ದಿನಕ್ಕೆ 12 ಗಂಟೆ ಕ್ರಿಕೆಟ್ ಅಭ್ಯಾಸ.. ಐಪಿಎಲ್’ನಲ್ಲಿ ಸಿಡಿಲಬ್ಬರದ ಶತಕ.. ಯಾರು ಈ ಪ್ರಿಯಾನ್ಷ್ ಆರ್ಯ?

-

- Advertisment -spot_img

ಕಾಡಿನೊಳಗಿನ ಗುರುಕುಲದಲ್ಲಿ ದಿನಕ್ಕೆ 12 ಗಂಟೆ ಕ್ರಿಕೆಟ್ ಅಭ್ಯಾಸ.. ಐಪಿಎಲ್’ನಲ್ಲಿ ಸಿಡಿಲಬ್ಬರದ ಶತಕ.. ಯಾರು ಈ ಪ್ರಿಯಾನ್ಷ್ ಆರ್ಯ?

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ ಪಂಜಾಬ್ ಕಿಂಗ್ಸ್ ಪಡೆಯ ಪ್ರಿಯಾನ್ಷ್ ಆರ್ಯಾ ಈಗ ಕ್ರಿಕೆಟ್ ಜಗತ್ತಿನ ಟಾಕ್ ಆಫ್ ದಿ ಟೌನ್. ಹಾಗಾದರೆ ಯಾರು ಈ ಪ್ರಿಯಾನ್ಷ್ ಆರ್ಯ? ಎಲ್ಲಿದ್ದ ಇಷ್ಟು ದಿನ?

24 ವರ್ಷದ ಎಡಗೈ ದಾಂಡಿಗ ಪ್ರಿಯಾನ್ಷ್ ಆರ್ಯ ದೆಹಲಿಯ ಪ್ರತಿಭಾವಂತ ಕ್ರಿಕೆಟರ್. ಐದು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಲ್ಲಾನ್ಪುರದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಅಬ್ಬರಿಸಿದ್ದ ಪ್ರಿಯಾನ್ಷ್ ಆರ್ಯ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ದಾಖಲಾದ ನಾಲ್ಕನೇ ಅತೀ ವೇಗದ ಶತಕ ಮತ್ತು ಐಪಿಎಲ್’ನಲ್ಲಿ ವೇಗದ ಶತಕ ಬಾರಿಸಿದ 2ನೇ ಭಾರತೀಯ.

ಐಪಿಎಲ್’ಗೂ ಮೊದಲು ಪ್ರಿಯಾನ್ಶ ಆರ್ಯ ಮಧ್ಯಪ್ರದೇಶದ ಭೋಪಾಲ್’ನ ಹೊರಭಾಗದಲ್ಲಿರುವ ರತಪಾನಿ ಕಾಡಿನೊಳಗೆ ಗುರುಕುಲ ಶೈಲಿಯ ಕ್ರಿಕೆಟ್ ಶಿಬಿರದಲ್ಲಿ ಪಾಲ್ಗೊಂಡಿದ್ದ. ಅಲ್ಲಿ ಟೀಮ್ ಇಂಡಿಯಾದ ಹಾಲಿ ಕೋಚ್ ಆಗಿರುವ ಗೌತಮ್ ಗಂಭೀರ್ ಅರ ಮಾಜಿ ಕೋಚ್ ಭಾರದ್ವಾಜ್ ಎಂಬವರು ಗುರುಕುಲ ಶೈಲಿಯ ಕ್ರಿಕೆಟ್ ಶಿಬಿರ ನಡೆಸುತ್ತಿದ್ದಾರೆ. ಈ ಹಿಂದೆ ನಿತೀಶ್ ರಾಣಾ, ಉನ್ಮುಕ್ತ್ ಚಾಂದ್, ಖುಲ್ವಂತ್ ಕೆಜ್ರೋಲಿಯಾ ಇದೇ ಕ್ಯಾಂಪ್’ನಲ್ಲಿ ಅಭ್ಯಾಸ ನಡೆಸಿದ್ದರು. 

ರತಪಾನಿ ಕಾಡಿನೊಳಗೆ ಗುರುಕುಲ ಶೈಲಿಯ ಕ್ರಿಕೆಟ್ ಶಿಬಿರದಲ್ಲಿ ಆಟಗಾರರು ಮೊಬೈಲ್ ಫೋನ್ ಬಳಸುವಂತಿಲ್ಲ. ಹೊರ ಜಗತ್ತಿನೊಂದಿಗೆ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡು ಅಭ್ಯಾಸ ನಡೆಸಬೇಕು. ಕ್ರಿಕೆಟಿಗರಲ್ಲಿ ಏಕಾಗ್ರತೆ ಮೂಡಿಸಲು ಕೋಚ್ ಭಾರದ್ವಾಜ್ ಈ ವ್ಯವಸ್ಥೆ ಮಾಡಿದ್ದಾರೆ. 

ಅಂತಹ ರಿಮೋಟ್ ಏರಿಯಾದಲ್ಲಿ ಪ್ರಿಯಾನ್ಷ್ ಆರ್ಯ ಪ್ರತೀ ದಿನ 12 ಗಂಟೆಗಳ ಕಾಲ ಅಭ್ಯಾಸ ನಡೆಸಿದ್ದಾರೆ. ಬೆಳಗ್ಗೆ 6.30ಕ್ಕೆ ಅಭ್ಯಾಸ ಆರಂಭಿಸುತ್ತಿದ್ದ ಪ್ರಿಯಾನ್ಷ್ ಸಂಜೆ ಆರು ಗಂಟೆಯವರೆಗೂ ತಾಲೀಮು ನಡೆಸಿದ್ದರು. ಆ ಪರಿಶ್ರಮಕ್ಕೆ ಪ್ರತಿಫಲವೆಂಬಂತೆ ಇದೀಗ ಐಪಿಎಲ್’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಬ್ಬರದ ಶತಕ ಬಾರಿಸಿದ್ದಾರೆ.

ಐಪಿಎಲ್’ನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಗುಜರಾತ್ ಟೈಟನ್ಸ್ ವಿರುದ್ಧ ಪ್ರಿಯಾನ್ಷ್ 47 ರನ್ ಗಳಿಸಿದ್ದರು. 

ಐಪಿಎಲ್ ಟೂರ್ನಿಗೂ ಮುನ್ನ ದೆಹಲಿ ಪರ 7 ಲಿಸ್ಟ್ ಎ ಪಂದ್ಯಗಳನ್ನಾಡಿರುವ ಪ್ರಿಯಾನ್ಷ್ ಆರ್ಯ 77 ರನ್ ಗಳಿಸಿದ್ದಾರೆ. ನಾಲ್ಕು ಐಪಿಎಲ್ ಪಂದ್ಯಗಳು ಸೇರಿದಂತೆ ಒಟ್ಟು 22 ಟಿ20 ಪಂದ್ಯಗಳನ್ನಾಡಿರುವ ದೆಹಲಿ ತಾರೆ 731 ರನ್ ಕಲೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here

4 × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you