ಕ್ರಿಕೆಟ್ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

-

- Advertisment -spot_img

ಕನಸು ಕಂಗಳಲ್ಲಿ ಬಂದು ಭರವಸೆಯ ಹಾದಿಯಲ್ಲಿ ಸಾಗುತ್ತಿರುವ “ಹೊದ್ರೋಳಿಯ ಮುತ್ತು”, ಪ್ರದೀಪ್ ಆಚಾರ್ಯ.

“ಪ್ರದೀಪ್” ಅಂದಾಕ್ಷಣ ನೆನಪಾಗುವುದು ಒಬ್ಬ ಭರವಸೆಯ ಕ್ರಿಕೆಟ್ ನ ಬೆಳಕು. ದೇಹದ ಅಂಗದ ನ್ಯೂನತೆಯನ್ನು ಲೆಕ್ಕಿಸದೆ ಅದು ದೇವರು ಸಾಧನೆ ಮಾಡಲು ತನಗಿತ್ತ ಅವಕಾಶ ಎಂದು ತಿಳಿದು ಸಾಧನೆಯ ಹಾದಿಯಲ್ಲಿ ಸಾಗಿದ ಕ್ರಿಕೆಟ್ ಆಟಗಾರ.

 


ಅದೆಷ್ಟೋ ಅಂಗ ವೈಕಲ್ಯ ಇರುವ ವ್ಯಕ್ತಿ ಗಳು ಅದನ್ನು ನೆಪ ಮಾಡಿಕೊಂಡು ಬದುಕುವ ಈ ಕಾಲಘಟ್ಟದಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ, ಕೈ ಕಟ್ಟಿ ಕೂರದೆ ಅವರಿಗೆ ಮಾದರಿಯಾಗಿ ಬದುಕಿ ತೋರಿಸಿದ ಅಸಾಮಾನ್ಯ ಕ್ರಿಕೆಟ್ ಪ್ರೇಮಿ.
ಆರಂಭದಲ್ಲಿ ಎಲ್ಲರೂ ಈತ ಅಂಗ ವೈಕಲ್ಯ ಇದ್ದುಕೊಂಡು “ಏನು ತಾನೇ ಸಾಧಿಸಿಯಾನು “ಎಂದು ತಮಾಷೆ ಮಾಡುತ್ತಿದ್ದ ಜನ ಈಗ ಆತನ ಸಾಧನೆ ಕಂಡು ಬೆರಗಾಗಿದ್ದು ನಿಜ.

ಪ್ರದೀಪ್ ಒಬ್ಬ ಅದ್ಭುತ ಕ್ರಿಕೆಟ್ ಆಟಗಾರ,ಆತನ ಆಟವು ಅಂಗಾಗಗಳು ಸರಿ ಇರುವ ಆಟಗಾರರನ್ನು ನಾಚಿಸುವಂತಿದೆ ಎಂದರೆ ತಪ್ಪಾಗಲಾರದು. ಮೈಕ್ ಹಿಡಿದು ಕಾಮೆಂಟರಿ ಹೇಳಲು ಶುರು ಮಾಡಿದರೆ ಮೈದಾನದಲ್ಲಿ ಆಟ ಆಡುವ ಎಲ್ಲ ಆಟಗಾರರಿಗೆ ಸ್ಫೂರ್ತಿ ಬಂದಂತೆ. ಮೈದಾನದ ಪ್ರೇಕ್ಷಕರು ಕುಣಿದು ಕುಪ್ಪಳಿಸುವುದಂತೂ ನಿಜ. ಆತನ ಬ್ಯಾಟಿಂಗ್ ವೈಖರಿ ನೋಡಿ ಅದೆಷ್ಟೋ ಬೌಲರ್‌ಗಳು ಬೆವರು ಇಳಿಸಿ ಕೊಂಡದ್ದು ಇದೆ. ಅನೇಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಕಾಮೆಂಟರಿ ಮಾಡಿದ ಒಬ್ಬ ಅದ್ಭುತ ವಾಗ್ಮಿ.
ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರ ತನ್ನನ್ನು ತಾನು ತೊಡಗಿಸಿಕೊಂಡಿರದ ಪ್ರದೀಪ್ ವೃತ್ತಿಯಲ್ಲಿ ಒಬ್ಬ ಚಿನ್ನದ ಕೆಲಸ ಮಾಡುವ ವ್ಯಕ್ತಿ. ಕೋಟೇಶ್ವರದ ಲಕ್ಷ್ಮಿ ಜುವೆಲರ್ಸ್ ನಲ್ಲಿ ಹತ್ತು ವರ್ಷಗಳ ಸೇವೆ ಮಾಡಿ ಇದೀಗ ಎರಡು ವರ್ಷದಿಂದ ವಕ್ವಾಡಿಯ ನವಮಿ ಜುವೆಲರ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ ಹಾಗಾಗಿ ನಮ್ಮ ಯೋಚನೆಯ ಬಗ್ಗೆ ಎಚ್ಚರ ವಹಿಸಬೇಕು ಇದು ಪ್ರದೀಪ್ ಕಂಡುಕೊಂಡ ಸತ್ಯ. ಬದುಕಲು ಇರುವುದು ಒಂದೇ ದಾರಿ ಅದು ಆತ್ಮ ವಿಶ್ವಾಸ. ಸಾಧಿಸಬೇಕು ಅನ್ನುವ ಹುಮ್ಮಸ್ಸು ನಮ್ಮಲ್ಲಿ ಇದ್ದರೆ ಸಾಧನೆ ಅಸಾಧ್ಯವಲ್ಲ ಸರಿಯಾದ ಉದ್ದೇಶದಿಂದ ಮುನ್ನಡೆದರೆ ಗುರಿ ತಲುಪಲು ಸಾಧ್ಯ ಅನ್ನುವ ಪ್ರದೀಪ್ ಅಂಗವೈಕಲ್ಯವನ್ನು ಸವಾಲಾಗಿ ಸ್ವೀಕರಿಸಿ ಭರವಸೆಯ ಹಾದಿಯಲ್ಲಿ ಸಾಗುತ್ತ ಇದ್ದಾರೆ. ಇವರ ಪ್ರತಿಭೆ ಎಲ್ಲಾ ಕಡೆ ಪಸರಿಸಲಿ. ಇವರು ಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ.

ಕೋಟ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಶುಭ ಹಾರೈಕೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − two =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you