ಕ್ರಿಕೆಟ್ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

-

- Advertisment -spot_img

ಕನಸು ಕಂಗಳಲ್ಲಿ ಬಂದು ಭರವಸೆಯ ಹಾದಿಯಲ್ಲಿ ಸಾಗುತ್ತಿರುವ “ಹೊದ್ರೋಳಿಯ ಮುತ್ತು”, ಪ್ರದೀಪ್ ಆಚಾರ್ಯ.

“ಪ್ರದೀಪ್” ಅಂದಾಕ್ಷಣ ನೆನಪಾಗುವುದು ಒಬ್ಬ ಭರವಸೆಯ ಕ್ರಿಕೆಟ್ ನ ಬೆಳಕು. ದೇಹದ ಅಂಗದ ನ್ಯೂನತೆಯನ್ನು ಲೆಕ್ಕಿಸದೆ ಅದು ದೇವರು ಸಾಧನೆ ಮಾಡಲು ತನಗಿತ್ತ ಅವಕಾಶ ಎಂದು ತಿಳಿದು ಸಾಧನೆಯ ಹಾದಿಯಲ್ಲಿ ಸಾಗಿದ ಕ್ರಿಕೆಟ್ ಆಟಗಾರ.

 


ಅದೆಷ್ಟೋ ಅಂಗ ವೈಕಲ್ಯ ಇರುವ ವ್ಯಕ್ತಿ ಗಳು ಅದನ್ನು ನೆಪ ಮಾಡಿಕೊಂಡು ಬದುಕುವ ಈ ಕಾಲಘಟ್ಟದಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ, ಕೈ ಕಟ್ಟಿ ಕೂರದೆ ಅವರಿಗೆ ಮಾದರಿಯಾಗಿ ಬದುಕಿ ತೋರಿಸಿದ ಅಸಾಮಾನ್ಯ ಕ್ರಿಕೆಟ್ ಪ್ರೇಮಿ.
ಆರಂಭದಲ್ಲಿ ಎಲ್ಲರೂ ಈತ ಅಂಗ ವೈಕಲ್ಯ ಇದ್ದುಕೊಂಡು “ಏನು ತಾನೇ ಸಾಧಿಸಿಯಾನು “ಎಂದು ತಮಾಷೆ ಮಾಡುತ್ತಿದ್ದ ಜನ ಈಗ ಆತನ ಸಾಧನೆ ಕಂಡು ಬೆರಗಾಗಿದ್ದು ನಿಜ.

ಪ್ರದೀಪ್ ಒಬ್ಬ ಅದ್ಭುತ ಕ್ರಿಕೆಟ್ ಆಟಗಾರ,ಆತನ ಆಟವು ಅಂಗಾಗಗಳು ಸರಿ ಇರುವ ಆಟಗಾರರನ್ನು ನಾಚಿಸುವಂತಿದೆ ಎಂದರೆ ತಪ್ಪಾಗಲಾರದು. ಮೈಕ್ ಹಿಡಿದು ಕಾಮೆಂಟರಿ ಹೇಳಲು ಶುರು ಮಾಡಿದರೆ ಮೈದಾನದಲ್ಲಿ ಆಟ ಆಡುವ ಎಲ್ಲ ಆಟಗಾರರಿಗೆ ಸ್ಫೂರ್ತಿ ಬಂದಂತೆ. ಮೈದಾನದ ಪ್ರೇಕ್ಷಕರು ಕುಣಿದು ಕುಪ್ಪಳಿಸುವುದಂತೂ ನಿಜ. ಆತನ ಬ್ಯಾಟಿಂಗ್ ವೈಖರಿ ನೋಡಿ ಅದೆಷ್ಟೋ ಬೌಲರ್‌ಗಳು ಬೆವರು ಇಳಿಸಿ ಕೊಂಡದ್ದು ಇದೆ. ಅನೇಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಕಾಮೆಂಟರಿ ಮಾಡಿದ ಒಬ್ಬ ಅದ್ಭುತ ವಾಗ್ಮಿ.
ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರ ತನ್ನನ್ನು ತಾನು ತೊಡಗಿಸಿಕೊಂಡಿರದ ಪ್ರದೀಪ್ ವೃತ್ತಿಯಲ್ಲಿ ಒಬ್ಬ ಚಿನ್ನದ ಕೆಲಸ ಮಾಡುವ ವ್ಯಕ್ತಿ. ಕೋಟೇಶ್ವರದ ಲಕ್ಷ್ಮಿ ಜುವೆಲರ್ಸ್ ನಲ್ಲಿ ಹತ್ತು ವರ್ಷಗಳ ಸೇವೆ ಮಾಡಿ ಇದೀಗ ಎರಡು ವರ್ಷದಿಂದ ವಕ್ವಾಡಿಯ ನವಮಿ ಜುವೆಲರ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ ಹಾಗಾಗಿ ನಮ್ಮ ಯೋಚನೆಯ ಬಗ್ಗೆ ಎಚ್ಚರ ವಹಿಸಬೇಕು ಇದು ಪ್ರದೀಪ್ ಕಂಡುಕೊಂಡ ಸತ್ಯ. ಬದುಕಲು ಇರುವುದು ಒಂದೇ ದಾರಿ ಅದು ಆತ್ಮ ವಿಶ್ವಾಸ. ಸಾಧಿಸಬೇಕು ಅನ್ನುವ ಹುಮ್ಮಸ್ಸು ನಮ್ಮಲ್ಲಿ ಇದ್ದರೆ ಸಾಧನೆ ಅಸಾಧ್ಯವಲ್ಲ ಸರಿಯಾದ ಉದ್ದೇಶದಿಂದ ಮುನ್ನಡೆದರೆ ಗುರಿ ತಲುಪಲು ಸಾಧ್ಯ ಅನ್ನುವ ಪ್ರದೀಪ್ ಅಂಗವೈಕಲ್ಯವನ್ನು ಸವಾಲಾಗಿ ಸ್ವೀಕರಿಸಿ ಭರವಸೆಯ ಹಾದಿಯಲ್ಲಿ ಸಾಗುತ್ತ ಇದ್ದಾರೆ. ಇವರ ಪ್ರತಿಭೆ ಎಲ್ಲಾ ಕಡೆ ಪಸರಿಸಲಿ. ಇವರು ಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ.

ಕೋಟ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಶುಭ ಹಾರೈಕೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen + eight =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you