ಕ್ರಿಕೆಟ್ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

-

- Advertisment -spot_img

ಕನಸು ಕಂಗಳಲ್ಲಿ ಬಂದು ಭರವಸೆಯ ಹಾದಿಯಲ್ಲಿ ಸಾಗುತ್ತಿರುವ “ಹೊದ್ರೋಳಿಯ ಮುತ್ತು”, ಪ್ರದೀಪ್ ಆಚಾರ್ಯ.

“ಪ್ರದೀಪ್” ಅಂದಾಕ್ಷಣ ನೆನಪಾಗುವುದು ಒಬ್ಬ ಭರವಸೆಯ ಕ್ರಿಕೆಟ್ ನ ಬೆಳಕು. ದೇಹದ ಅಂಗದ ನ್ಯೂನತೆಯನ್ನು ಲೆಕ್ಕಿಸದೆ ಅದು ದೇವರು ಸಾಧನೆ ಮಾಡಲು ತನಗಿತ್ತ ಅವಕಾಶ ಎಂದು ತಿಳಿದು ಸಾಧನೆಯ ಹಾದಿಯಲ್ಲಿ ಸಾಗಿದ ಕ್ರಿಕೆಟ್ ಆಟಗಾರ.

 


ಅದೆಷ್ಟೋ ಅಂಗ ವೈಕಲ್ಯ ಇರುವ ವ್ಯಕ್ತಿ ಗಳು ಅದನ್ನು ನೆಪ ಮಾಡಿಕೊಂಡು ಬದುಕುವ ಈ ಕಾಲಘಟ್ಟದಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ, ಕೈ ಕಟ್ಟಿ ಕೂರದೆ ಅವರಿಗೆ ಮಾದರಿಯಾಗಿ ಬದುಕಿ ತೋರಿಸಿದ ಅಸಾಮಾನ್ಯ ಕ್ರಿಕೆಟ್ ಪ್ರೇಮಿ.
ಆರಂಭದಲ್ಲಿ ಎಲ್ಲರೂ ಈತ ಅಂಗ ವೈಕಲ್ಯ ಇದ್ದುಕೊಂಡು “ಏನು ತಾನೇ ಸಾಧಿಸಿಯಾನು “ಎಂದು ತಮಾಷೆ ಮಾಡುತ್ತಿದ್ದ ಜನ ಈಗ ಆತನ ಸಾಧನೆ ಕಂಡು ಬೆರಗಾಗಿದ್ದು ನಿಜ.

ಪ್ರದೀಪ್ ಒಬ್ಬ ಅದ್ಭುತ ಕ್ರಿಕೆಟ್ ಆಟಗಾರ,ಆತನ ಆಟವು ಅಂಗಾಗಗಳು ಸರಿ ಇರುವ ಆಟಗಾರರನ್ನು ನಾಚಿಸುವಂತಿದೆ ಎಂದರೆ ತಪ್ಪಾಗಲಾರದು. ಮೈಕ್ ಹಿಡಿದು ಕಾಮೆಂಟರಿ ಹೇಳಲು ಶುರು ಮಾಡಿದರೆ ಮೈದಾನದಲ್ಲಿ ಆಟ ಆಡುವ ಎಲ್ಲ ಆಟಗಾರರಿಗೆ ಸ್ಫೂರ್ತಿ ಬಂದಂತೆ. ಮೈದಾನದ ಪ್ರೇಕ್ಷಕರು ಕುಣಿದು ಕುಪ್ಪಳಿಸುವುದಂತೂ ನಿಜ. ಆತನ ಬ್ಯಾಟಿಂಗ್ ವೈಖರಿ ನೋಡಿ ಅದೆಷ್ಟೋ ಬೌಲರ್‌ಗಳು ಬೆವರು ಇಳಿಸಿ ಕೊಂಡದ್ದು ಇದೆ. ಅನೇಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಕಾಮೆಂಟರಿ ಮಾಡಿದ ಒಬ್ಬ ಅದ್ಭುತ ವಾಗ್ಮಿ.
ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರ ತನ್ನನ್ನು ತಾನು ತೊಡಗಿಸಿಕೊಂಡಿರದ ಪ್ರದೀಪ್ ವೃತ್ತಿಯಲ್ಲಿ ಒಬ್ಬ ಚಿನ್ನದ ಕೆಲಸ ಮಾಡುವ ವ್ಯಕ್ತಿ. ಕೋಟೇಶ್ವರದ ಲಕ್ಷ್ಮಿ ಜುವೆಲರ್ಸ್ ನಲ್ಲಿ ಹತ್ತು ವರ್ಷಗಳ ಸೇವೆ ಮಾಡಿ ಇದೀಗ ಎರಡು ವರ್ಷದಿಂದ ವಕ್ವಾಡಿಯ ನವಮಿ ಜುವೆಲರ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ ಹಾಗಾಗಿ ನಮ್ಮ ಯೋಚನೆಯ ಬಗ್ಗೆ ಎಚ್ಚರ ವಹಿಸಬೇಕು ಇದು ಪ್ರದೀಪ್ ಕಂಡುಕೊಂಡ ಸತ್ಯ. ಬದುಕಲು ಇರುವುದು ಒಂದೇ ದಾರಿ ಅದು ಆತ್ಮ ವಿಶ್ವಾಸ. ಸಾಧಿಸಬೇಕು ಅನ್ನುವ ಹುಮ್ಮಸ್ಸು ನಮ್ಮಲ್ಲಿ ಇದ್ದರೆ ಸಾಧನೆ ಅಸಾಧ್ಯವಲ್ಲ ಸರಿಯಾದ ಉದ್ದೇಶದಿಂದ ಮುನ್ನಡೆದರೆ ಗುರಿ ತಲುಪಲು ಸಾಧ್ಯ ಅನ್ನುವ ಪ್ರದೀಪ್ ಅಂಗವೈಕಲ್ಯವನ್ನು ಸವಾಲಾಗಿ ಸ್ವೀಕರಿಸಿ ಭರವಸೆಯ ಹಾದಿಯಲ್ಲಿ ಸಾಗುತ್ತ ಇದ್ದಾರೆ. ಇವರ ಪ್ರತಿಭೆ ಎಲ್ಲಾ ಕಡೆ ಪಸರಿಸಲಿ. ಇವರು ಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ.

ಕೋಟ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಶುಭ ಹಾರೈಕೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 4 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you