5 C
London
Wednesday, April 24, 2024
Homeಕ್ರಿಕೆಟ್ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

ಅಂಗವೈಕಲ್ಯವ ಮರೆತು ಬೆಳೆಯುತ್ತಿರುವ ಭರವಸೆಯ ಸಾಧಕ- ಪ್ರದೀಪ್ ಆಚಾರ್ಯ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕನಸು ಕಂಗಳಲ್ಲಿ ಬಂದು ಭರವಸೆಯ ಹಾದಿಯಲ್ಲಿ ಸಾಗುತ್ತಿರುವ “ಹೊದ್ರೋಳಿಯ ಮುತ್ತು”, ಪ್ರದೀಪ್ ಆಚಾರ್ಯ.

“ಪ್ರದೀಪ್” ಅಂದಾಕ್ಷಣ ನೆನಪಾಗುವುದು ಒಬ್ಬ ಭರವಸೆಯ ಕ್ರಿಕೆಟ್ ನ ಬೆಳಕು. ದೇಹದ ಅಂಗದ ನ್ಯೂನತೆಯನ್ನು ಲೆಕ್ಕಿಸದೆ ಅದು ದೇವರು ಸಾಧನೆ ಮಾಡಲು ತನಗಿತ್ತ ಅವಕಾಶ ಎಂದು ತಿಳಿದು ಸಾಧನೆಯ ಹಾದಿಯಲ್ಲಿ ಸಾಗಿದ ಕ್ರಿಕೆಟ್ ಆಟಗಾರ.

 


ಅದೆಷ್ಟೋ ಅಂಗ ವೈಕಲ್ಯ ಇರುವ ವ್ಯಕ್ತಿ ಗಳು ಅದನ್ನು ನೆಪ ಮಾಡಿಕೊಂಡು ಬದುಕುವ ಈ ಕಾಲಘಟ್ಟದಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ, ಕೈ ಕಟ್ಟಿ ಕೂರದೆ ಅವರಿಗೆ ಮಾದರಿಯಾಗಿ ಬದುಕಿ ತೋರಿಸಿದ ಅಸಾಮಾನ್ಯ ಕ್ರಿಕೆಟ್ ಪ್ರೇಮಿ.
ಆರಂಭದಲ್ಲಿ ಎಲ್ಲರೂ ಈತ ಅಂಗ ವೈಕಲ್ಯ ಇದ್ದುಕೊಂಡು “ಏನು ತಾನೇ ಸಾಧಿಸಿಯಾನು “ಎಂದು ತಮಾಷೆ ಮಾಡುತ್ತಿದ್ದ ಜನ ಈಗ ಆತನ ಸಾಧನೆ ಕಂಡು ಬೆರಗಾಗಿದ್ದು ನಿಜ.

ಪ್ರದೀಪ್ ಒಬ್ಬ ಅದ್ಭುತ ಕ್ರಿಕೆಟ್ ಆಟಗಾರ,ಆತನ ಆಟವು ಅಂಗಾಗಗಳು ಸರಿ ಇರುವ ಆಟಗಾರರನ್ನು ನಾಚಿಸುವಂತಿದೆ ಎಂದರೆ ತಪ್ಪಾಗಲಾರದು. ಮೈಕ್ ಹಿಡಿದು ಕಾಮೆಂಟರಿ ಹೇಳಲು ಶುರು ಮಾಡಿದರೆ ಮೈದಾನದಲ್ಲಿ ಆಟ ಆಡುವ ಎಲ್ಲ ಆಟಗಾರರಿಗೆ ಸ್ಫೂರ್ತಿ ಬಂದಂತೆ. ಮೈದಾನದ ಪ್ರೇಕ್ಷಕರು ಕುಣಿದು ಕುಪ್ಪಳಿಸುವುದಂತೂ ನಿಜ. ಆತನ ಬ್ಯಾಟಿಂಗ್ ವೈಖರಿ ನೋಡಿ ಅದೆಷ್ಟೋ ಬೌಲರ್‌ಗಳು ಬೆವರು ಇಳಿಸಿ ಕೊಂಡದ್ದು ಇದೆ. ಅನೇಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಕಾಮೆಂಟರಿ ಮಾಡಿದ ಒಬ್ಬ ಅದ್ಭುತ ವಾಗ್ಮಿ.
ಕ್ರಿಕೆಟ್ ಕ್ಷೇತ್ರದಲ್ಲಿ ಮಾತ್ರ ತನ್ನನ್ನು ತಾನು ತೊಡಗಿಸಿಕೊಂಡಿರದ ಪ್ರದೀಪ್ ವೃತ್ತಿಯಲ್ಲಿ ಒಬ್ಬ ಚಿನ್ನದ ಕೆಲಸ ಮಾಡುವ ವ್ಯಕ್ತಿ. ಕೋಟೇಶ್ವರದ ಲಕ್ಷ್ಮಿ ಜುವೆಲರ್ಸ್ ನಲ್ಲಿ ಹತ್ತು ವರ್ಷಗಳ ಸೇವೆ ಮಾಡಿ ಇದೀಗ ಎರಡು ವರ್ಷದಿಂದ ವಕ್ವಾಡಿಯ ನವಮಿ ಜುವೆಲರ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ ಹಾಗಾಗಿ ನಮ್ಮ ಯೋಚನೆಯ ಬಗ್ಗೆ ಎಚ್ಚರ ವಹಿಸಬೇಕು ಇದು ಪ್ರದೀಪ್ ಕಂಡುಕೊಂಡ ಸತ್ಯ. ಬದುಕಲು ಇರುವುದು ಒಂದೇ ದಾರಿ ಅದು ಆತ್ಮ ವಿಶ್ವಾಸ. ಸಾಧಿಸಬೇಕು ಅನ್ನುವ ಹುಮ್ಮಸ್ಸು ನಮ್ಮಲ್ಲಿ ಇದ್ದರೆ ಸಾಧನೆ ಅಸಾಧ್ಯವಲ್ಲ ಸರಿಯಾದ ಉದ್ದೇಶದಿಂದ ಮುನ್ನಡೆದರೆ ಗುರಿ ತಲುಪಲು ಸಾಧ್ಯ ಅನ್ನುವ ಪ್ರದೀಪ್ ಅಂಗವೈಕಲ್ಯವನ್ನು ಸವಾಲಾಗಿ ಸ್ವೀಕರಿಸಿ ಭರವಸೆಯ ಹಾದಿಯಲ್ಲಿ ಸಾಗುತ್ತ ಇದ್ದಾರೆ. ಇವರ ಪ್ರತಿಭೆ ಎಲ್ಲಾ ಕಡೆ ಪಸರಿಸಲಿ. ಇವರು ಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ.

ಕೋಟ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಶುಭ ಹಾರೈಕೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

15 + 10 =