ಕ್ರಿಕೆಟ್ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

-

- Advertisment -spot_img

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

ಪೊಡವಿಗೊಡೆಯ ಶ್ರೀ ಕೃಷ್ಣ ನ ನಾಡಾದ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿರುವ ಇವರು ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿಯಾಗಿದ್ದುಕೊಂಡು, ರಾಷ್ಟ್ರ,ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಗಳ ವೀಕ್ಷಕ ವಿವರಣೆ ಜೊತೆ ನಾಟಕ,ಯಕ್ಷಗಾನ ಹಾಗೂ ನೃತ್ಯ ರಂಗದಲ್ಲಿ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡವರು.

2000 ನೇ ರಾಜ್ಯದ ಪ್ರತಿಷ್ಟಿತ ತಂಡ “ಪಡುಬಿದ್ರಿ ಫ್ರೆಂಡ್ಸ್” ಸಂಘಟಿಸಿದ್ದ ರಾಜ್ಯಮಟ್ಟದ ಪಂದ್ಯಾಟದಿಂದ ಪ್ರಾರಂಭವಾದ ಇವರ ಪಯಣ ಇಂದು ರಾಜ್ಯದ ಅತ್ಯಂತ ಹೆಚ್ಚು ಜಿಲ್ಲೆಗಳಲ್ಲಿ ಕ್ರಿಕೆಟ್ ಪ್ರೇಮಿಗಳ ಮನೆ ಮನ ತಲುಪಿದೆ.

ಅಲ್ಲದೇ ನಾಟಕ ಕಲಾವಿದರಾಗಿ,ಸುಮಾರು 100 ಕ್ಕೂ ಹೆಚ್ಚಿನ ನಾಟಕದಲ್ಲಿ ಭಾಗವಹಿಸಿದ್ದು ಜೊತೆಗೆ ಯಕ್ಷಗಾನ ರಂಗದಲ್ಲೂ ನೈಪುಣ್ಯತೆಯನ್ನು ಸಾಧಿಸಿದವರು.ಕಾಲಿಗೆ ಗೆಜ್ಜೆ ಕಟ್ಟಿ ಯಕ್ಷಗಾನದ ತಾಳ ಮೇಳಕ್ಕೆ ತನ್ನ ಪ್ರತಿಭೆಯನ್ನು ಓರೆ ಹಚ್ಚಿರುವ ಶ್ರೀ ಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾಮಂಡಳಿಯಂತಹ ಹವ್ಯಾಸಿ ಸಂಘಗಳ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗೆಜ್ಜೆ ಕಟ್ಟಿದವರು.ಜೊತೆಗೆ ನಾಟ್ಯ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

ಇವರ ಸಾಧನೆಯನ್ನು ಗುರುತಿಸಿ 2012_13 ನೇ ಸಾಲಿನಲ್ಲಿ ವಿಶ್ವ ಕ್ರೀಡಾಂಗಣ ಮತ್ತು ಸ್ಪೋರ್ಟ್ಸ್ ಫೌಂಡೇಶನ್ ಬೆಂಗಳೂರು ಇವರು ಜಂಟಿಯಾಗಿ ಕೊಡಮಾಡಿದ “ಕ್ರೀಡಾರತ್ನ” ಪ್ರಶಸ್ತಿಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅನಿವಾಸಿ ಕನ್ನಡಿಗ ಅಬುಧಾಬಿ ಯವ ಉದ್ಯಮಿ ಡಾ.ಬಿ.ಆರ್.ಶೆಟ್ಟಿಯವರ ಮುಖಾಂತರ ಪಡೆದಿರುವುದು, 2020 ರಲ್ಲಿ ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,2023 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸೇವಾರತ್ನ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದು ಇವರ ಪ್ರತಿಭೆಗೆ ಹಿಡಿದ ಕನ್ನಡಿಯಂತಿದೆ.

ತಮ್ಮನ್ನು ಹಲವಾರು ಸಂಘ ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರಶಾಂತ್ ರವರು ಇತಿಹಾಸ ಸೃಷ್ಟಿಸಿದ್ದ ಧಾರಾವಾಹಿ “ಗುಡ್ಡದ ಭೂತ” ದಲ್ಲಿ ಪ್ರಕಾಶ್ ರೈ ಅವರ ಜೊತೆಗೆ ಕಿರುಪಾತ್ರದಲ್ಲಿ ನಟಿಸಿರುವುದು ಹಾಗೂ ರಕ್ತದಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪ್ರಶಾಂತ್ ರವರು ಕಲಾಚಾವಡಿ ತಂಡದ ಮೂಲಕ “ಮೋಕೆದ ಮದಿಮಾಲ್” ನಾಟಕದಲ್ಲಿ ಪ್ರಮುಖ ರೋಲ್ ನಿರ್ವಹಿಸುತ್ತಿದ್ದು,ಇತ್ತೀಚೆಗಷ್ಟೇ ಒಡಿಯೂರಿನಲ್ಲಿ ನಡೆದ ನಾಟಕೋತ್ಸವದಲ್ಲಿ ಪ್ರಥಮ ಪ್ರಶಸ್ತಿ ಪಡೆದು ಅತ್ಯುತ್ತಮ ನಾಟಕವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ…

ಸಮಸ್ತ ಸ್ಪೋರ್ಟ್ಸ್ ಕನ್ನಡ ರಾಜ್ಯ ಟೆನಿಸ್ ಕ್ರಿಕೆಟ್ ವತಿಯಿಂದ ಪ್ರಶಾಂತ್ ಅಂಬಲಪಾಡಿ ಇವರಿಗೆ ಹಾರ್ದಿಕ ಅಭಿನಂದನೆಗಳು.

LEAVE A REPLY

Please enter your comment!
Please enter your name here

19 + eighteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you