ಕ್ರಿಕೆಟ್ವಿಧಿಯಾಟ.. ವಿಶ್ವಕಪ್ ಸೋತು ಕಣ್ಣೀರಿಟ್ಟಿದ್ದ ನೆಲದಲ್ಲೇ ವಿಶ್ವಕಪ್ ಎತ್ತಿ ಹಿಡಿದ ದ್ರಾವಿಡ್

ವಿಧಿಯಾಟ.. ವಿಶ್ವಕಪ್ ಸೋತು ಕಣ್ಣೀರಿಟ್ಟಿದ್ದ ನೆಲದಲ್ಲೇ ವಿಶ್ವಕಪ್ ಎತ್ತಿ ಹಿಡಿದ ದ್ರಾವಿಡ್

-

- Advertisment -spot_img
ಬಹುಶಃ… ರಾಹುಲ್ ದ್ರಾವಿಡ್ ಅವರ ಅಪ್ಪಟ ಅಭಿಮಾನಿಗಳು ಆ ದೃಶ್ಯವನ್ನು ನೆನಪಿಸಿಕೊಂಡರೆ ಈಗಲೂ ಕಣ್ಣೀರಾಗುತ್ತಾರೆ. ಸಮಚಿತ್ತ ವ್ಯಕ್ತಿತ್ವದ ದ್ರಾವಿಡ್, ಯಾವತ್ತೂ ಭಾವನೆಗಳನ್ನು ಅದುಮಿಟ್ಟುಕೊಂಡೇ ಆಡಿದ ದ್ರಾವಿಡ್ ಆ ದಿನ ಕಣ್ಣೀರು ಹಾಕಿದ್ದರು.
ರಾಹುಲ್ ದ್ರಾವಿಡ್ ನಾಯಕತ್ವದ ಭಾರತ ತಂಡ 2007ರ ಏಕದಿನ ವಿಶ್ವಕಪ್ ಟೂರ್ನಿಗೆ ಕಾಲಿಟ್ಟಾಗ ಬಹುತೇಕ ಕ್ರಿಕೆಟ್ ಪಂಡಿತರು ಹೇಳಿದ್ದು, ‘’ಈ ಬಾರಿ ವಿಶ್ವಕಪ್ ಗೆಲ್ಲುವ ತಂಡ ಇದೇ’’ ಎಂದು.
ಏನಿತ್ತು.. ಏನಿರಲಿಲ್ಲ ಆ ತಂಡದಲ್ಲಿ..? ಸಚಿನ್, ಗಂಗೂಲಿ, ಸೆಹ್ವಾಗ್, ಯುವರಾಜ್ ಸಿಂಗ್, ಎಂ.ಎಸ್ ಧೋನಿ, ರಾಬಿನ್ ಉತ್ತಪ್ಪನಂಥಾ ದಾಂಡಿಗರು, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಜಹೀರ್ ಖಾನ್’ನಂಥಾ quality ಬೌಲರ್’ಗಳು.. ಇಡೀ ತಂಡಕ್ಕೆ ಕಳಶವಿಟ್ಟಂತೆ ತಾಳ್ಮೆಯ ಪ್ರತಿರೂಪದ gentlemen ರಾಹುಲ್ ದ್ರಾವಿಡ್ ಅವರ ನಾಯಕತ್ವ. ಒಂದು ವಿಶ್ವಕಪ್ ಗೆಲ್ಲಲು ಏನೆಲ್ಲಾ ಇರಬೇಕಿತ್ತೋ ಅಷ್ಟೂ ಆ ತಂಡದಲ್ಲಿತ್ತು. ಆದರೆ… ಒಗ್ಗಟ್ಟು ಒಂದನ್ನು ಬಿಟ್ಟು..!
ಸೋಲಲೇಬಾರದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಸೋತಿತು. ಶ್ರೀಲಂಕಾ ವಿರುದ್ಧ ಮುಗ್ಗರಿಸಿತು. ಇನ್ನೆಲ್ಲಿಯ ವಿಶ್ವಕಪ್..? ಲೀಗ್ ಹಂತದಲ್ಲೇ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು ದ್ರಾವಿಡ್ ನಾಯಕತ್ವದ ಭಾರತ ತಂಡ.
ಅನಿರೀಕ್ಷಿತ ಆಘಾತಕ್ಕೆ ಅವತ್ತು ಪೆವಿಲಿಯನ್’ನಲ್ಲಿ ಕೂತು ಕಣ್ಣೀರಿಡುವುದನ್ನು ಬಿಟ್ಟರೆ ದ್ರಾವಿಡ್ ಅವರ ಬಳಿ ಬೇರೆ ಆಯ್ಕೆಯೇ ಇರಲಿಲ್ಲ.
ವಿಧಿಯಾಟ ಹೇಗಿದೆ ನೋಡಿ..  17 ವರ್ಷಗಳ ಹಿಂದೆ ಯಾವ ನೆಲದಲ್ಲಿ ರಾಹುಲ್ ದ್ರಾವಿಡ್ ಕಣ್ಣೀರಿಟ್ಟಿದ್ದರೋ, ಅದೇ ನೆಲದಲ್ಲಿ ವಿಶ್ವಕಪ್ ಎತ್ತಿ ಹಿಡಿದಿದ್ದಾರೆ.
ದೇವರು ಕೊನೆಗೂ ನ್ಯಾಯ ಕೊಟ್ಟಿದ್ದಾನೆ. ದ್ರಾವಿಡ್ ಯಾವುದಕ್ಕೆ ಅರ್ಹರಾಗಿದ್ದರೋ ಅದು ಅವರಿಗೆ ಸಿಕ್ಕಿದೆ. ಆಟಗಾರನಾಗಿ, ನಾಯಕನಾಗಿ ವಿಶ್ವಕಪ್ ಗೆಲ್ಲಲಾಗದ ದ್ರಾವಿಡ್ ಕೋಚ್ ಆಗಿ ತಮ್ಮ ಜೀವನದ ಅತ್ಯಂತ ದೊಡ್ಡ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಆ ಕಪ್ ಹಿಡಿದು ಅವರು ಸಂಭ್ರಮಿಸಿದ ರೀತಿಯೇ ಹೇಳುತ್ತಿದೆ, ‘’ವಿಶ್ವಕಪ್ ಟ್ರೋಫಿ ದ್ರಾವಿಡ್ ಅವರಿಗೆ ಎಷ್ಟು ಮುಖ್ಯವಾಗಿತ್ತು’’ ಎಂದು.
ರಾಹುಲ್ ದ್ರಾವಿಡ್ ಭಾರತ ತಂಡಕ್ಕಾಗಿ ಎಲ್ಲವನ್ನೂ ಮಾಡಿದ ಒಬ್ಬ amazing team man. ಅಂತಹ ಮತ್ತೊಬ್ಬ ಕ್ರಿಕೆಟಿಗ ದುರ್ಬೀನು ಹಾಕಿ ಹುಡುಕಿದರೂ ಸಿಗಲು ಸಾಧ್ಯವಿಲ್ಲ. ಸ್ವಾರ್ಥ ಎಂಬ ಪದ ಅವರ dictionaryಯಲ್ಲೇ ಇಲ್ಲ. ಅಂತಹ ಲವಲೇಶದಷ್ಟು ಸ್ವಾರ್ಥವಿದ್ದಿದ್ದರೆ,  ಅವರು ಕ್ರಿಕೆಟ್ ಮೈದಾನದಲ್ಲಿ ಹತ್ತಾರು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರಲಿಲ್ಲ. ಯಾವುದೇ ಪರಿಸ್ಥಿತಿ ಇರಲಿ, ಎಂಥದ್ದೇ ಸನ್ನಿವೇಶವಿರಲಿ.. ತಂಡಕ್ಕೆ ತನ್ನ ಅಗತ್ಯವಿದೆ ಎಂದಾಗ ದ್ರಾವಿಡ್ ಯಾವತ್ತೂ ಹಿಂದೇಟು ಹಾಕಿದವರೇ ಅಲ್ಲ. ಅವರು ಅರ್ಜುನನಂಥಾ ಸವ್ಯಸಾಚಿ ಆಟಗಾರ.
ಆದರೆ ಈ ಸವ್ಯಸಾಚಿಗೆ ಕ್ರಿಕೆಟ್ ತ್ಯಜಿಸುವ ಹೊತ್ತಿಗೆ ಸಿಕ್ಕಿದ್ದು ಬರೀ ನೋವು. ಆಡಿದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಸೋಲು, ಆಡಿದ ಕೊನೆಯ ಏಕದಿನ ಪಂದ್ಯದಲ್ಲಿ ಸೋಲು, ವೃತ್ತಿಜೀವನದಲ್ಲಿ ಆಡಿದ ಏಕೈಕ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಸೋಲು.. ಕಟ್ಟ ಕಡೆಯ ಐಪಿಎಲ್ ಪಂದ್ಯದಲ್ಲಿ ಸೋಲು, ಕೊನೆಯ ಚಾಂಪಿಯನ್ಸ್ ಲೀಗ್ ಪಂದ್ಯದಲ್ಲೂ ಸೋಲು.. ಹೀಗೆ ಸಿಗಬೇಕಿದ್ದ ಗೌರವದ ವಿದಾಯ ದ್ರಾವಿಡ್ ಅವರಿಗೆ ಸಿಕ್ಕಿರಲೇ ಇಲ್ಲ.
ಇನ್ನು ದ್ರಾವಿಡ್ ನಿವೃತ್ತಿಯಾದ ಸಂದರ್ಭ… ತೆಂಡೂಲ್ಕರ್, ಗಂಗೂಲಿಯಂತೆ ಮೈದಾನದಲ್ಲೇ ವಿದಾಯದ ಕ್ಷಣಗಳ ಅನುಭವದಿಂದಲೂ ವಂಚಿತರಾದವರು ನತದೃಷ್ಟ ದ್ರಾವಿಡ್.
ಆಟಗಾರನಾಗಿ ಯಾವ ಗೌರವದ ವಿದಾಯ ದ್ರಾವಿಡ್ ಅವರಿಗೆ ಸಿಗಬೇಕಿತ್ತೋ, ಅದು ಕೋಚ್ ಆಗಿ ಸಿಕ್ಕಿದೆ. ಅದೂ, ಅವರು ಅಷ್ಟಾಗಿ ಇಷ್ಟ ಪಡದೇ ಇದ್ದ ಕ್ರಿಕೆಟ್ ಫಾರ್ಮ್ಯಾಟ್ ಮೂಲಕ.
ಕೊನೆಗೂ ಭಾರತಕ್ಕೆ 10 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲಿಸಲು, 13 ವರ್ಷಗಳ ನಂತರ ವಿಶ್ವಕಪ್ ಗೆಲ್ಲಿಸಲು ನಮ್ಮ ಕರ್ನಾಟಕದ ಹೆಮ್ಮೆ ರಾಹುಲ್ ದ್ರಾವಿಡ್ ಅವರೇ ದ್ರೋಣಾಚಾರ್ಯನಾಗಿ ಬರಬೇಕಾಯಿತು❤️❤️❤️

LEAVE A REPLY

Please enter your comment!
Please enter your name here

14 − 11 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you