Site icon SportsKannada ಸ್ಪೋರ್ಟ್ಸ್ ಕನ್ನಡ

ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ – ಉಮೇಶ್ ಪೂಜಾರಿ ಬ್ರಹ್ಮಾವರ

ಉಡುಪಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ – ಉಮೇಶ್ ಪೂಜಾರಿ ಬ್ರಹ್ಮಾವರ

ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಹಿರಿಯ ಕನ್ನಡ ಕ್ರಿಕೆಟ್ ಕಾಮೆಂಟೇಟರ್ ಹಾಗೂ ಸಮಾಜ ಸೇವಕ ಉಮೇಶ್ ಪೂಜಾರಿ ಅವರಿಗೆ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತೋಷದ ವಿಚಾರವಾಗಿದೆ.

ಕ್ರೀಡೆ ಹಾಗೂ ಸಮಾಜ ಸೇವೆ ಎರಡನ್ನೂ ಸಮಪಾಲಾಗಿ ನಡೆಸಿಕೊಂಡು ಬಂದಿರುವ ಉಮೇಶ್ ಪೂಜಾರಿ ಅವರು, ಕಳೆದ ಹಲವು ವರ್ಷಗಳಿಂದ ಕನ್ನಡ ಕ್ರಿಕೆಟ್ ಕಾಮೆಂಟೇಟರ್ ಆಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಕ್ರೀಡೆಯೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

“ಸಮಾಜ ಸೇವೆ ಮತ್ತು ಕ್ರೀಡೆಗೆ ನೀಡಿದ ಅದ್ಭುತ ಕೊಡುಗೆಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಉಡುಪಿಯ ಗೌರವ.”

Exit mobile version