ಕ್ರಿಕೆಟ್43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!

43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!

-

- Advertisment -spot_img
ಈ ಕಥೆ ಶುರುವಾಗುವುದು 80ರ ದಶಕದ ಆರಂಭದಲ್ಲಿ. ಅವತ್ತು ಪಶ್ಚಿಮ ಬಂಗಾಳದ ರಣಜಿತ್ ಬೋಸ್ ಎಂಬ ವ್ಯಕ್ತಿ, ಪತ್ನಿ ಮತ್ತು 2 ವರ್ಷದ ಮಗನೊಂದಿಗೆ ಕಲ್ಕತ್ತಾದಿಂದ ಪೋರ್ಟ್ ಬ್ಲೇರ್’ಗೆ ಸಮುದ್ರ ಮಾರ್ಗವಾಗಿ ಹೊರಟಿದ್ದರು. ಮಾರ್ಗ ಮಧ್ಯೆ ಹಡಗು ಬಂಡೆಯೊಂದಕ್ಕೆ ಬಡಿದು ಮುಳುಗಲು ಪ್ರಾರಂಭಿಸಿತು.
ಸಮುದ್ರ ಉಗ್ರಾವತಾರ ತಾಳಿತ್ತು. ಹೀಗಾಗಿ ಹತ್ತಿರದಲ್ಲಿದ್ದ ಹಡಗುಗಳಿಗೆ ಮುಳುಗುತ್ತಿದ್ದ ಹಡಗಿನ ಬಳಿ ಬರಲು ಸಾಧ್ಯವಾಗಲಿಲ್ಲ. ರಣಜಿತ್ ಬೋಸ್’ಗೆ ಮೊದಲು ಪುಟ್ಟ ಮಗನನ್ನು ಉಳಿಸಿಕೊಳ್ಳಬೇಕಿತ್ತು. ಬೇರೆ ದಾರಿ ಕಾಣದೆ ಮಗನನ್ನು ಹಿಡಿದು ಹತ್ತಿರದಲ್ಲಿದ್ದ ಹಡಗಿಗೆ ಎಸೆದು ಬಿಟ್ಟರು. ಅಲ್ಲೊಬ್ಬ ವ್ಯಕ್ತಿ ಆ ಪುಟ್ಟ ಹುಡುಗನನ್ನು ಸುರಕ್ಷಿತವಾಗಿ ಹಿಡಿದುಕೊಂಡ.
18 ವರ್ಷಗಳ ನಂತರ ಆ ಹುಡುಗ ಬಂಗಾಳ ಪರ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ. ಆತನ ಹೆಸರು ರಣದೇವ್ ಬೋಸ್.
2006-07ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಕೇವಲ ಎಂಟೇ ಪಂದ್ಯಗಳಿಂದ 57 ವಿಕೆಟ್ ಕಬಳಿಸಿದ್ದ ರಣದೀಪ್ ಬೋಸ್, ಭಾರತ ಪರ ಆಡುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದ ವೇಗದ ಬೌಲರ್.
ಆದರೆ ಬಂಗಾಳದ ಕ್ರಿಕೆಟ್ ಸೈನಿಕನಿಗೆ ಆ ಅವಕಾಶ ಸಿಗಲಿಲ್ಲ.
ಆಟಗಾರನಾಗಿ ಮಾಡಲು ಸಾಧ್ಯವಾಗದ್ದನ್ನು ಬೌಲಿಂಗ್ ಕೋಚ್ ಆಗಿ ಸಾಧಿಸಿದ್ದಾರೆ ರಣದೇವ್ ಬೋಸ್.
ಭಾರತ ಟೆಸ್ಟ್ ತಂಡಕ್ಕೆ ಬಂಗಾಳದಿಂದ ಇಬ್ಬರು ಫಾಸ್ಟ್ ಬೌಲರ್’ಗಳನ್ನು ತಯಾರು ಮಾಡಿ ಕಳುಹಿಸಿದ್ದಾರೆ. ಒಬ್ಬ ಮುಕೇಶ್ ಕುಮಾರ್, ಇನ್ನೊಬ್ಬ ಆಕಾಶ್’ದೀಪ್. ರಣದೇವ್ ಬೋಸ್ ಗರಡಿಯಲ್ಲೇ ಪಳಗಿದ ಇಶಾನ್ ಪೊರೆಲ್ ಎಂಬ ಮತ್ತೊಬ್ಬ ಯುವ ವೇಗದ ಬೌಲರ್ 2018ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ.
ರಣದೇವ್ ಬೋಸ್ ಅವರ ಶಿಷ್ಯರಲ್ಲಿ ಒಬ್ಬನಾದ ಆಕಾಶ್’ದೀಪ್, ರಾಂಚಿಯಲ್ಲಿ ಶುಕ್ರವಾರ ಭಾರತ ಪರ ಟೆಸ್ಟ್ ಪದಾರ್ಪಣೆ ಮಾಡಿದ್ದಾನೆ.
43 ವರ್ಷಗಳ ಹಿಂದೆ ಸಮುದ್ರಕ್ಕೆ ಆಹುತಿಯಾಗಬೇಕಿದ್ದ ಆ ಹುಡುಗನೇ ಈಗ ಭಾರತ ಪರ ಆಡುವ ಕನಸು ಕಾಣುವ ಬಂಗಾಳದ ಯುವ ವೇಗದ ಬೌಲರ್’ಗಳ ಪಾಲಿಗೆ ದ್ರೋಣಾಚಾರ್ಯ.
#Akashdeep #RanadebBose

LEAVE A REPLY

Please enter your comment!
Please enter your name here

15 − 4 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you