ಕ್ರಿಕೆಟ್43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!

43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!

-

- Advertisment -spot_img
ಈ ಕಥೆ ಶುರುವಾಗುವುದು 80ರ ದಶಕದ ಆರಂಭದಲ್ಲಿ. ಅವತ್ತು ಪಶ್ಚಿಮ ಬಂಗಾಳದ ರಣಜಿತ್ ಬೋಸ್ ಎಂಬ ವ್ಯಕ್ತಿ, ಪತ್ನಿ ಮತ್ತು 2 ವರ್ಷದ ಮಗನೊಂದಿಗೆ ಕಲ್ಕತ್ತಾದಿಂದ ಪೋರ್ಟ್ ಬ್ಲೇರ್’ಗೆ ಸಮುದ್ರ ಮಾರ್ಗವಾಗಿ ಹೊರಟಿದ್ದರು. ಮಾರ್ಗ ಮಧ್ಯೆ ಹಡಗು ಬಂಡೆಯೊಂದಕ್ಕೆ ಬಡಿದು ಮುಳುಗಲು ಪ್ರಾರಂಭಿಸಿತು.
ಸಮುದ್ರ ಉಗ್ರಾವತಾರ ತಾಳಿತ್ತು. ಹೀಗಾಗಿ ಹತ್ತಿರದಲ್ಲಿದ್ದ ಹಡಗುಗಳಿಗೆ ಮುಳುಗುತ್ತಿದ್ದ ಹಡಗಿನ ಬಳಿ ಬರಲು ಸಾಧ್ಯವಾಗಲಿಲ್ಲ. ರಣಜಿತ್ ಬೋಸ್’ಗೆ ಮೊದಲು ಪುಟ್ಟ ಮಗನನ್ನು ಉಳಿಸಿಕೊಳ್ಳಬೇಕಿತ್ತು. ಬೇರೆ ದಾರಿ ಕಾಣದೆ ಮಗನನ್ನು ಹಿಡಿದು ಹತ್ತಿರದಲ್ಲಿದ್ದ ಹಡಗಿಗೆ ಎಸೆದು ಬಿಟ್ಟರು. ಅಲ್ಲೊಬ್ಬ ವ್ಯಕ್ತಿ ಆ ಪುಟ್ಟ ಹುಡುಗನನ್ನು ಸುರಕ್ಷಿತವಾಗಿ ಹಿಡಿದುಕೊಂಡ.
18 ವರ್ಷಗಳ ನಂತರ ಆ ಹುಡುಗ ಬಂಗಾಳ ಪರ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ. ಆತನ ಹೆಸರು ರಣದೇವ್ ಬೋಸ್.
2006-07ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಕೇವಲ ಎಂಟೇ ಪಂದ್ಯಗಳಿಂದ 57 ವಿಕೆಟ್ ಕಬಳಿಸಿದ್ದ ರಣದೀಪ್ ಬೋಸ್, ಭಾರತ ಪರ ಆಡುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದ ವೇಗದ ಬೌಲರ್.
ಆದರೆ ಬಂಗಾಳದ ಕ್ರಿಕೆಟ್ ಸೈನಿಕನಿಗೆ ಆ ಅವಕಾಶ ಸಿಗಲಿಲ್ಲ.
ಆಟಗಾರನಾಗಿ ಮಾಡಲು ಸಾಧ್ಯವಾಗದ್ದನ್ನು ಬೌಲಿಂಗ್ ಕೋಚ್ ಆಗಿ ಸಾಧಿಸಿದ್ದಾರೆ ರಣದೇವ್ ಬೋಸ್.
ಭಾರತ ಟೆಸ್ಟ್ ತಂಡಕ್ಕೆ ಬಂಗಾಳದಿಂದ ಇಬ್ಬರು ಫಾಸ್ಟ್ ಬೌಲರ್’ಗಳನ್ನು ತಯಾರು ಮಾಡಿ ಕಳುಹಿಸಿದ್ದಾರೆ. ಒಬ್ಬ ಮುಕೇಶ್ ಕುಮಾರ್, ಇನ್ನೊಬ್ಬ ಆಕಾಶ್’ದೀಪ್. ರಣದೇವ್ ಬೋಸ್ ಗರಡಿಯಲ್ಲೇ ಪಳಗಿದ ಇಶಾನ್ ಪೊರೆಲ್ ಎಂಬ ಮತ್ತೊಬ್ಬ ಯುವ ವೇಗದ ಬೌಲರ್ 2018ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ.
ರಣದೇವ್ ಬೋಸ್ ಅವರ ಶಿಷ್ಯರಲ್ಲಿ ಒಬ್ಬನಾದ ಆಕಾಶ್’ದೀಪ್, ರಾಂಚಿಯಲ್ಲಿ ಶುಕ್ರವಾರ ಭಾರತ ಪರ ಟೆಸ್ಟ್ ಪದಾರ್ಪಣೆ ಮಾಡಿದ್ದಾನೆ.
43 ವರ್ಷಗಳ ಹಿಂದೆ ಸಮುದ್ರಕ್ಕೆ ಆಹುತಿಯಾಗಬೇಕಿದ್ದ ಆ ಹುಡುಗನೇ ಈಗ ಭಾರತ ಪರ ಆಡುವ ಕನಸು ಕಾಣುವ ಬಂಗಾಳದ ಯುವ ವೇಗದ ಬೌಲರ್’ಗಳ ಪಾಲಿಗೆ ದ್ರೋಣಾಚಾರ್ಯ.
#Akashdeep #RanadebBose

LEAVE A REPLY

Please enter your comment!
Please enter your name here

5 + sixteen =

Latest news

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...
- Advertisement -spot_imgspot_img

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you