Action Replayಮೈಟಿ ಬೆಂಗಳೂರು ತಂಡಕ್ಕೆ ರಂಗಣ್ಣ & ಹನುಮಂತರಾಯಪ್ಪ ಮೆಮೋರಿಯಲ್ ಕಪ್-2019

ಮೈಟಿ ಬೆಂಗಳೂರು ತಂಡಕ್ಕೆ ರಂಗಣ್ಣ & ಹನುಮಂತರಾಯಪ್ಪ ಮೆಮೋರಿಯಲ್ ಕಪ್-2019

-

- Advertisment -spot_img

ಟಿ.ದಾಸರಹಳ್ಳಿಯ M.E.I layout ನ ಅಂಗಣದಲ್ಲಿ 2 ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ ಪ್ರತಿಷ್ಟಿತ ರಂಗಣ್ಣ & ಹನುಮಂತರಾಯಪ್ಪ ಮೆಮೋರಿಯಲ್ ಕಪ್ ನ್ನು ಮೈಟಿ ಬೆಂಗಳೂರು ತಂಡ ಜಯಿಸಿದೆ.

ಬರೋಡದ ರಣಜಿ ಆಟಗಾರ ಅಂಕುರ್ ಸಿಂಗ್,ಮುಂಬಯಿ ಟೆನ್ನಿಸ್ ಕ್ರಿಕೆಟಿಗ ಬಂಟಿ ಪಾಟೀಲ್ ಒಳಗೊಂಡ ಪಿರಮಿತಾ ತಂಡ ಸೇರಿದಂತೆ ರಾಜ್ಯದ 16 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಸೆಮಿಫೈನಲ್‌ನಲ್ಲಿ ARP ನ್ಯಾಶ್ ತಂಡ ಸ್ನೇಹಪ್ರಿಯ ತಂಡವನ್ನು ಸೋಲಿಸಿದರೆ,ಮೈಟಿ ತಂಡ ಫ್ರೆಂಡ್ಸ್ ಬೆಂಗಳೂರು ತಂಡವನ್ನು ರೋಚಕ ಕದನದಲ್ಲಿ 1 ರನ್ ಗಳ ಅಂತರದಲ್ಲಿ ಸೋಲುಣಿಸಿ ಫೈನಲ್ ಗೆ ನೆಗೆದೇರಿದ್ದವು.

ಮಳೆ ಹಾಗೂ ಸಮಯದ ಅಭಾವದಿಂದ ಕೇವಲ 1 ಓವರ್ ಗಳಿಗೆ ಸೀಮಿತವಾದ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮೈಟಿ ಶಾಬುದ್ದೀನ್,ನ್ಯಾಶ್ ಪುರುಷಿಗೆ ಸಿಡಿಸಿದ 1 ಸಿಕ್ಸರ್,1ಬೌಂಡರಿ ಸಹಿತ 13 ರನ್ ಗಳ ಗುರಿಯನ್ನು ನೀಡಿತ್ತು. ಉತ್ತರವಾಗಿ ಮೈಟಿ ಕೃಷ್ಣ ಅದ್ಭುತ ಬೌಲಿಂಗ್ ನಲ್ಲಿ ನ್ಯಾಶ್ ತಂಡವನ್ನು ಒಂದು ಓವರ್ ನಲ್ಲಿ ಕೇವಲ 2ರನ್ ನೀಡಿ 2 ವಿಕೆಟ್ ಉರುಳಿಸಿ ಮೈಟಿಗೆ ಗೆಲುವು ತಂದಿತ್ತರು.

ವಿಜಯಿ ತಂಡ ಮೈಟಿ 3 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿ ಹಾಗೂ ರನ್ನರ್ಸ್ ತಂಡ A.R.P ನ್ಯಾಶ್ 1.5 ಲಕ್ಷ ಸಹಿತ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು.

ಫೈನಲ್ ತಂಡದ ಪಂದ್ಯಶ್ರೇಷ್ಟ ಪ್ರಶಸ್ತಿ ಶಾಬುದ್ದೀನ್ ಪಡೆದುಕೊಂಡರೆ ಕ್ರಮವಾಗಿ ಬೆಸ್ಟ್ ಬೌಲರ್ ಮೈಟಿ ಕೃಷ್ಣ, ಸರಣಿ ಶ್ರೇಷ್ಠ ಮೈಟಿ ಸ್ಯಾಂಡಿ,ಬೆಸ್ಟ್ ಬ್ಯಾಟ್ಸ್‌ಮನ್ A.R.P ನ್ಯಾಶ್ ನ ಶ್ರೀಕಾಂತ್ ಪಡೆದುಕೊಂಡರು.

ವಿಜೇತರಿಗೆ ದಿ| ರಂಗಣ್ಣ ಹಾಗೂ ದಿ|ಹನುಮಂತರಾಯಪ್ಪ ಕುಟುಂಬಸ್ಥರು ಬಹುಮಾನ ವಿತರಿಸಿದರು. ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಜನತಾದಳದ ಅಧ್ಯಕ್ಷ ಶ್ರೀಯುತ ಜಿ.ಗುರುಪ್ರಸಾದ್ ಸಾರಥ್ಯದಲ್ಲಿ,ಶ್ರೀ ನಿತೇಶ್ ಹಾಗೂ ಸಂಗಡಿಗರ ಸಹಕಾರದೊಂದಿಗೆ ಈ ವ್ಯವಸ್ಥಿತ ಪಂದ್ಯಾಕೂಟ ಭರ್ಜರಿ ಯಶಸ್ಸು ಸಾಧಿಸಿ,ಜನಮೆಚ್ಚುಗೆಗೆ ಪಾತ್ರವಾಯಿತು.

ಸಚಿನ್ ಮಹಾದೇವ್ ನೇತೃತ್ವದ M.Sports ಯೂಟ್ಯೂಬ್ ಚಾನೆಲ್ ಪಂದ್ಯಾಕೂಟದ ನೇರಪ್ರಸಾರವನ್ನು ಬಿತ್ತರಿಸಿ,ವಿಶ್ವದಾದ್ಯಂತ ಸುಮಾರು 40,000 ಕ್ರೀಡಾಭಿಮಾನಿಗಳು ಪಂದ್ಯಾಕೂಟ ವೀಕ್ಷಿಸಿದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 − twelve =

Latest news

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...
- Advertisement -spot_imgspot_img

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

Must read

- Advertisement -spot_imgspot_img

You might also likeRELATED
Recommended to you