ಕ್ರಿಕೆಟ್ರಣಜಿ ಟ್ರೋಫಿ: ಶ್ರೇಯಸ್ ಗೋಪಾಲ್‌ಗೆ 8 ವಿಕೆಟ್.. ಶಿಖರ್ ಶೆಟ್ಟಿಗೆ ಚೊಚ್ಚಲ...

ರಣಜಿ ಟ್ರೋಫಿ: ಶ್ರೇಯಸ್ ಗೋಪಾಲ್‌ಗೆ 8 ವಿಕೆಟ್.. ಶಿಖರ್ ಶೆಟ್ಟಿಗೆ ಚೊಚ್ಚಲ ರಣಜಿ ವಿಕೆಟ್ ಸಂಭ್ರಮ

-

- Advertisment -spot_img

ರಣಜಿ ಟ್ರೋಫಿ: ಶ್ರೇಯಸ್ ಗೋಪಾಲ್‌ಗೆ 8 ವಿಕೆಟ್.. ಶಿಖರ್ ಶೆಟ್ಟಿಗೆ ಚೊಚ್ಚಲ ರಣಜಿ ವಿಕೆಟ್ ಸಂಭ್ರಮ

ಕುಂದಾಪುರದ ಹುಡುಗ ಶಿಖರ್ ಶೆಟ್ಟಿ ರಣಜಿ ವೃತ್ತಿಜೀವನದಲ್ಲಿ ಚೊಚ್ಚಲ ವಿಕೆಟ್ ಬೇಟೆಯಾಡಿದ್ದಾರೆ. ರಾಜ್’ಕೋಟ್’ನಲ್ಲಿ ನಡೆಯುತ್ತಿರುವ ಸೌರಾಷ್ಟ್ರ ವಿರುದ್ಧದ ರಣಜಿ ಪಂದ್ಯದ ಮೂರನೇ ದಿನ ಸೌರಾಷ್ಟ್ರ ತಂಡದ ನಾಯಕ ಜೈದೇವ್ ಉನಾದ್ಕಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಶಿಖರ್ ಶೆಟ್ಟಿ ಪ್ರಥಮದರ್ಜೆ ಕ್ರಿಕೆಟ್’ನಲ್ಲಿ ಮೊದಲ ವಿಕೆಟ್ ತಮ್ಮದಾಗಿಸಿಕೊಂಡರು.

ಪಂದ್ಯದ 2ನೇ ದಿನ ಬ್ಯಾಟಿಂಗ್’ನಲ್ಲಿ ಮಿಂಚಿದ್ದ ಶಿಖರ್ ಶೆಟ್ಟಿ 9ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದು 57 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್’ಗಳ ನೆರವಿನಿಂದ 41 ರನ್ ಗಳಿಸಿ ಚೊಚ್ಚಲ ರಣಜಿ ಪಂದ್ಯವನ್ನೇ ಸ್ಮರಣೀಯವಾಗಿಸಿಕೊಂಡಿದ್ದಾರೆ. ಕರ್ನಾಟಕ ಪರ ಅನುಭವಿ ಲೆಗ್ ಸ್ಪಿನ್ ಆಲ್ರೌಂಡರ್ ಶ್ರೇಯಸ್ ಗೋಪಾಲ್ 110 ರನ್ನಿಗೆ 8 ವಿಕೆಟ್ ಪಡೆದು ಮಿಂಚಿದರು.

ಕರ್ನಾಟಕದ 373 ರನ್’ಗಳಿಗೆ ಪ್ರತಿಯಾಗಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಂದ 3ನೇ ದಿನದಾಟ ಮುಂದುವರಿಸಿದ ಸೌರಾಷ್ಟ್ರ ಶ್ರೇಯಸ್ ಗೋಪಾಲ್ ದಾಳಿಗೆ ತತ್ತರಿಸಿ 376 ರನ್’ಗಳಿಗೆ ಆಲೌಟಾಗಿ ಕೇವಲ 4 ರನ್’ಗಳ ಇನ್ನಿಂಗ್ಸ್ ಮುನ್ನಡೆ ಸಂಪಾದಿಸಿತು. 342 ರನ್ನಿಗೆ 9 ವಿಕೆಟ್ ಕಳೆದುಕೊಂಡಿದ್ದ ಸೌರಾಷ್ಟ್ರಕ್ಕೆ ಚೇತನ್ ಸಕಾರಿಯಾ ಮತ್ತು ಯುವಾರಾಜ್ ಸಿನ್ಹ್ ದೋಡಿಯಾ 10ನೇ ವಿಕೆಟ್’ಗೆ 34 ರನ್ ಸೇರಿಸಿ ಇನ್ನಿಂಗ್ಸ್ ಮುನ್ನಡೆ ತಂದುಕೊಟ್ಟರು.

4 ರನ್’ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಸರದಿ ಆರಂಭಿಸಿರುವ ಕರ್ನಾಟಕ ತಂಡ 3ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 89 ರನ್ ಗಳಿಸಿದೆ. ಕರ್ನಾಟಕದ ದ್ವಿತೀಯ ಇನ್ನಿಂಗ್ಸ್’ನಲ್ಲಿ ನಿಕಿನ್ ಜೋಸ್ 34 ರನ್ ಗಳಿಸಿ ಔಟಾದರೆ ನಾಯಕ ಮಯಾಂಕ್ ಅಗರ್ವಾಲ್ ಅಜೇಯ 31 ರನ್ ಮತ್ತು ದೇವದತ್ ಪಡಿಕ್ಕಲ್ ಅಜೇಯ 18 ರನ್’ಗಳೊಂದಿಗೆ ಅಂತಿಮ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಪಂದ್ಯ ಡ್ರಾಗೊಳ್ಳುವ ಸಾಧ್ಯತೆಗಳೇ ಹೆಚ್ಚಿದ್ದು, ಇನ್ನಿಂಗ್ಸ್ ಹಿನ್ನಡೆಯ ಆಧಾರದಲ್ಲಿ ಕರ್ನಾಟಕ ಕೇವಲ 1 ಅಂಕಕ್ಕಷ್ಟೇ ತೃಪ್ತಿ ಪಟ್ಟುಕೊಳ್ಳಬೇಕಿದೆ.

LEAVE A REPLY

Please enter your comment!
Please enter your name here

eighteen − one =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you