Action Replayಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ, ಸೂಪರ್ ಸಿಕ್ಸ್‌ ಕಣದಲ್ಲಿರುವ...

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ, ಸೂಪರ್ ಸಿಕ್ಸ್‌ ಕಣದಲ್ಲಿರುವ ರವಿ ಶಾಸ್ತ್ರಿ

-

- Advertisment -spot_img

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ ಕಪಿಲ್‌ ದೇವ್ ನಾಯಕತ್ವದ ಕ್ರಿಕೆಟ್ ಸಲಹಾ ಸಮಿತಿಯು ಮಂಗಳವಾರ ಮಹತ್ವದ ಹೆಜ್ಜೆ ಇಟ್ಟಿದೆ. ಆಕಾಂಕ್ಷಿಗಳ ದೊಡ್ಡ ಪಟ್ಟಿಯಿಂದ ಆರು ಮಂದಿಯನ್ನು ಆಯ್ಕೆ ಮಾಡಿ ಅಂತಿಮ ಸುತ್ತಿನ ಪರೀಕ್ಷೆಗೆ ಸಿದ್ದತೆ ನಡೆಸಿದೆ. ಪ್ರಸ್ತುತ ಭಾರತ ತಂಡದ ಮುಖ್ಯಕೋಚ್ ಆಗಿರುವ ರವಿಶಾಸ್ತ್ರಿ ಈ ಪಟ್ಟಿಯಲ್ಲಿದ್ದಾರೆ.

ಅವರಲ್ಲದೇ ಭಾರತದ ಲಾಲಚಂದ್ ರಜಪೂತ್ ಮತ್ತು ರಾಬಿನ್‌ ಸಿಂಗ್ ಕೂಡ ಸ್ಪರ್ಧೆಯಲ್ಲಿದ್ದಾರೆ. ನ್ಯೂಜಿಲೆಂಡ್ ತಂಡದ ಮಾಜಿ ಕೋಚ್ ಮೈಕ್ ಹೆಸನ್, ಆಸ್ಟ್ರೇಲಿಯಾದ ಆಲ್‌ರೌಂಡರ್ ಮತ್ತು ಶ್ರೀಲಂಕಾ ಕೋಚ್ ಟಾಮ್ ಮೂಡಿ ಹಾಗೂ ವೆಸ್ಟ್ ಇಂಡೀಸ್‌ನ ಫಿಲ್ ಸಿಮನ್ಸ್‌ ಅವರು ಸ್ಪರ್ಧೆಯಲ್ಲಿದ್ದಾರೆ. ಇದರಿಂದಾಗಿ ಮೂವರು ದೇಶಿ ಮತ್ತು ಮೂವರು ವಿದೇಶಿ ಕೋಚ್‌ಗಳಿಗೆ ಅಂತಿಮ ಸುತ್ತಿನಲ್ಲಿ ಪರೀಕ್ಷೆ ನಡೆಯಲಿದೆ.

ಈ ಅಭ್ಯರ್ಥಿಗಳು ತಮ್ಮ ಅನುಭವ, ಆಟದ ಜ್ಞಾನ ಮತ್ತು ಕೋಚ್ ಆದರೆ ಭವಿಷ್ಯದ ಯೋಜನೆಗಳ ಕುರಿತ ಮಾಹಿತಿಗಳನ್ನು ಸಿಎಸಿ ಮುಂದೆ ಪ್ರಸ್ತುತಪಡಿಸಬೇಕು. ಸಿಎಸಿಯಲ್ಲಿ ಕಪಿಲ್ ದೇವ್ ಅವರೊಂದಿಗೆ ಹಿರಿಯ ಕ್ರಿಕೆಟಿಗ ಅನ್ಷುಮನ್ ಗಾಯಕವಾಡ್ ಮತ್ತು ಹಿರಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಶಾಂತಾ ರಂಗಸ್ವಾಮಿ ಇದ್ದಾರೆ.

2007ರಲ್ಲಿ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಭಾರತ ತಂಡವು ಟ್ವೆಂಟಿ–20 ವಿಶ್ವಕಪ್ ಗೆದ್ದಾಗ ರಾಬಿನ್ ಸಿಂಗ್ ಫೀಲ್ಡಿಂಗ್ ಕೋಚ್ ಆಗಿದ್ದರು. ರಜಪೂತ್ ಅವರು ಮುಖ್ಯ ಕೋಚ್ ಆಗಿದ್ದರು. ರಜಪೂತ್ ಅವರು ಅಫ್ಗಾ ನಿಸ್ತಾನ ಮತ್ತು ಜಿಂಬಾಬ್ವೆ ತಂಡಗಳಿಗೂ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಸದ್ಯ ‘ಸೂಪರ್ ಸಿಕ್ಸ್‌’ ಕಣದಲ್ಲಿರುವ ಎಲ್ಲ ಅಭ್ಯರ್ಥಿಗಳೂ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅಲ್ಲದೇ ಕೋಚ್ ಆಗಿ ಕಾರ್ಯನಿರ್ವಹಿಸಿರುವ ಅನುಭವವೂ ಅವರಿಗೆ ಇದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two + nineteen =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you