ಕ್ರಿಕೆಟ್RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

-

- Advertisment -spot_img
ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು ವಿಕೆಟ್. ಅದೂ ರಾಕ್ಷಸ ದಾಂಡಿಗರ ದಂಡನ್ನೇ ಹೊಂದಿರುವ ಅತಿ ಬಲಿಷ್ಠ #kkr ವಿರುದ್ಧ.
ಇಂಥಾ ಒಂದು spirited ಬೌಲಿಂಗ್ ಪ್ರದರ್ಶನ ತೋರಿದ ಒಬ್ಬ ಬೌಲರ್, ಮುಂದಿನ ಪಂದ್ಯದಲ್ಲಿ ಬೆಂಚ್ ಕಾಯಿಸುವಂತೆ ಮಾಡುವುದು ಸಾಧ್ಯವೇ..? ಕ್ರಿಕೆಟ್ ಬಗ್ಗೆ ಕನಿಷ್ಠ ಜ್ಞಾನವಿರುವ ಯಾರೇ ಆದರೂ ಆ ಆಟಗಾರನನ್ನು  ಎರಡನೇ ಯೋಚನೆಯೇ ಇಲ್ಲದೆ ಮುಂದಿನ ಪಂದ್ಯದಲ್ಲಿ ಆಡಿಸಿ ಬಿಡುತ್ತಾರೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ think tankಗೆ ಆ ಕನಿಷ್ಠ ಜ್ಞಾನವೇ ಇದ್ದಂತೆ ಕಾಣುತ್ತಿಲ್ಲ. ಕೆಕೆಆರ್ ವಿರುದ್ಧ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದ ‘ಕನ್ನಡಿಗ’ ವೈಶಾಖ್ ವಿಜಯ್ ಕುಮಾರ್’ನನ್ನು ನಿನ್ನೆ ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಆಡಿಸದಿರುವುದು ದೊಡ್ಡ ಅಚ್ಚರಿ.
ಸ್ಲೋ ಬೌನ್ಸರ್ಸ್, knuckle ಬಾಲ್ ಸಹಿತ ಬೌಲಿಂಗ್’ನಲ್ಲಿ ಸಾಕಷ್ಟು variationಗಳನ್ನು ಹೊಂದಿರುವ ವೈಶಾಖ್, RCBಯ ಸ್ಟಾರ್ಟಿಂಗ್ XIನಲ್ಲಿ ಆಡುವ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಪ್ರತಿಭಾವಂತ ಫಾಸ್ಟ್ ಬೌಲರ್. ಆದರೆ ಲಕ್ನೋ ವಿರುದ್ಧದ ಪಂದ್ಯದಲ್ಲಿ ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ವೈಶಾಖ್’ನನ್ನು ಆಡುವ ಬಳಗದಿಂದ ಹೊರಗಿಡಲಾಗಿತ್ತು. ಹೋಗಲಿ, impact ಆಟಗಾರನನ್ನಾಗಿ ಆಡಿಸಿದರಾ..? ಅದೂ ಇಲ್ಲ.
ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಇರುವುದೇ ಇಬ್ಬರು ಕನ್ನಡಿಗರು. ಒಬ್ಬ ವೈಶಾಖ್, ಇನ್ನೊಬ್ಬ ಮನೋಜ್ ಭಾಂಡಗೆ. ರಾಯಚೂರಿನ ಭಾಂಡಗೆ ಕಳೆದೆರಡು ವರ್ಷಗಳಲ್ಲಿ ಬೆಂಚ್ ಕಾಯಿಸಿದ್ದೇ ಬಂತು. ವೈಶಾಖ್’ನನ್ನಾದರೂ ನಿರಂತರ ಪಂದ್ಯಗಳಲ್ಲಿ ಆಡಿಸುತ್ತಾರೆ ಎಂದರೆ, ಅದೂ ಸುಳ್ಳಾಗಿದೆ. ಚೆನ್ನಾಗಿ ಆಡಿದ ಮೇಲೂ ಕಡೆಗಣಿಸುತ್ತಾರೆ ಎಂದರೆ rcb ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ.
#rcb #rcbfans #rcbforever #ipl #ipl2024 #vyshakvijaykumar #KarnatakaCricket

LEAVE A REPLY

Please enter your comment!
Please enter your name here

twelve + sixteen =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you