18.5 C
London
Monday, May 20, 2024
Homeಕ್ರಿಕೆಟ್ಆರ್‌ಸಿಬಿ- ದಿ ಕ್ವೀನ್ಸ್ ಆಫ್ ದಿ ಫೀಲ್ಡ್!

ಆರ್‌ಸಿಬಿ- ದಿ ಕ್ವೀನ್ಸ್ ಆಫ್ ದಿ ಫೀಲ್ಡ್!

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
2024ರ ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಿದವು.  ಕೊನೆಯ ಹಂತದವರೆಗೂ ಬಾರಿ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ  ರಾಯಲ್ ಚಾಲೆಂಜರ್ಸ್ ಡೆಲ್ಲಿ ಕ್ಯಾಪಿಟಲ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿ, ಚೊಚ್ಚಲ ಪ್ರಶಸ್ತಿಯನ್ನು ಎತ್ತಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ  ನೀಡಿದ್ರು, ಆರ್‌ಸಿಬಿಯ ನಮ್ಮ ಕನ್ನಡತಿ ಶ್ರೇಯಾಂಕಾ ಪಾಟೀಲ್ DCಯ ಬ್ಯಾಟಿಂಗ್ ಲೈನ್ ಅಪ್ ಗೆ ಬ್ರೇಕ್ ನೀಡಿದರು. RCB ಬೌಲಿಂಗ್ ದಾಳಿಗೆ DC ತತ್ತರಗೊಂಡಿತು. ಬೆಂಕಿ ಬೌಲಿಂಗ್ ಮಾಡಿದ ಆರ್ ಸಿ ಬಿ ಪಡೆ ಯಾವುದೇ ಎಡವಟ್ಟು ಮಾಡದೆ ಪಂದ್ಯವನ್ನು ಗೆದ್ದುಕೊಂಡು  ಟ್ರೋಫಿಗೆ ಮುತ್ತಿಕ್ಕಿ 16 ವರ್ಷಗಳ ಕನಸನ್ನು ನನಸಾಗಿಸಿತು. ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಕ್ರಿಪ್ಟ್ ಇತಿಹಾಸ, ಅದ್ಭುತ ಶೈಲಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ! 
ಕನಸು ಈಡೇರಿದೆ. 16 ವರ್ಷಗಳ ಟ್ರೋಫಿ ಬರ ನೀಗಿಸಿದ ಆರ್‌ಸಿಬಿ ಗರ್ಲ್ಸ್ ತಂಡಕ್ಕೆ ಅಭಿನಂದನೆಗಳು.ಬೆನ್ನು ತಟ್ಟಲೇಬೇಕು: ಕಂಗ್ರಾಜುಲೇಷನ್ಸ್ ಹೇಳಲೇಬೇಕು  ಆರ್‌ಸಿಬಿ ಸಿಂಹಿಣಿಯರಿಗೆ…ನಮ್ಮ ಆರ್‌ಸಿಬಿಯ ಆಪತ್ಬಾಂಧವಿ ಎಲ್ಲಿಸ್ ಪೆರ್ರಿ ಮತ್ತು ಕನ್ನಡತಿ ಶ್ರೇಯಾಂಕಾ ಪಾಟೀಲ್  ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಒಡತಿಯರಾದರು. WPL-T20 ಫೈನಲ್‌ನಲ್ಲಿ ಜಯಗಳಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಟ್ರೋಫಿಯೊಂದಿಗೆ ಸಂಭ್ರಮಿಸಿದರು!  ತಮ್ಮ ತಂಡವು ಜಯ ಸಾಧಿಸುತ್ತಿದ್ದಂತೆ RCB ಅಭಿಮಾನಿಗಳು ಸಂತೋಷದ ಸಂಭ್ರಮದಲ್ಲಿದ್ದಾರೆ! 
ಆರ್‌ಸಿಬಿ ಅಭಿಮಾನಿಗಳು ಪದೇ ಪದೇ ಹೇಳುವ ‘ಈ ಸಲ ಕಪ್‌ ನಮ್ದೇ’ ಎಂಬ ಘೋಷ ವಾಕ್ಯವನ್ನು ಸ್ಮೃತಿ ಮಂಧಾನ ‘ಈ ಸಲ ಕಪ್‌ ನಮ್ದು’ ಎಂದು ಬದಲಿಸಿದರು.
ಹೆಣ್ಮಕ್ಕಳೇ ಸ್ಟ್ರಾಂಗ್ ಗುರು… 
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × 2 =